ಬೆಟ್ಟದ ಮೇಲೊಂದು ಮನೆಯ ಮಾಡಿ,
ಮೃಗಂಗಳಿಗಂಜಿದೊಡೆಂತಯ್ಯ?
ಸಮುದ್ರದ ತಡಿಯಲೊಂದು ಮನೆಯ ಮಾಡಿ, ನೊರೆತೆರೆಗಳಿಗಂಜಿದೊಡೆಂತಯ್ಯ?
ಸಂತೆಯೊಳಗೊಂದು ಮನೆಯ ಮಾಡಿ,
ಶಬ್ದಕ್ಕೆ ನಾಚಿದೊಡೆಂತಯ್ಯ?
ಚೆನ್ನಮಲ್ಲಿಕಾಜುನದೇವ ಕೇಳಯ್ಯ
ಲೋಕದೊಳಗೆ ಹುಟ್ಟಿದ ಬಳಿಕ, ಸ್ತುತಿ-ನಿಂದೆಗಳು ಬಂದರೆ
ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು
#ಅಕ್ಕಮಹಾದೇವಿ.
#ವಚನ