ಹಡಗನ್ನು ಮುಳುಗಿಸಿದ ಶಾಂಪೇನ್

ನಮ್ಮ ಪಕ್ಕದ ಮನೆಯ ರಂಗಣ್ಣ ಹೊಸ “ಸುವೇಗ” ಮೊಪೆಡ್ ಕೊಂಡಾಗ ಮಾಡಿದ್ದು ಹೀಗೆ. ಒಂದು ಜಮಾನಾದಲ್ಲಿ ಸುವೇಗ ಕೊಳ್ಳೋದು ಒಂದು ಸಾಧನೆಯೇ. ಬಹಳ ಉತ್ಸಾಹ, ಹೆಮ್ಮೆಯಿಂದ ಮನೆಗೆ ತಂದಾಗ ಅವನ ಹೆಂಡತಿ ಆರತಿ ಎತ್ತಿ, ಕಾಯಿ ಒಡೆದು, ಹೂವಿನ ಹಾರ ಹಾಕಿದ ನಂತರ ಒಂದು ನಿಂಬೆ ಹಣ್ಣನ್ನು ಚಕ್ರದಡಿ ಇಟ್ಟು ಸುವೇಗ ಅದರ ಮೇಲೆ ಓಡಿಸಲು ಆದೇಶಿಸಿದಳು. ನನ್ನ ಸೋದರ ಮಾವ ಕಾರು ಕೊಂಡಾಗ ನಿಂಬೆ ಹಣ್ಣಿನ ಮೇಲೆ ಕಾರನ್ನು ಚಲಾಯಿಸಿ ‘ದರ್ಗಾ’ ದರ್ಶನ ಮಾಡಿಸಲು ಕಾರನ್ನು ಓಡಿಸಿ ಕೊಂಡು ಹೋಗಿದ್ದು ನೆನಪಿದೆ. ನಿಂಬೆ ಹಣ್ಣು ಸುವೇಗ ಭಾರಕ್ಕೆ burst ಆಗಿ ಅಪ್ಪಚ್ಚಿಯಾದರೆ ಒಳ್ಳೆಯದು, ಇಲ್ಲದಿದ್ದರೆ unlucky ಎಂದು ಅವಕೃಪೆ ಸುವೆಗಾದ ಮೇಲೂ, ಹೊಸ ಕಾರಿನ ಮೇಲೂ ಬೀಳಬಹುದೇನೋ? ಹೇಗೇ ಇರಲಿ, ಸಂಪ್ರದಾಯ ಎಂದ ಮೇಲೆ ಜನ ನಿಷ್ಠೆಯಿಂದ ಪರಿಪಾಲನೆ ಮಾಡುತ್ತಾರೆ, ಅದೆಷ್ಟೇ ನಗೆಪಾಟಲಾದರೂ ಕೂಡಾ. ಹಡಗಿನ ಶೀರ್ಷಿಕೆ ಕೊಟ್ಟು ಹಳೇ ಕಾಲದ ಬೆಡಗಿನ ಮೊಪೆಡ್ ಬಗ್ಗೆ ಏಕೆ ಪಂಚಾಯತಿ ಎಂದಿರೋ? ಇಲ್ಲಿದೆ ನೋಡಿ ಕಥೆ.

ಪ್ರತೀದಿನ ಮನೆಯಿಂದ, ಆಫೀಸು, ಆಫಿಸಿನಿಂದ ಮನೆ, ಅದರ ಮಧ್ಯೆ ಕೆಲಸದ ನಿಮಿತ್ತ ಓಡಾಟ, ಸರಾಸರಿ ದಿನಕ್ಕೆ ೨೦೦ ಕಿಲೋ ಮೀಟರ್ ಗಳಷ್ಟು. ಈ errand ಗಳಿಗೆ ಸಂಗಾತಿಯಾಗಿ ಕಾರಿನ ರೇಡಿಯೋ. ಸಂಗೀತ ಕೇಳಲು ಅಮೇರಿಕನ್ ಆರ್ಮ್ಡ್ ಫೋರ್ಸಸ್ ಚಾನಲ್, ಮತ್ತು ವಿಶ್ವದ ಆಗುಹೋಗುಗಳ ಬಗ್ಗೆ tuned ಆಗಿರಲು NPR. ಅಮೆರಿಕೆಯ NPR ತೆರನಾದ ರೇಡಿಯೋ ಭಾರತದಲ್ಲಿ ಇರಲು ಸಾಧ್ಯವಿಲ್ಲ ಎಂದು ಧೈರ್ಯವಾಗಿ ಹೇಳಬಲ್ಲೆ. ಅಷ್ಟೊಂದು ವೃತ್ತಿಪರತೆ ಮತ್ತು ಅಮೋಘ ಕಾರ್ಯಕ್ರಮಗಳು. ಇಟಲಿಯ (ನಮ್ಮ ಬೀಗರ ದೇಶ) ತೀರದಲ್ಲಿ ಲಕ್ಷುರಿ ಲೈನರ್ ಹಡಗು ತೀರಕ್ಕೆ ಅಪ್ಪಳಿಸಿ ಮೂರು ಜನ ಸತ್ತರು ಎನ್ನುವ ಸುದ್ದಿ ಬಂತು. ಒಂದೂವರೆ ಲಕ್ಷ ಟನ್ನು ಭಾರದ ಸರಕುಗಳನ್ನೂ, ನಾಲ್ಕು ಸಾವಿರ ಜನರನ್ನೂ ಹೊತ್ತು ಸಾಗಬಲ್ಲ ಈ floating village ಅತ್ಯಾಧುನಿಕ NAVIGATION ತಂತ್ರಜ್ಞಾನ ಹೊಂದಿತ್ತು. ಆಕಸ್ಮಾತ್ ಆಗಿ ಹಡಗಿಗೆ ಅಪಾಯಕಾರಿಯಾಗುವ ಯಾವುದೇ ಸನ್ನಿವೇಶವನ್ನೂ ಎದುರಿಸುವ ತಂತ್ರಜ್ಞಾನ ಇದ್ದೂ ಎಡವಿದ್ದು ಎಲ್ಲಿ ಎಂದು ತಜ್ಞರ ತಲೆಕೆರೆತ.

“ಕೋಸ್ಟ ಕಾನ್ಕೊರ್ಡಿಯಾ” ಹೆಸರಿನ ಹಡಗು ಮುಳುಗಲು ಆರಂಭವಾದ ಕೂಡಲೇ ಪ್ರಯಾಣಿಕರನ್ನು ರಕ್ಷಿಸುವ ಬದಲು ಎಲ್ಲರಿಗಿಂತ ಮುಂಚೆ ತೀರಕ್ಕೆ ಹಾರಿ ಬಚಾವ್ ಆದ ಶೂರ ೫೨ ರ ಪ್ರಾಯದ ಕ್ಯಾಪ್ಟನ್ ನನ್ನು ಬಂಧನದಲ್ಲಿರಿಸಿ ವಿಚಾರಣೆ ನಡೆಯುತ್ತಿದೆ. ಈ ಅತ್ಯಾಧುನಿಕ ಹಡಗು ಹೊಸತೂ ಹೌದು. ಇದರ ಚೊಚ್ಚಲ ಪ್ರಯಾಣದ ವೇಳೆ, ನಮ್ಮ ಸುವೇಗಾ ಥರ, ಹಡಗಿನ ಮೇಲ್ಮೆ ಮೇಲೆ ಶಾಂಪೇನ್ ಬಾಟಲಿ ಎಸೆಯುತ್ತಾರಂತೆ. ಇದು ಸಂಪ್ರದಾಯ. ನಮ್ಮ ನಿಂಬೆ ಹಣ್ಣಿನ ರೀತಿ. ಶಾಂಪೇನ್ ಬಾಟಲಿ ಒಡೆದು ಚೂರಾದರೆ ಶಕುನ. ಬಾಟಲಿ ಒಡೆಯದಿದ್ದರೆ unlucky. ಕೋಸ್ಟ ಕಾನ್ಕೊರ್ಡಿಯಾ ದ ಮೇಲೆ ಬಿದ್ದ ಶಾಂಪೇನ್ ಬಾಟಲಿ ಒಡೆಯಲಿಲ್ಲ. ಬಾಟಲಿ ಒಡೆಯದೆ ಹಡಗು ದುರಾದೃಷ್ಟ ದ ಹಣೆ ಪಟ್ಟಿ ಅಂಟಿಸಿಕೊಂಡಿತು. ಪ್ರಶಾಂತ “ಟಸ್ಕನ್” ದ್ವೀಪದ ಸನಿಹ ಮುಳುಗು ಹಾಕಿತು. ಈ ಹಡಗು ಸ್ಥಿಮಿತ ತಪ್ಪಿ ವಾಲುತ್ತಿದ್ದಂತೆ ಸುತ್ತಲೂ rescue boat ಗಳು, ಹೆಲಿಕಾಪ್ಟರ್ ಗಳು ಬಂದು ಅಪಾರ ಜೀವಹಾನಿಯನ್ನು ತಡೆದವು. ಕೆಲ ವರ್ಷಗಳ ಹಿಂದೆ ರಾಜಸ್ಥಾನದಲ್ಲಿ ಪ್ರವಾಹಕ್ಕೆ ಸಿಕ್ಕಿಹಾಕಿಕೊಂಡ ಏಳೆಂಟು ಜನರನ್ನು ಭಾರ್ತಿ ೪೮ ಘಂಟೆಗಳ ಸಮಯವಿದ್ದೂ ರಕ್ಷಿಸಲಾಗದೆ ಜಲಸಮಾಧಿ ಆಗಿದ್ದು ನೆನಪಿದೆ. ಇವರು ಜಲಸಮಾಧಿ ಆದಾಗ ಅಲ್ಲಿ ಮಂತ್ರಿ ಮಹೋದಯರೂ ಇದ್ದರು, ಇದರ ಬಗ್ಗೆ ಟೀಕೆ ಬಂದಾಗ ಮುಖ್ಯಮಂತ್ರಿ ವಸುಂಧರಾ ರಾಜೆ ಕೆರಳಿ ಮಂತ್ರಿ ಯೂ ಅವರ ಜೊತೆ ಮುಳುಗಿ ಸಾಯಬೇಕಿತ್ತೇನೋ ಎಂದು ಕೆರಳಿ ಕೇಳಿದ್ದೂ ನೆನಪಿದೆ. ನಮ್ಮಲ್ಲಿ ಮನುಷ್ಯನ ಜೀವಕ್ಕೆ ಬೆಲೆಯಿಲ್ಲ. ಮುಖ್ಯಮಂತ್ರಿಯ ಹೇಳಿ ಕಾಪ್ಟರ್ ಲ್ಯಾಂಡ್ ಆಗಲು ಒಂದೆರಡು ಘಂಟೆ ತಡವಾದರೆ ವಾಯುಪಡೆ, ಭೂಪಡೆ ಸೇರಿ ಇಡೀ ದೇಶದ ವ್ಯವಸ್ಥೆಯೇ ಸನ್ನದ್ಧ. ನಮ್ಮ ಪಕ್ಕದ ಮನೆಯ ರಂಗಣ್ಣ ಹೊಸ “ಸುವೇಗ” ಮೊಪೆಡ್ ಕೊಂಡಾಗ ಮಾಡಿದ್ದು ಹೀಗೆ. ಒಂದು ಜಮಾನಾದಲ್ಲಿ ಸುವೇಗ ಕೊಳ್ಳೋದು ಒಂದು ಸಾಧನೆಯೇ. ಬಹಳ ಉತ್ಸಾಹ, ಹೆಮ್ಮೆಯಿಂದ ಮನೆಗೆ ತಂದಾಗ ಅವನ ಹೆಂಡತಿ ಆರತಿ ಎತ್ತಿ, ಕಾಯಿ ಒಡೆದು, ಹೂವಿನ ಹಾರ ಹಾಕಿದ ನಂತರ ಒಂದು ನಿಂಬೆ ಹಣ್ಣನ್ನು ಚಕ್ರದಡಿ ಇಟ್ಟು ಸುವೇಗ ಅದರ ಮೇಲೆ ಓಡಿಸಲು ಆದೇಶಿಸಿದಳು. ನನ್ನ ಸೋದರ ಮಾವ ಕಾರು ಕೊಂಡಾಗ ನಿಂಬೆ ಹಣ್ಣಿನ ಮೇಲೆ ಕಾರನ್ನು ಚಲಾಯಿಸಿ ದರ್ಗಾ ದರ್ಶನ ಮಾಡಿಸಲು ಕಾರನ್ನು ಓಡಿಸಿ ಕೊಂಡು ಹೋಗಿದ್ದು ನೆನಪಿದೆ. ನಿಂಬೆ ಹಣ್ಣು ಸುವೇಗ ಭಾರಕ್ಕೆ burst ಆಗಿ ಅಪ್ಪಚ್ಚಿಯಾದರೆ ಒಳ್ಳೆಯದು, ಇಲ್ಲದಿದ್ದರೆ unlucky ಎಂದು ಅವಕೃಪೆ ಸುವೆಗಾದ ಮೇಲೂ, ಹೊಸ ಕಾರಿನ ಮೇಲೂ ಬೀಳಬಹುದೇನೋ? ಹೇಗೇ ಇರಲಿ, ಸಂಪ್ರದಾಯ ಎಂದ ಮೇಲೆ ಜನ ನಿಷ್ಠೆಯಿಂದ ಪರಿಪಾಲನೆ ಮಾಡುತ್ತಾರೆ, ಅದೆಷ್ಟೇ ನಗೆಪಾಟಲಾದರೂ ಕೂಡಾ. ಹಡಗಿನ ಶೀರ್ಷಿಕೆ ಕೊಟ್ಟು ಹಳೇ ಕಾಲದ ಬೆಡಗಿನ ಮೊಪೆಡ್ ಬಗ್ಗೆ ಏಕೆ ಪಂಚಾಯತಿ ಎಂದಿರೋ? ಇಲ್ಲಿದೆ ನೋಡಿ ಕಥೆ.

ಪ್ರತೀದಿನ ಮನೆಯಿಂದ, ಆಫೀಸು, ಆಫಿಸಿನಿಂದ ಮನೆ, ಅದರ ಮಧ್ಯೆ ಕೆಲಸದ ನಿಮಿತ್ತ ಓಡಾಟ, ಸರಾಸರಿ ದಿನಕ್ಕೆ ೨೦೦ ಕಿಲೋ ಮೀಟರ್ ಗಳಷ್ಟು. ಈ errand ಗಳಿಗೆ ಸಂಗಾತಿಯಾಗಿ ಕಾರಿನ ರೇಡಿಯೋ. ಸಂಗೀತ ಕೇಳಲು ಅಮೇರಿಕನ್ ಆರ್ಮ್ಡ್ ಫೋರ್ಸಸ್ ಚಾನಲ್, ಮತ್ತು ವಿಶ್ವದ ಆಗುಹೋಗುಗಳ ಬಗ್ಗೆ tuned ಆಗಿರಲು NPR. ಅಮೆರಿಕೆಯ NPR ತೆರನಾದ ರೇಡಿಯೋ ಭಾರತದಲ್ಲಿ ಇರಲು ಸಾಧ್ಯವಿಲ್ಲ ಎಂದು ಧೈರ್ಯವಾಗಿ ಹೇಳಬಲ್ಲೆ. ಅಷ್ಟೊಂದು ವೃತ್ತಿಪರತೆ ಮತ್ತು ಅಮೋಘ ಕಾರ್ಯಕ್ರಮಗಳು. ಇಟಲಿಯ (ನಮ್ಮ ಬೀಗರ ದೇಶ) ತೀರದಲ್ಲಿ ಲಕ್ಷುರಿ ಲೈನರ್ ಹಡಗು ತೀರಕ್ಕೆ ಅಪ್ಪಳಿಸಿ ಮೂರು ಜನ ಸತ್ತರು ಎನ್ನುವ ಸುದ್ದಿ ಬಂತು. ಒಂದೂವರೆ ಲಕ್ಷ ಟನ್ನು ಭಾರದ ಸರಕುಗಳನ್ನೂ, ನಾಲ್ಕು ಸಾವಿರ ಜನರನ್ನೂ ಹೊತ್ತು ಸಾಗಬಲ್ಲ ಈ floating village ಅತ್ಯಾಧುನಿಕ NAVIGATION ತಂತ್ರಜ್ಞಾನ ಹೊಂದಿತ್ತು. ಆಕಸ್ಮಾತ್ ಆಗಿ ಹಡಗಿಗೆ ಅಪಾಯಕಾರಿಯಾಗುವ ಯಾವುದೇ ಸನ್ನಿವೇಶವನ್ನೂ ಎದುರಿಸುವ ತಂತ್ರಜ್ಞಾನ ಇದ್ದೂ ಎಡವಿದ್ದು ಎಲ್ಲಿ ಎಂದು ತಜ್ಞರ ತಲೆಕೆರೆತ. “ಕೋಸ್ಟ ಕಾನ್ಕೊರ್ಡಿಯಾ” ಹೆಸರಿನ ಹಡಗು ಮುಳುಗಲು ಆರಂಭವಾದ ಕೂಡಲೇ ಪ್ರಯಾಣಿಕರನ್ನು ರಕ್ಷಿಸುವ ಬದಲು ಎಲ್ಲರಿಗಿಂತ ಮುಂಚೆ ತೀರಕ್ಕೆ ಹಾರಿ ಬಚಾವ್ ಆದ ಶೂರ ೫೨ ರ ಪ್ರಾಯದ ಕ್ಯಾಪ್ಟನ್ ನನ್ನು ಬಂಧನದಲ್ಲಿರಿಸಿ ವಿಚಾರಣೆ ನಡೆಯುತ್ತಿದೆ. ಈ ಅತ್ಯಾಧುನಿಕ ಹಡಗು ಹೊಸತೂ ಹೌದು. ಇದರ ಚೊಚ್ಚಲ ಪ್ರಯಾಣದ ವೇಳೆ, ನಮ್ಮ ಸುವೇಗಾ ಥರ, ಹಡಗಿನ ಮೇಲ್ಮೆ ಮೇಲೆ ಶಾಂಪೇನ್ ಬಾಟಲಿ ಎಸೆಯುತ್ತಾರಂತೆ. ಇದು ಸಂಪ್ರದಾಯ. ನಮ್ಮ ನಿಂಬೆ ಹಣ್ಣಿನ ರೀತಿ. ಶಾಂಪೇನ್ ಬಾಟಲಿ ಒಡೆದು ಚೂರಾದರೆ ಶಕುನ. ಬಾಟಲಿ ಒಡೆಯದಿದ್ದರೆ unlucky. ಕೋಸ್ಟ ಕಾನ್ಕೊರ್ಡಿಯಾ ದ ಮೇಲೆ ಬಿದ್ದ ಶಾಂಪೇನ್ ಬಾಟಲಿ ಒಡೆಯಲಿಲ್ಲ. ಬಾಟಲಿ ಒಡೆಯದೆ ಹಡಗು ದುರಾದೃಷ್ಟ ದ ಹಣೆ ಪಟ್ಟಿ ಅಂಟಿಸಿಕೊಂಡಿತು. ಪ್ರಶಾಂತ “ಟಸ್ಕನ್” ದ್ವೀಪದ ಸನಿಹ ಮುಳುಗು ಹಾಕಿತು. ಈ ಹಡಗು ಸ್ಥಿಮಿತ ತಪ್ಪಿ ವಾಲುತ್ತಿದ್ದಂತೆ ಸುತ್ತಲೂ rescue boat ಗಳು, ಹೆಲಿಕಾಪ್ಟರ್ ಗಳು ಬಂದು ಅಪಾರ ಜೀವಹಾನಿಯನ್ನು ತಡೆದವು.

ಕೆಲ ವರ್ಷಗಳ ಹಿಂದೆ ರಾಜಸ್ಥಾನದಲ್ಲಿ ಪ್ರವಾಹಕ್ಕೆ ಸಿಕ್ಕಿಹಾಕಿಕೊಂಡ ಏಳೆಂಟು ಜನರನ್ನು ಭಾರ್ತಿ ೪೮ ಘಂಟೆಗಳ ಸಮಯವಿದ್ದೂ ರಕ್ಷಿಸಲಾಗದೆ ಜಲಸಮಾಧಿ ಆಗಿದ್ದು ನೆನಪಿದೆ. ಇವರು ಜಲಸಮಾಧಿ ಆದಾಗ ಅಲ್ಲಿ ಮಂತ್ರಿ ಮಹೋದಯರೂ ಇದ್ದರು, ಇದರ ಬಗ್ಗೆ ಟೀಕೆ ಬಂದಾಗ ಮುಖ್ಯಮಂತ್ರಿ ವಸುಂಧರಾ ರಾಜೆ ಕೆರಳಿ ಮಂತ್ರಿ ಯೂ ಅವರ ಜೊತೆ ಮುಳುಗಿ ಸಾಯಬೇಕಿತ್ತೇನೋ ಎಂದು ಕೆರಳಿ ಕೇಳಿದ್ದೂ ನೆನಪಿದೆ. ನಮ್ಮಲ್ಲಿ ಮನುಷ್ಯನ ಜೀವಕ್ಕೆ ಬೆಲೆಯಿಲ್ಲ. ಮುಖ್ಯಮಂತ್ರಿಯ ಹೇಳಿ ಕಾಪ್ಟರ್ ಲ್ಯಾಂಡ್ ಆಗಲು ಒಂದೆರಡು ಘಂಟೆ ತಡವಾದರೆ ವಾಯುಪಡೆ, ಭೂಪಡೆ ಸೇರಿ ಇಡೀ ದೇಶದ ವ್ಯವಸ್ಥೆಯೇ ಸನ್ನದ್ಧ.

ಭೌತ ಶಾಸ್ತ್ರದಷ್ಟೇ ಕಠಿಣ, ಹೆಣ್ಣು

ವಿಶ್ವವಿಖ್ಯಾತ ಭೌತಶಾಸ್ತ್ರಜ್ಞ, ಮತ್ತು cosmologist ಸ್ಟೀಫನ್ ಹಾಕಿಂಗ್, ಮೊನ್ನೆಯ ಭಾನುವಾರ ೭೦ನೆ ಜನ್ಮ ದಿನಾಚರಣೆ ಆಚರಿಸಿದರು. ಸರ್ ಐಸಾಕ್ ನ್ಯೂಟನ್ ನಂತರದ ಅತ್ಯಂತ ಪ್ರತಿಭಾವಂತ ವಿಜಾನಿ ಎಂದು ಪರಿಗಣಿಸಲ್ಪಡುವ ಸ್ಟೀಫನ್ ಹಾಕಿಂಗ್ ಬ್ರಿಟಿಶ್ ಪ್ರಜೆ.

ಭೌತಶಾಸ್ತ್ರ ಅಥವಾ ಬ್ರಹ್ಮಾಂಡ ಶಾಸ್ತ್ರ ನನ್ನ ಕೈಗೆಟುಕುವ ಮಾತಲ್ಲ. ಇವೆರಡೂ ಇಮಾಂ ಸಾಹೇಬರಿಗೂ, ಜನ್ಮಾಷ್ಠಮಿ ಗೂ ಇರುವ ಸಂಬಂಧ ಹೇಗೋ ಹಾಗೆ. ೧೯೮೮ ರಲ್ಲಿ ಪ್ರಕಟವಾದ ಸ್ಟೀಫನ್ ಹಾಕಿಂಗ್ ರ brief history of time ಪುಸ್ತಕ ಒಂದು ಕೋಟಿಗೂ ಹೆಚ್ಚು ಪ್ರತಿಗಳ ಮುದ್ರಣ ಕಂಡಿತು. ಇಷ್ಟು ಜನಪ್ರಿಯವಾದ ಪುಸ್ತಕದಲ್ಲಿ ಏನಿರಬಹುದು ಎಂದು ಆಸಕ್ತಿ ಕುದುರಿದ್ದರಿಂದಲೂ, ಮತ್ತು  ಈ ಪುಸ್ತಕದಲ್ಲಿ ಹಾಕಿಂಗ್ ದೇವರ ಅಸ್ತಿತ್ವದ ಸಾಧ್ಯತೆ ಬಗ್ಗೆ ಬರೆದಿದ್ದರು ಎಂದು ಕೇಳಿದ್ದರಿಂದಲೂ ಪುಸ್ತಕ ಕೊಂಡೆ. ಓದಿದ ನಂತರ ಅರ್ಥವಾಗಿದ್ದು ಅಷ್ಟಕ್ಕಷ್ಟೇ, ಆದರೆ ಈ ವಿಜ್ಞಾನಿಯ ಬಗ್ಗೆ ಆಸಕ್ತಿ ಮಾತ್ರ ನನ್ನಲ್ಲಿ ಉಳಿದುಕೊಂಡಿತು.

೧೯೪೨ ರಲ್ಲಿ ಜನಿಸಿದ ಸ್ಟೀಫನ್ ಹಾಕಿಂಗ್ ಗೆ ೨೧ ನೇ ವಯಸ್ಸಿನಲ್ಲಿ ALS (Amyotrophic lateral sclerosis) ಅಥವಾ ಲೂ ಗೆಹ್ರಿಗ್ ಎಂದೂ ಕರೆಯಲ್ಪಡುವ, ಮೆದುಳನ್ನು ಮತ್ತು ಬೆನ್ನ ಹುರಿಯನ್ನು ಬಾಧಿಸುವ ವಾಸಿಯಾಗದ ನರರೋಗ ಇದೆ ದೃಢ ಪಟ್ಟ ನಂತರ ವೈದ್ಯರು ಇವರ ಬದುಕುವ ಕಾಲ ಕೇವಲ ಇನ್ನೆರಡು ವರ್ಷ ಎಂದಿದ್ದರು. ೨೩ ನೇ ವಯಸ್ಸಿನಲ್ಲಿ ಅಂತ್ಯ ಕಾಣಬೇಕಿದ್ದ ಈ ವಿಜ್ಞಾನಿ ಕಾಯಿಲೆ ವಾಸಿಯಾಗದಿದ್ದರೂ ೭೦ ನೇ ಜನ್ಮ ದಿನ ಆಚರಿಸುತ್ತಿದ್ದಾರೆ. ಉಲ್ಬಣಗೊಳ್ಳುತ್ತಾ (debilitating and degenerative disease) ಹೋಗುವ ಈ ಕಾಯಿಲೆ ಸ್ಟೀಫನ್ ರನ್ನು ಮಾತನಾಡಲೂ, ಬರೆಯಲೂ ಸಾಧ್ಯವಾಗದಂತೆ ಮಾಡಿತು. ಜನರೊಂದಿಗೆ ಸಂವಾದಿಸಲು ಅವರಿಗಾಗಿ ಪ್ರತ್ಯೇಕ ಯಂತ್ರವನ್ನ ಕಂಡು ಹಿಡಿಯಲಾಯಿತು. ಶರೀರದ ಕೆಲವೇ ಕೆಲವು ಸ್ನಾಯುಗಳನ್ನು ಉಪಯೋಗಿಸಿ ಗಣಕ ಯಂತ್ರದ ಕೀಲಿಮಣೆ ಮೂಲಕ ಸಂವಾದ ನಡೆಸುತ್ತಿದ್ದರು ಹಾಕಿಂಗ್. ಈಗ ಅದೂ ಕಷ್ಟವಾಗಿ ಕೇವಲ ಕೆನ್ನೆಗಳ ಸ್ನಾಯುಗಳ ಸಹಾಯದಿಂದ ಸಂವಾದ ನಡೆಸುತ್ತಿದ್ದಾರೆ.

ಮೆದುಳು ಮತ್ತು ಶರೀರ tandem ಆಗಿ ಕೆಲಸ ಮಾಡುತ್ತವೆ. ಶರೀರದ ಸ್ನಾಯುಗಳು ಕೆಲಸ ಮಾಡಲು ಸಹಾಯ ಮಾಡುವುದು ಮೆದುಳಿನಿಂದ ಹೊರಡುವ ಆಜ್ಞೆಗಳು. ಆದರೆ ALS ಖಾಯಿಲೆಯಲ್ಲಿ ಸ್ನಾಯುಗಳು ಕೆಲಸ ಮಾಡದಿದ್ದರೂ ಮೆದುಳು ಮಾತ್ರ pristine ಆಗಿಯೇ ಉಳಿಯುತ್ತದೆ. ಈ ಬೆಳವಣಿಗೆ ALS ಖಾಯಿಲೆಗೆ ಸೀಮಿತವಲ್ಲದಿದ್ದರೂ ಹಾಕಿಂಗ್ ವಿಷಯದಲ್ಲಿ ಮಾತ್ರ ಅನ್ವಯವಾಗುತ್ತಿದೆ. ಹಾಕಿನ್ ರ ಮೆದುಳು ಬುದ್ದಿ ಮತ್ತೆಯಲ್ಲಿ ಇಷ್ಟೊಂದು ಪ್ರಖರವಾಗಿದ್ದರೂ ಯಾವುದೇ ಶಾರೀರಿಕ ನ್ಯೂನತೆಯಿಲ್ಲದ ಹಾಕಿಂಗ್ ಶರೀರ ಮಾತ್ರ ಏಕೆ ಈ ರೀತಿ ವರ್ತಿಸುತ್ತಿರಬಹುದು? ಒಂದು ಲೋಟ ನೀರು ಬೇಕು ಎಂದು ಕೇಳಲೂ ಸಾಧ್ಯವಾಗದ ರೀತಿಯಲ್ಲಿ ಅವರ ಶಾರೀರಿಕ ಸಾಮರ್ಥ್ಯ ಕುಗ್ಗಲು ದೇವರಿಲ್ಲ ಎಂದು ಶತಸ್ಸಿದ್ಧ ಸಾಧಿಸಲು ಹೊರಟ ಅವರಿಗೆ ಪರಮಾತ್ಮ ಕೊಡಮಾಡಿದ ಶಿಕ್ಷೆ ಇರಬಹುದೋ ಎಂದು ಕೆಲವು ಸಂದೇಹ ವ್ಯಕ್ತಪಡಿಸುತ್ತಾರೆ.  

ಭೌತ ಶಾಸ್ತ್ರಕ್ಕಿಂತಲೂ ಇವರ ಅಧ್ಯಯನ ಮತ್ತು ಸಂಶೋಧನೆ ನಭೋ ಮಂಡಲದ ಬಗ್ಗೆ. expanding universe, black hole ಹೀಗೆ ಮಾನವನ ಕುತೂಹಲ ಮತ್ತು ಅಚ್ಚರಿಯನ್ನು ಹಿಡಿದಿಟ್ಟ,  ನಮ್ಮ ಭೂಮಿ ಮತ್ತು ಬ್ರಹ್ಮಾಂಡ ಹೇಗೆ ಅಸ್ತಿತ್ವಕ್ಕೆ ಬಂದಿರಬಹುದು ಎನ್ನುವ ಶಂಶೋಧನೆಯಲ್ಲಿ ಇವರ ಆಸಕ್ತಿ. ಒಂದೊಮ್ಮೆ ದೇವರ ಅಸ್ತಿತ್ವದ ಬಗ್ಗೆ ಸಕಾರಾತ್ಮಕ ವಾಗಿದ್ದ ಅವರ ನಿಲುವು ನಂತರ ಬದಲಾಯಿತು. ಸ್ವರ್ಗ ಎನ್ನುವುದು ಒಂದು fairy story ಮಾತ್ರ ಎಂದು ಹಾಕಿಂಗ್ ರ ಅಭಿಪ್ರಾಯ.

 

ವಿಸ್ತಾರ ಗೊಳ್ಳುತ್ತಿರುವ ಬ್ರಹ್ಮಾಂಡದ ಬಗ್ಗೆ ಚಿಂತಿಸುವ, black hole ಗಳ ನಿಗೂಢತೆ ಬಗ್ಗೆ ಬಗ್ಗೆ ಅಭ್ಯಸಿಸುವ, ಈ ವಿಜ್ಞಾನಿಗೆ ಭೌತಶಾಸ್ತ್ರದಷ್ಟೇ ಕಠಿಣ ಎಂದು ತೋರಿದ ಮತ್ತೊಂದು ವಿಷಯ ಹೆಣ್ಣು. women. they are a complete mystery. ದಾರ್ಶನಿಕರು, ಕವಿಗಳು, ಭಗ್ನ ಹೃದಯೀ ಪುರುಷರು ಹಳಿದ, ಹಲುಬಿದ, ಹೆಣ್ಣು ಸ್ಟೀಫನ್ ರಿಗೂ enigma ಆದಳು. black hole ಥರ.

ಸ್ಟೀಫನ್ ಹಾಕಿಂಗ್ ರಿಗೆ ಹುಟ್ಟು ಹಬ್ಬದ ಶುಭಾಶಯಗಳೊಂದಿಗೆ……

ಹೊಸ ವರ್ಷ, ಹೊಸ ಹರ್ಷ

ಮತ್ತೊಂದು ವರ್ಷ ನಮ್ಮೆಡೆಯಿಂದ ಮರೆಯಾಯಿತು. ಕಳೆದ ವರ್ಷದ ಸಾವು ನೋವುಗಳು ಅಸಂಖ್ಯ. ಅದರಲ್ಲಿ ಜಪಾನಿನ ಸುನಾಮಿಯ ಪಾತ್ರ ಹಿರಿದು. ತದನಂತರ ಬಿನ್ ಲಾದೆನ್ ನ ಹತ್ಯೆ ಮತ್ತು ಹಲವಾರು ಗಣ್ಯರ ಸಾವು. ಇವೆಲ್ಲದರ ಮಧ್ಯೆ ನಾವು ನಮಗೆ ಮೋಸಮಾಡಿ ಕೊಳ್ಳಲೆಂದೇ ಮಾಡಿಕೊಳ್ಳುವ “ರೆಸಲ್ಯೂಶನ್” ಗಳು ‘ಲೂಸ್ ಮೋಶನ್’ ಗಳಾಗಿ ಜನವರಿ ಮೂರನೇ ವಾರದಲ್ಲೇ ವಿಸರ್ಜಿತ. ಆದರೂ ನಾವು ಸೋಲನ್ನು ಒಪ್ಪಿಕೊಳ್ಳೊಲ್ಲ. ಆದರೆ ಒಂದು ಮಾತು ನೆನಪಿರಲಿ, ಚಿಕ್ಕ ಪುಟ್ಟ resolution ಗಳು ಇರಲಿ, ಅದರಲ್ಲೂ ಕೈಗೆಟುಕುವಂಥದ್ದಾದರೆ ಇನ್ನೂ ಚೆನ್ನು. ಮಕ್ಕಳು ಕೇಕ್ ಮೇಲಿನ icing ಮಾತ್ರ ಕೆರೆದು ತಿನ್ನುವಂತೆ. ೨೦೧೨ ಕ್ಕೆ ಹೊಸ ಭರವಸೆಯೊಂದಿಗೆ ಸುಸ್ವಾಗತ ಬಯಸೋಣ, “ಅವರೆಲ್ಲಾ ಭಿನ್ನ ಭಿನ್ನ ರಾಗಿರುತ್ತ್ತಾರೆ, ಒಬ್ಬರಾದ ಮೇಲೆ ಒಬ್ಬರಂತೆ ಬರುತ್ತಾರೆ. ನಮ್ಮ ಜೊತೆ ಜೊತೆಗೇ ಸಾಗುತ್ತಾ ಇರುತಾರೆ ಮತ್ತೆ ತಮ್ಮ ಕರ್ತವ್ಯ ಮುಗಿಸಿ ಮರೆಯಾಗುತ್ತಾರೆ” ಈ ಮಾತುಗಳು ನಮ್ಮ ಪ್ರೀತಿಯ ಸಂಪದ ವೆಬ್ ತಾಣಕ್ಕೆ ಬರೆಯುವ ಹಿರಿಯ ಲೇಖಕರದು. ಡಿಸೆಂಬರ್ ೩೧ ರ ಸೂರ್ಯಾಸ್ತದೊಂದಿಗೆ ಗಂಟು ಮೂಟೆ ಕಟ್ಟುವ “ವರುಷ” ಎನ್ನುವ ಅತಿಥಿಯ ‘ಬರು – ಹೋಗು’ವಿಕೆ ಗೆ ಹೋಲಿಸಿ ಬರೆದ ಸುಂದರ ಕವನದಿಂದ ಹೆಕ್ಕಿದ ಸಾಲುಗಳು. ೨೦೧೨ ಸಮಸ್ತ ಕನ್ನಡಿಗರಿಗೂ, ಭಾರತೀಯರಿಗೂ ಶುಭಕರವಾಗಲೀ, “ಕನ್ನಡ ನಾಡು ಗಂಧದ ಬೀಡು” ಎನ್ನುವ ಹೆಸರಿಗೆ ತಕ್ಕುದಾಗಿ ನಡೆದು ಕೊಳ್ಳುವ ಔದಾರ್ಯ, ಸನ್ಮನಸ್ಸು ನಮ್ಮೆಲ್ಲರದಾಗಲಿ, ಭಾರತವೆಂಬ ವೈಭವ ಮತ್ತಷ್ಟು ವೈಭವೀಕೃತಗೊಳಿಸುವತ್ತ ನಮ್ಮ ಪ್ರಯತ್ನ, ಶ್ರಮ ನಿರಂತರವಾಗಿರಲಿ ಎನ್ನುವ ಹಾರೈಕೆಯೊಂದಿಗೆ 2012 ಕ್ಕೆ ತಳಿರು ತೋರಣ ಕಟ್ಟೋಣ.

ಕನಿಷ್ಠ ಉಡುಗೆ, ಗರಿಷ್ಠ ಅಪಾಯ

ನಮ್ಮ ದೇಶದಲ್ಲಿ ಅತ್ಯಾಚಾರ ಹೆಚ್ಚುತ್ತಿರುವುದಕ್ಕೆ ಕಾರಣ ಮಹಿಳೆಯರು ಪ್ರಚೋದನಕಾರಿ ಉಡುಗೆ ತೊಡುತ್ತಿರುವುದು ಎಂದು ಆಂಧ್ರ ಪ್ರದೇಶದ ಪೊಲೀಸ್ ಮುಖ್ಯಸ್ಥ ದಿನೇಶ್ ರೆಡ್ಡಿ ಹೇಳಿಕೆ ನೀಡುವುದರ ಮೂಲಕ ಜೇನುಗೂಡಿಗೆ ಕಲ್ಲು ಬೀಸಿದ್ದಾರೆ. ಈ ಮಾತಿಗೆ ವಿರೋಧ ವ್ಯಕ್ತಪಡಿಸಿದರು ನಮ್ಮ ಸನ್ಮಾನ್ಯ ಗೃಹ ಮಂತ್ರಿಗಳು. ಈ ಹೇಳಿಕೆ ಸರಿಯಲ್ಲ, ಕಾಕ್ಟೇಲ್ ಪಾರ್ಟಿ ಗೆ ಹೋಗುವ ಮಹಿಳೆ ಬಿಕಿನಿಯಲ್ಲಿ ಹೋಗಲಾರಳು, ಸಂದರ್ಭಕ್ಕೆ ಅನುಸಾರವಾಗಿ ಆಕೆ ಬಟ್ಟೆ ತೊಡುವಳು ಎಂದು ಬಡಬಡಿಸಿದರು.

ಗೃಹ ಮಂತ್ರಿಗಳಿಗಿಂತ ಚೆನ್ನಾಗಿ ಸಮಾಜ ಕಾಯುವ ಪೊಲೀಸರಿಗೆ ತಾನೇ ಗೊತ್ತಿರೋದು ಸಮಾಜದ ಆಗುಹೋಗುಗಳು? ಕನಿಷ್ಠ ಬಟ್ಟೆ ತೊಟ್ಟ ಹುಡುಗಿ ಅಥವಾ ಮಹಿಳೆ ಯಾವುದೇ ಕಾರಣದಿಂದಲೂ ಒಳ್ಳೆಯ ಭಾವನೆ ತರಲಾರರು. ನಮ್ಮಲ್ಲಿ ಬರುವ ವಿದೇಶೀ ಮಹಿಳೆಯರನ್ನು ಗಂಡಸರು ನೋಡುವ ರೀತಿ ನೀವು ಗಮನಿಸಿರಲೇಬೇಕಲ್ಲ, ಅದಕ್ಕೆ ಕಾರಣ ಏನು, ಆಕೆಯ ಅಂಗ ಸೌಷ್ಠವದ ಪ್ರದರ್ಶನ. ಮೈ ಪ್ರದರ್ಶನ ನಡೆಸೋ ಮಹಿಳೆಯರು loose character ನವರು ಎಂದು ಬಹಳ ಜನ ತಪ್ಪಾಗಿ ತಿಳಿಯುತ್ತಾರೆ. ನಮಗೇಕೆ ವಿದೇಶೀ  ಜನರ ಉಡುಗೆ ತೊಡುಗೆ ಮೇಲೆ ವ್ಯಾಮೋಹ? ಅವರು ಕನಿಷ್ಠ ಉಡುಗೆ ತೊದಲು ಕಾರಣ ಯಾವಾಗಲೂ ಗಡಿ ಬಿಡಿ ಯಾಗಿರುವ ಅವರ ಚಟುವಟಿಕೆ ಯಾಗಿರಬಹುದು. ನಮ್ಮ ಮಹಿಳೆಯರ ಥರ ಉದ್ದದ ಕೂದಲನ್ನೂ ಸಹ ಬೆಳೆಸೋಲ್ಲ ಅವರು. ಸ್ನಾನದ ನಂತರ ಒಣಗಲು ನಂತರ  ಬಾಚಲು ಸಿಗದ ಸಮಯದ ಕಾರಣ. ಮಹಿಳೆಯರು ಅಂತರಂಗದ ಸೌಂದರ್ಯಕ್ಕೆ  ಪ್ರಾಶಸ್ತ್ಯ ಕೊಟ್ಟರಾಗದೆ? ಈ ವರದಿ ಆಂಗ್ಲ ಪತ್ರಿಕೆಯಲ್ಲಿ ಬಂದಿದ್ದೆ ತಡ, ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂತು. ಬಹುತೇಕ ಓದುಗರು ದಿನೇಶ್ ರೆಡ್ಡಿಯವರ ಮಾತಿಗೆ ಸಹಮತ ವ್ಯಕಪಡಿಸಿದರು. ದಿನೇಶ ರೆಡ್ಡಿಯವರ ಪ್ರಕಾರ ಗ್ರಾಮಾಂತರ ಪ್ರದೇಶಗಳಿಗೂ ಅಂಟಿಕೊಂಡಿದೆ ಈ ಪಿಡುಗು. ಪೊಲೀಸ್ ಮುಖ್ಯಸ್ಥರ ಹೇಳಿಕೆಗೆ ಮಹಿಳಾ ಸಂಘಟನೆಗಳು ರೆಡ್ಡಿಯವರನ್ನು chauvinist ಎಂದು ಮೂದಲಿಸಿದವು.

ನಮ್ಮ ಸಂಸ್ಕೃತಿ ಪಾಶ್ಚಾತ್ಯರಿಗಿಂತ ವಿಭಿನ್ನ, ಹಾಗೆಯೇ ಅಂಥಾ ಮಾಡರ್ನ್ ಸಂಸ್ಕಾರಕ್ಕೆ ನಮ್ಮ ಸಮಾಜ ಇನ್ನೂ ತಯಾರಾಗಿಲ್ಲ, ತಯಾರಾಗುವವರೆಗೆ ನಮ್ಮ ಸಂಸ್ಕೃತಿಗೆ ತಕ್ಕುದಾದ ಉಡುಗೆ ಧರಿಸುವುದು ಒಳಿತು.

ಜ್ಯೋತಿಷ್ಯ ವೈಜ್ಞಾನಿಕವೇ?

ಜ್ಯೋತಿಷ್ಯ ಶಾಸ್ತ್ರವನ್ನು “ಖೋಟಾ ಅಧ್ಯಯನ” (fake discipline) ಎಂದಿದ್ದಾರೆ ವಿಜ್ಞಾನಕ್ಕೆ ನೊಬೆಲ್ ಪ್ರಶಸ್ತಿ ವಿಜೇತರಾದ ವೆಂಕಟರಾಮನ್ ರಾಮಕೃಷ್ಣನ್ ಅವರು. ಚನ್ನೈ ನಗರದ ಭಾರತೀಯ ವಿದ್ಯಾ ಭವನದಲ್ಲಿ ಉಪನ್ಯಾಸ ನೀಡುತ್ತಿದ್ದ ಇವರು ಜ್ಯೋತಿಷ್ಯದೊಂದಿಗೆ ಹೋಮಿಯೋಪತಿ ವೈದ್ಯ ಶಾಸ್ತ್ರವನ್ನೂ ತರಾಟೆಗೆ ತೆಗೆದುಕೊಂಡರು. ಜ್ಯೋತಿಷ್ಯದ ಹೆಸರಿನಲ್ಲಿ ಜನರನ್ನು ವಂಚಿಸುವ ಪರಿಪಾಠ ಇಂದು ನಿನ್ನೆಯದಲ್ಲ. ನಮ್ಮ ದೇಶದಲ್ಲಿ ಜ್ಯೋತಿಷ್ಯ ಕ್ಷೇತ್ರ multi million dollar ಉದ್ದಿಮೆ ಎಂದು ಸುಲಭವಾಗಿ ಹೇಳಬಹುದು. unsuspecting ಜನರನ್ನು ಲೀಲಾ ಜಾಲವಾಗಿ ವಂಚಿಸಿ ಹಣ ಕೊಳ್ಳೆ ಹೊಡೆಯುವ ಇವರಿಗೆ ನಿಯಮದ ಯಾವ ತೊಡಕೂ ಇಲ್ಲ. ಭಾಜಪ ಸರಕಾರದಲ್ಲಿ ಮಾನವ ಸಂಪನ್ಮೂಲ ಖಾತೆ ಸಚಿವರಾಗಿದ್ದ ಮುರಳಿ ಮನೋಹರ್ ಜೋಶಿ ಜ್ಯೋತಿಷ್ಯವನ್ನು ವೈದಿಕ ವಿಜ್ಞಾನದ ಅಡಿಯಲ್ಲಿ ತಂದು ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ವಸ್ತುವನ್ನಾಗಿಸಿದ್ದರು. ಭಾರತದಲ್ಲಿ ಎಲ್ಲ ಸಮಾಜದ ಬಹಳಷ್ಟು ಜನ ನಂಬುವ ಜ್ಯೋತಿಷ್ಯದ ಬಗ್ಗೆ ಇಸ್ಲಾಮಿನ ನಿಲುವು ಅತ್ಯಂತ ಕಟುವಾದುದು. ಯಾವುದಾದರೂ ಜ್ಯೋತಿಷಿಯನ್ನು ಒಬ್ಬ ಕಂಡರೆ ಅವನ ನಲವತ್ತು ದಿನಗಳ ಕಾಲದ ಆರಾಧನೆ ನಷ್ಟ ಪಡುವುದು ಮಾತ್ರವಲ್ಲ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣತಿ ಪಡೆದವನು ಪಾಪದ ಹೊರೆಯನ್ನು ಹೊರುತ್ತಾನೆ ಎನ್ನುತ್ತದೆ ಇಸ್ಲಾಂ. ಜ್ಯೋತಿಷ್ಯದ ಕುರಿತ ಪವಿತ್ರ ಕುರಾನಿನ ಹೇಳಿಕೆ ಹೀಗಿದೆ.

“With Him are the keys to the unseen and none knows it except Him”.The Holy Qur’an, Chapter 6, Verse 59

“Say: None in the heavens or earth knows the unseen except Allah.”The Holy Qur’an, Chapter 27, Verse 65

ಮತ್ತೊಂದೆಡೆ ಪ್ರವಾದಿಗಳನ್ನು ಸಂಬೋಧಿಸುತ್ತಾ ಪವಿತ್ರ ಕುರಾನ್ ಹೀಗೆ ಹೇಳುತ್ತದೆ: “ಹೇಳಿ ಪ್ರವಾದಿಗಳೇ, ನನಗೆ ಅಗೊಚರವಾದದ್ದು ಕಾಣುವಂತಾಗಿದ್ದಿದ್ದರೆ ನಾನು ಒಳ್ಳೆಯದನ್ನೇ ಬಯಸುತ್ತಿದ್ದೆ, ಆದರೆ ನಾನು ಒಬ್ಬ ಸಂದೇಶವಾಹಕ ಮತ್ತು ವಿಶಾಸಿಗಳಿಗೆ ಶುಭ ವಾರ್ತೆ ತರುವವ ಮಾತ್ರ”

ಈ ರೀತಿಯ ಹೇಳಿಕೆಗಳು ಮತ್ತು ವಿಧ್ವಾಂಸರ ಅಭಿಪ್ರಾಯಗಳು ವ್ಯತಿರಿಕ್ತ ವಾಗಿದ್ದೂ ಬಹಳಷ್ಟು ಮುಸ್ಲಿಮರು ಹಸ್ತ ಸಾಮುದ್ರಿಕೆ, ಅದೂ ಇದೂ ಎಂದು ಅಲೆಯುವುದನ್ನು ನಾನು ಕಂಡಿದ್ದೇನೆ.

ಇಲ್ಲಿ ಹೀಗೆ, ನಮ್ಮಲ್ಲಿ ಹಾಗೆ, ಯಾಕೆ ಹೀಗೆ?

ವಿಜಯ್ ಮಲ್ಯರ ಕಿಂಗ್ ಫಿಶರ್ ವಿಮಾನ ಕಂಪೆನಿ ಆರ್ಥಿಕ ಸಂಕಟ ಕಾರಣ ತನ್ನ ರೆಕ್ಕೆಗಳನ್ನು ಮುದುಡಿ ಕೊಳ್ಳುವ ಸ್ಥಿತಿಯಲ್ಲಿದೆ. “ಕಿಂಗ್ ಆಫ್ ಗುಡ್ ಟೈಮ್ಸ್” ಮಲ್ಯ ಈಗ bad times ನಿಂದ ಹೊರಬರಲು ಸರಕಾರದ ಕಡೆ ನೋಟ ನೆಟ್ಟಿದ್ದಾರೆ. ಪ್ರಧಾನಿಗಳೂ ಮಲ್ಯರ ಸಂಕಷ್ಟವನ್ನು ಗಮನಿಸಿದ್ದಾರೆ. ಏನಾದರೂ ಮಾಡುವ ಭರವಸೆ ನೀಡಿದ್ದಾರೆ. ವಿಜಯ್ ಮಲ್ಯ ಚಾಣಾಕ್ಷ ಉದ್ಯಮಿಯಾದರೂ ತಮ್ಮ ಏರ್ ಲೈನ್ಸ್ ಅನ್ನು ನಷ್ಟದ ಮೋಡಗಳಿಂದ ಆಚೆ ತರಲು ಹೆಣಗುತ್ತಿರುವುದು ಖೇದಕರ.

ಇಂದು ನಮ್ಮ ಕಂಪೆನಿಯ ಜನರಲ್ ಮ್ಯಾನೇಜರ್ ರಿಯಾಧ್ ನಗರಕ್ಕೆ ಪ್ರಯಾಣಿಸಲು ವಿಮಾನದ ಟಿಕೆಟ್ ಗೆ ಹೋದಾಗ ಟಿಕೆಟ್ ಫ್ರೀ. ಫ್ರೀ………..? ಹೌದ್ರೀ, ಫ್ರೀ. ಉಚಿತ. ಪುಕ್ಕಟೆ. ಆದರೆ ತೆರಿಗೆ ಮಾತ್ರ ಪಾವತಿಸಬೇಕು. ಜೆಡ್ಡಾ ದಿಂದ ೧೨೦೦ ಕಿಲೋ ಮೀಟರ್ ದೂರ ರಾಜಧಾನಿ ರಿಯಾದ್. ಸಾಮಾನ್ಯವಾಗಿ ಟಿಕೆಟ್ ದರ ೬,೦೦೦ ರೂಪಾಯಿ. ತೆರಿಗೆ ಸೇರಿ. ಈಗ ತೆರಿಗೆ ಮಾತ್ರ ಪಾವತಿಸಿದರೆ ಸಾಕು, ರೆಕ್ಕೆಗಳು ಅರಳಿಕೊಳ್ಳುತ್ತವೆ. ತೆರಿಗೆ ೨,೦೦೦ ರೂಪಾಯಿ ಮಾತ್ರ. ಈ ಉಚಿತವಾಗಿ ಹಾರು ಎನ್ನುವ ಆಫರ್ ಕೊಡುತ್ತಿರುವ ಕಂಪೆನಿ “ನಾಸ್ ಏರ್”.  ಇದು low cost airline. ಇವರು ಸೌದಿ ಅರೇಬಿಯಾದ ಒಳಗೆ ಮಾತ್ರವಲ್ಲ ಮಧ್ಯ ಪ್ರಾಚ್ಯದ ಹಲವು ದೇಶಗಳಿಗೂ ತಮ್ಮ ಹಾರಾಟದ ಧಂಧೆ ಇಟ್ಟು ಕೊಂಡಿದ್ದಾರೆ. ಜೆಡ್ಡಾ ದಿಂದ ೧೬೦೦ ಕಿಲೋ ಮೀಟರು ಇರುವ ದಮ್ಮಾಂ ನಗರಕ್ಕೆ ಕೇವಲ ೧೨೦೦ ರೂಪಾಯಿ ಚಾರ್ಜ್ ಮಾಡುತ್ತಾರೆ ಆಫರ್ ಸಮಯದಲ್ಲಿ.  ಇಲ್ಲಿ ಹೀಗೆ, ನಮ್ಮಲ್ಲಿ ಹಾಗೆ, ಯಾಕೆ ಹೀಗೆ?   

ಮೈಸೂರು ಹುಲಿ, ಟಿಪ್ಪೂ ಸುಲ್ತಾನರ ಖಡ್ಗ ವನ್ನು ಹಣ ಕೊಟ್ಟು ಬ್ರಿಟಿಶ್ ಸಂಗ್ರಹಾಲಯದಿಂದ ಭಾರತಕ್ಕೆ ಮರಳಿ ತಂದು ಹೆಸರು ಮಾಡಿದ ಶ್ರೀಯುತ ವಿಜಯ್ ಮಲ್ಯ ಆರ್ಥಿಕ ಸಂಕಷ್ಟದಿಂದ ಹೊರ ಬಂದು ತಮ್ಮ ಕಿಂಗ್ ಫಿಶರ್ ಮತ್ತೊಮ್ಮೆ ಆಗಸವನ್ನು ಆಳುವಂತೆ ಮಾಡಲಿ ಎಂದು ಹಾರೈಸೋಣ.

ಹೀಗೊಂದು ಕಾನೂನಿನ ಲೈಂಗಿ’ಕಥೆ’

ಜೂಲಿಯಾನ್ ಅಸಾಂಜ್ ಹೆಸರು ಸಾಮಾನ್ಯ ವಿದ್ಯಾವಂತರು ಕೇಳಿರಲೇ ಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ, ಮಾಹಿತಿ ಹಕ್ಕು ಮುಂತಾದ ಹಕ್ಕುಗಳ ಪ್ರತಿಪಾದಕ ಅಸಾಂಜ್. ಈತ ವಿಶ್ವದ ಸರಕಾರಗಳು ತೆರೆಮರೆಯಲ್ಲಿ ನಡೆಸಿ ಮಗುಮ್ಮಾಗಿ ಇದ್ದು ಬಿಡುವ ವಿಷಯಗಳ ಬಗ್ಗೆ ವಿಶ್ವಕ್ಕೆ ಡಂಗುರ ಬಾರಿಸಿ ಹೇಳುತ್ತಿದ್ದ ತನ್ನದೇ ಆದ ವೆಬ್ ತಾಣ “ವಿಕಿಲೀಕ್” ಮೂಲಕ. ಈ ವಿಕಿಲೀಕ್ ಎನ್ನುವ ನಲ್ಲಿ ತೊಟ ತೊಟ ತೊಟ ತೊಟ ಎಂದು ಉದುರಿಸ ಬೇಕಾದ್ದನ್ನೂ, ಉದುರಿಸಬಾರದ್ದನ್ನೂ ಉದುರಿಸಿ ಸರಕಾರಗಳ ಕೆಂಗಣ್ಣಿಗೆ ಕಾರಣವಾಯಿತು. ಈ ನಲ್ಲಿಯ ಬಾಯಿ ಮುಚ್ಚಿಸಲು ಸರಕಾರಗಳು ಎಲ್ಲಾ ಕಸರತ್ತುಗಳನ್ನೂ ಮಾಡಿದವು. ಅದರಲ್ಲಿನ ಒಂದು ಕಸರತ್ತು ಲೈಂಗಿಕ ದೌರ್ಜನ್ಯದ ಅಥವಾ ಅತ್ಯಾಚಾರದ ಆರೋಪ ಜೂಲಿಯಾನ್ ಅಸಾಂಜ್ ವಿರುದ್ಧ.

ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಜೂಲಿಯಾನ್ ಅಸಾಂಜ್ ನಿಗೆ ಇಬ್ಬರು ಮಹಿಳೆಯರ ಪರಿಚಯ ವಾಯಿತು; ಆನ್ನಾ ಆರ್ಡಿನ್ ಮತ್ತು ಸೋಫಿಯಾ ವಿಲೆನ್ ಇವರೇ ಆ ಮಹಿಳೆಯರು.

ಈ ಮಹಿಳೆಯರು ಯಾರು, ಅವರು ಹೇಗೆ ಜೂಲಿಯಾನ್ ಅಸಾಂಜ್ ನಿಗೆ ಹತ್ತಿರವಾದರು ಎನ್ನುವುದು ದೊಡ್ಡ ಕತೆ. ಆನ್ನಾ ಆರ್ಡಿನ್ ಜೂಲಿಯಾನ್ ಒಂದಿಗೆ ಲೈಂಗಿಕ ಚಟುವಟಿಕೆ ನಡೆಸುವಾಗ ಅರ್ಧ ದಾರಿಯಲ್ಲಿ ಕಾಂಡೋಂ ಹರಿದು ಹೋಯಿತು. ಈಗ ಆನ್ನಾ ಗೆ ಶಂಕೆ ತನಗೆ ಲೈಂಗಿಕ ರೋಗ ತಗುಲಿರಬಹುದೋ ಅಥವಾ ಗರ್ಭಧಾರಣೆಯಾಗಿರಬಹುದೋ ಎಂದು. ಆದರೆ ಆಕೆ ಪೊಲೀಸರಿಗೆ ದೂರು ನೀಡಿದ್ದು ಅಸಾಂಜ್ ಉದ್ದೇಶಪೂರ್ವಕ ಕಾಂಡೋಂ ಹರಿದ ಎಂದು.

ಈಗ ಎರಡನೇ ಪಾತ್ರದ ಆಗಮನ, ಸೋಫಿಯಾ ವಿಲೆನ್. ಈಕೆ ಸಹ ಒಂದೆರಡು ದಿನಗಳ ನಂತರ ಅಸಾಂಜ್ ನೊಂದಿಗೆ ಕೂಡಿದಳು. ಮೊದಲ ಸಲ ಕೂಡುವಾಗ ಅಸಾಂಜ್ ಕಾಂಡೋಂ ಧರಿಸಿದ್ದ, ಮರುದಿನ ಬೆಳಿಗ್ಗೆ ಮತ್ತೊಮ್ಮೆ ಕೂಡುವಾಗ ಅಸಾಂಜ್ ಕಾಂಡೋಂ ಅನ್ನು ಧರಿಸಿರಲಿಲ್ಲ ಎಂದು ಸೋಫಿಯಾ ಪೊಲೀಸ್ ಠಾಣೆ ಗೆ ಹೋದಳು ದೂರಲು. ಇಬ್ಬರೂ ಸಮ್ಮತಿಯುಕ್ತ ಸಂಭೋಗಕ್ಕೆ ಒಪ್ಪಿಗೆ ನೀಡಿದ್ದರು ಎಂದು ಅಸಾಂಜ್ ಹೇಳಿದರೆ ಈ ಮಹಿಳೆಯರ ದೂರು ಬೇರೆಯೇ. ಸಮ್ಮತಿ ನೀಡಿದ್ದು ಕಾಂಡೋಂ ರಹಿತ ಸೆಕ್ಸ್ ಗಾಗಿ ಅಲ್ಲ ಎಂದು. ಈಗ ಆಗಮನ ಸೆಕ ನಷ್ಟೇ ರೋಮಾಂಚನ ಕೊಡುವ ಸ್ವಿಸ್ ಕಾನೂನಿಗೆ.

ಸುಸ್ವಾಗತ ಸ್ವಿಟ್ಸರ್ಲೆಂಡ್. ಈ ದೇಶದಲ್ಲಿ ಕಾನೂನು ಸ್ವಿಸ್ ವಾಚಿನಷ್ಟೇ ಸಂಕೀರ್ಣ. ಸುಲಭವಾಗಿ ಅರ್ಥವಾಗೋಲ್ಲ. ಇಲ್ಲಿನ ಕಾನೂನಿನಲ್ಲಿ “ಸರ್ಪ್ರೈಸ್ ಸೆಕ್ಸ್” ಎನ್ನುವ ಕಾಯಿದೆ ಇದೆ. ಈ ನಿಯಮದಡಿ ಲೈಂಗಿಕ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ಮಹಿಳೆ ಸಾಕು ಎಂದರೂ ಕೇಳದೆ ಮುಂದುವರಿದರೆ ಅದು ಅತ್ಯಾಚಾರ. ಸಂಭೋಗ ನಿರತರಾಗಿರುವಾಗಲೇ ಮಹಿಳೆ ಸಮ್ಮತಿಯನ್ನು ಹಿಂದಕ್ಕೆ ಪಡೆಯಬಹುದಂತೆ. ಸಮ್ಮಿಶ್ರ ಸರಕಾರ ಉರುಳಿಸಲು ಪಕ್ಷವೊಂದು ಸರಕಾರಕ್ಕೆ ಬೆಂಬಲ ಹಿಂದಕ್ಕೆ ಪಡೆಯುವ ಹಾಗೆ. ಹಾಗೇನಾದರೂ ಸಮ್ಮತಿಯನ್ನು ಹಿಂದಕ್ಕೆ ಪಡೆದೂ ಗಂಡು ಮುಂದುವರಿದರೆ ಅದು ಅತ್ಯಾಚಾರ. (ಒಂದು ಸಂಶಯ; ಸಂಭೋಗ ನಿರತ ಗಂಡು ಕಿವುಡನಾದರೆ?) ಕಿವುಡನಾದರೆ ಸಂವಿಧಾನಕ್ಕೆ ತರುವ ತಿದ್ದುಪಡಿ ಯಂತೆ ಈ ಹಾಸ್ಯಾಸ್ಪದ ಸ್ವಿಸ್ law (lessness) ಗೂ ತರಬೇಕು ತಿದ್ದು ಪಡಿಯೊಂದ. ಮಹಿಳೆ ಉಪಯೋಗಿಸುವ withdrawal method ಇದು. withdrawal method ಏನು ಎಂದು ವಿವರಿಸಲು ಇದು ಸೆಕ್ಸ್ ಲೇಖನ ಅಲ್ಲ.

ಮೇಲಿನ ಈ ಕಾನೂನಿನ ಅಡಿ ಅಸಾಂಜ್ ನನ್ನು ಕಟಕಟೆಯಲ್ಲಿ ನಿಲ್ಲಿಸುವ, ತದನಂತರ ಜೈಲಿಗೆ ಅಟ್ಟುವ ಪ್ರಯತ್ನ ಸ್ವಿಸ್ ಸರಕಾರದ್ದು.

ಗರ್ಭ ಧರಿಸಬೇಕೇ? ಚೆನ್ನಾಗಿ ಹಲ್ಲುಜ್ಜಿ

ಗರ್ಭ ಧರಿಸಬೇಕೇ? ಚೆನ್ನಾಗಿ ಹಲ್ಲುಜ್ಜಿ ಪಾಶ್ಚಾತ್ಯರಲ್ಲದ ಸಂಸ್ಕೃತಿಯ ವಿವಾಹಿತ ಮಹಿಳೆಯರೆಲ್ಲರ ಬಯಕೆ ಏನೆಂದರೆ ಒಂದು ಸುಂದರ ತಮ್ಮಂತೆ ಅಥವಾ ತಮ್ಮ ಗಂಡಂದಿರನ್ನು ಹೋಲುವ ಒಂದು ಮಗುವಿಗೆ ಜನ್ಮ ಕೊಡುವುದು. ಮದುವೆಯಾಗಿ ಒಂದು ವರ್ಷದ ಒಳಗೆ ಮಗು ಆಗದಿದ್ದರೆ ಗಾಭರಿ ಆತಂಕ ಶುರುವಾಗುತ್ತೆ. ಎರಡು ವರ್ಷಗಳ ಮೇಲೂ ಮಗುವಾಗದಿದ್ದರೆ ಗುಸು ಗುಸು ಶುರು. ಗಂಡ ಹೆಂಡಿರಿಗಿಂತಲೂ, ಅವರಿಬ್ಬರ ಮನೆಯವರಿಗಿಂತಲೂ ಹೆಚ್ಚಿನ ಚಿಂತೆ ನೆರೆಹೊರೆಯವರಿಗೆ, ಹೊಟ್ಟೆ ಉಬ್ಬದಾದಾಗ. ವ್ರತ, ಹರಕೆ, ಸ್ವಾಮಿಗಳ ಭಸ್ಮ ಅದೂ ಇದೂ ಎಂದು ಓಡಾಟ. ಪರಿಚಯದ ದಂಪತಿಗಳು ‘ಆಸನ’ ಬದಲಿಸಲೂ ಸಲಹೆ ನೀಡುತ್ತಾರೆ. ಒಟ್ಟಿನಲ್ಲಿ ಒಂದು ರೀತಿಯ emergency situation ನಿರ್ಮಾಣ ಆಗುತ್ತೆ. ಆದರೆ ಇಷ್ಟೆಲ್ಲಾ ಸರ್ಕಸ್ ಏಕೆ? ಇರುವ, time tested ಆಸನವೇ ಫೈನ್, ಜಸ್ಟ್ ಬ್ರಶ್ ಎವ್ವೆರಿ ಡೇ.. ಹಾಂ? ಬ್ರಶ್? ಚೆನ್ನಾಗಿ ಹಲ್ಲುಜ್ಜಿದರೆ ಮಗು ಆಗುತ್ತಾ?

 ಹೌದು ಎನ್ನುತ್ತಾರೆ ಆಸ್ಟ್ರೇಲಿಯಾದ ಸಂಶೋಧಕರು. ಹಾಗೇ ಸುಮ್ಮನೆ ಈ ನಿರ್ಣಯಕ್ಕೆ ಬರಲಿಲ್ಲ ಈ ಮಹಾಶಯರುಗಳು. ೩೭೩೭ ಗರ್ಭಿಣಿ ಮಹಿಳೆಯರ ಮೇಲೆ ಅಧ್ಯಯನ ನಡೆಸಿ ಕಂಡು ಕೊಂಡ ಸತ್ಯ. ಬಾಯೋ ಶುಚಿತ್ವ ಇಲ್ಲದ, ಒಸಡಿನ ರೋಗ ಇರುವ, ಸರಿಯಾಗಿ ಹಲ್ಲುಜ್ಜದ ಮಹಿಳೆಯರು ಗರ್ಭ ಧರಿಸುವುದು ಕಷ್ಟ ಅಥವಾ ನಿಧಾನ ಎನ್ನುತ್ತಾರೆ ಈ ಸಂಶೋಧಕರು.

ಈಗ ಪಕ್ಕದ ಮನೆಯ ಪ್ರೀತಿ ಅಥವಾ ಪಿಂಕಿ ಒಂದೆರಡು ವರ್ಷಗಳಾದರೂ ನನಗೆ ಮಗು ಆಯಿತು ಎಂದು ಸಿಹಿ ತೆಗೆದು ಕೊಂಡು ಬರದೆ ಹೋದಾಗ ‘ಆಸನ’ ಬದಲಿಸು ಎಂದು ಕಸಿವಿಸಿ ಮಾಡೋ ಬದಲು, ಹೋಗಮ್ಮಾ ಸರಿಯಾಗಿ ಹಲ್ಲುಜ್ಜ ಬಾರದಾ ಎಂದು ಗದರಿಸಿ ಬಾತ್ ರೂಂ ಗೆ ಅಟ್ಟಿ.

ಇನ್ನೂರು ರೂಪಾಯಿಗೆ ಒಂದು ವರ್ಷ

ಇನ್ನೂರು ರೂಪಾಯಿ ಕದ್ದ ಆರೋಪಕ್ಕೆ ಹದಿ ಹರೆಯದ ಹುಡುಗನಿಗೆ ನ್ಯಾಯಾಲಯ ವಿಧಿಸಿದ ಶಿಕ್ಷೆ ಒಂದು ವರ್ಷದ ಕಾರಾಗೃಹ ವಾಸ. ಸಾವಿರಾರು ಕೋಟಿ ನುಂಗಿದ, ತೆರಿಗೆ ಪಾವತಿಸದೆ ಮೆರ್ಸಿ ಡೀಸ್, BMW ಕಾರುಗಳಲ್ಲಿ ರಾಜಾರೋಷವಾಗಿ ಓಡಾಡುವ ಕಳ್ಳರಿಗೆ ಹೋದಲ್ಲೆಲ್ಲಾ ಮಣೆ, ಆದರ, ಅಭಿಮಾನ, ಸನ್ಮಾನ. ಭಾರತ ಕೇವಲ ಶ್ರೀಮಂತರ, ಲೂಟಿಕೋರರ, ಬಾಲಿವುಡ್, ಕ್ರಿಕೆಟ್ ತಾರೆಯರ, ಅಧಿಕಾರವಿರುವವರ ಉಲ್ಲಾಸಕ್ಕಾಗಿ ಇರುವ  ನಾಡೇ? ಹುಡುಗ ಜೈಲಿನಿಂದ ಹೊರ ಹೋಗುವಾಗ ಇಂಥಾ ಕೆಲಸ ಇನ್ನೊಮ್ಮೆ ಮಾಡಬೇಡ ಎಂದು ಪೋಲೀಸಪ್ಪನೊಬ್ಬ ಹೇಳುತ್ತಾನಂತೆ. ಈ ಮಾತನ್ನು ಕಿನ್ನಿಮೋಳಿಗೋ, ಕಲ್ಮಾಡಿಗೋ, ರಾಜಾಗೋ ಹೇಳಲು ಪೇದೆಯೊಬ್ಬನಿಂದ  ಸಾಧ್ಯವೇ?

ಸಮಾಜದ ಗಣ್ಯ ವ್ಯಕ್ತಿಗಳು ಮಾಡಿದ ಪಾಪಗಳು ಸೆಷನ್ಸ್ ಕೋರ್ಟು, ಹೈ ಕೋರ್ಟು, ಸುಪ್ರೀಂ ಕೋರ್ಟು, ಸುಳ್ಳು ಸುಳ್ಳೇ ಮಾತನಾಡುವ ಕರಿ ಕೋಟುಗಳನ್ನೆಲ್ಲಾ ಸುತ್ತಿ ಸುತ್ತಿ ಬಸವಳಿದು ಕೊನೆಗೆ ಮರೆಯಾಗಿ ಹೋಗುತ್ತವೆಯೇ ವಿನಃ ಮಹನೀಯರುಗಳು ಅನುಭವಿಸಿದ ಜೈಲು ಶಿಕ್ಷೆ ಬಗ್ಗೆ ಓದಿದ ನೆನಪಿದೆಯೇ?      

 

ಆರು ಸಾರ್ವತ್ರಿಕ ಸೂತ್ರಗಳು

ಮನುಷ್ಯನಾಗಲು ಬೇಕಾದ ಆರು ಸಾರ್ವತ್ರಿಕ ಸೂತ್ರಗಳು

೧. ನಿಮಗೊಂದು ಶರೀರವನ್ನು ಕೊಡಲಾಗುತ್ತದೆ.

೨. ನಿಮಗೆ ಪಾಠ ಗಳನ್ನು ಹೇಳಿ ಕೊಡಲಾಗುತ್ತದೆ.

೩. ಬದುಕಿನಲ್ಲಿ ತಪ್ಪುಗಳಿರುವುದಿಲ್ಲ, ಬರೀ ಪಾಠ ಗಳು ಮಾತ್ರ.

೪. ಪಾಠ ಕಲಿಯದಾದಾಗ ಅವು ಮರುಕಳಿಸುತ್ತವೆ.

೫. ಮರುಕಳಿಸಿದಷ್ಟೂ ಪಾಠ ಹೆಚ್ಚು ಕಠಿಣವಾಗುತ್ತದೆ.

೬. ನೀವು ಪಾಠ ಕಲಿತಿರಿ ಎಂದು ಅರಿವಾಗುವುದು ನಿಮ್ಮ ಗುರಿ ಬದಲಿಸಿದಾಗ.

ಹೇಗನ್ನಿಸಿದವು ಮೇಲಿನ ಸೂತ್ರಗಳು? ಸುಖೀ ಸಂಸಾರಕ್ಕೆ ಹತ್ತು ಸೂತ್ರಗಳು, ಸುಖೀ ದಾಂಪತ್ಯಕ್ಕೆ ವಾತ್ಸ್ಯಾಯನನ ೬೪ ಸೂತ್ರಗಳು,

ಮನುಷ್ಯನಾಗೋಕ್ಕೆ ಕೇವಲ ಆರೇ ಆರು ಸೂತ್ರಗಳು.

ಚಿತ್ರ ಕೃಪೆ: http://media.photobucket.com/image/life%20lessons/Obiwan456/cute-puppy-pictures-life-lessons.jpg?o=27