ಜಿಹಾದ್ ಎಂದರೇನು?

ನಮ್ಮಲ್ಲಿ ಧಾರ್ಮಿಕ ವಿದ್ಯೆಗಾಗಿ “ಮದ್ರಸಾ” ಗಳಿಗೆ ಮಕ್ಕಳನ್ನು ಕಳಿಸುವುದಿದೆ. ಅಲ್ಲಿ ಕುರಾನ್ಅನ್ನು ಉರು ಹೊಡೆಯುವುದು, ನಮಾಜ್ ಯಾವ ರೀತಿ ಮಾಡುವುದು ಮತ್ತು ಇತರೆ ಧಾರ್ಮಿಕ ಸಂಗತಿಗಳನ್ನು ಹೇಳಿ ಕೊಡುತ್ತಾರೆ. ಮದರಸಾ ಶಿಕ್ಷಣ ಪಡೆದ ನಾನು ಜಿಹಾದ್ ಪದದ ಕುರಿತು ಯಾರ ಬಾಯಲ್ಲೂ ಕೇಳಿರಲಿಲ್ಲ.  ಪ್ರಪ್ರಥಮವಾಗಿ ಜಿಹಾದ್ ಎನ್ನುವ ಪದ ಕೇಳಿದ್ದು ೨೦೦೧ ರಲ್ಲಿ. ಅಮೆರಿಕೆಯ ಮೇಲೆ ನಡೆದ ಧಾಳಿಯಲ್ಲಿ ಅಮೇರಿಕಾ ಮತ್ತು ಇತರೆ ಪಾಶ್ಚಾತ್ಯ ರಾಷ್ಟ್ರಗಳ ರಾಜಕೀಯ ಪಂಡಿತರುಗಳು ಉಪಯೋಗಿಸಿದ ಪದದಿಂದ ನನಗೆ ಪ್ರಥಮವಾಗಿ ಜಿಹಾದ್ ಪದದ ಪರಿಚಯವಾಯಿತು. ಇನ್ನು ಮುಸ್ಲಿಮರಿಗೆ ಧಾರ್ಮಿಕ ಆಚರಣೆಗಳ ರೀತಿ ಜಿಹಾದ್ ಅನ್ನೂ ಹೇಳಿ ಕೊಟ್ಟು, ಜಿಹಾದ್ ಅಂದರೆ ಯುದ್ಧ, ಸಿಕ್ಕ ಸಿಕ್ಕವರನ್ನು ಕೊಲ್ಲುವುದು ಎಂದಿದ್ದರೆ ವಿಶ್ವ ಈ ರೀತಿಯಲ್ಲಿ ಖಂಡಿತಾ ಇರುತ್ತಿರಲಿಲ್ಲ. ನನಗೂ ಈ ಪದದ ಬಗ್ಗೆ ಅರಿಯಲು ಇಷ್ಟೊಂದು ವರ್ಷಗಳು ಬೇಕಿರಲಿಲ್ಲ.  ೧೭೦ ಕೋಟಿ ಮುಸ್ಲಿಮ್ ಜನಸಂಖ್ಯೆಯಿರುವ ಪ್ರಪಂಚದಲ್ಲಿ ಈ ತೆರನಾದ ನಿರರ್ಥಕ ಹಿಂಸೆಯಲ್ಲಿ ತೊಡಗಿಸಿಕೊಂಡವರು ಕೆಲವೇ ಲಕ್ಷಗಳಷ್ಟು ದುರುಳರು, ಧರ್ಮ ದ್ರೋಹಿಗಳು. ಬಹುಪಾಲು ಮುಸ್ಲಿಮರು ಎಲ್ಲರಂತೆ ದುಡಿಯುತ್ತಾ, ತಮ್ಮ ಕುಟುಂಬದ ಶ್ರೇಯಸ್ಸಿಗಾಗಿ ಶ್ರಮ ಪಡುತ್ತಿರುವವರು. ಅವರಿಗೆ ಹಿಂಸೆ ಬೇಕಿಲ್ಲ. ಅವರಿಗೆ ಬೇಕಿರುವುದು ರೋಟಿ, ಕಪಡಾ, ಔರ್ ಮಕಾನ್. ತಿನ್ನಲು ಆಹಾರ, ಉಡಲು ಬಟ್ಟೆ, ಮತ್ತು ತಲೆಯ ಮೇಲೊಂದು ಸೂರು.        

ಆಸ್ಟ್ರೇಲಿಯಾದಲ್ಲಿ ಜಿಹಾದ್ ನ ಬಗ್ಗೆ ಒಂದು ಸಮ್ಮೇಳನದಲ್ಲಿ ಮಾತನಾಡಿದ ಇಸ್ಲಾಮೀ ವಿಧ್ವಾಂಸರು ಹೇಳಿದ್ದು, ಜಿಹಾದ್ ಎಂದರೆ ಶ್ರಮ ಎಂದು ಹೇಳುತ್ತಾ ಒಂದು ಒಳ್ಳೆಯ ಸುಸಂಸ್ಕೃತ ಸಮಾಜ ಕಟ್ಟಲು ವಿಶ್ವದ ಎಲ್ಲಾ ದೇಶಗಳ ಥರಾ ಆಸ್ಟ್ರೇಲಿಯಾ ದೇಶದ ಸರಕಾರ ಸಹ ಜಿಹಾದ್ ಇಲಾಖೆಗಳನ್ನು ಹೊಂದಿದೆ, ಅದೆಂದರೆ ಗೃಹ ಅಥವಾ ರಕ್ಷಣಾ ಇಲಾಖೆ, ಕುಟುಂಬ ಕಲ್ಯಾಣ ಇಲಾಖೆ  ಮತ್ತು ವಿದ್ಯಾ ಇಲಾಖೆ. ಅದರ ಅರ್ಥ ಸಮಾಜದ ರಕ್ಷಣೆ, ಒಳಿತು ಮತ್ತು ಉನ್ನತಿಗಾಗಿ ಜನ ನೇಮಿಸಿದ, ಆರಿಸಿದ ಸರಕಾರ ಪರಿಶ್ರಮ ಪಡುವುದು ಎಂದು.

ಜಿಹಾದ್ ಪದದ ಮೂಲ “ಜಹ್ದ್” ಎನ್ನುವ ಅರಬ್ ಪದದಿಂದ. ಅದರ ಅರ್ಥ ಶ್ರಮ ವಹಿಸುವುದು. ಒಬ್ಬ ದುಶ್ಚಟ ಬಿಡಲು, ಕುಡಿತ ನ್=ಬಿಡಲು , ಜೂಜಾಟ ಬಿಡಲು ಪರಿಶ್ರಮಿಸುವ ಹಾಗೆಯೇ ಜಿಹಾದ್ ಎನ್ನುವುದು ಸಹ ಒಳ್ಳೆಯ ನಡತೆಗೆ ಒಬ್ಬ ಮಾಡುವ ಪರಿಶ್ರಮ. ಮೇಲೆ ಹೇಳಿದ ಮೂಲ ಪದದಿಂದ ಬಂದ ಮತ್ತೆರಡು ಪದಗಳೆಂದರೆ ಇಜ್ತಿಹಾದ್, ಮತ್ತು ತಹಜ್ಜುದ್.

ಇಜ್ತಿಹಾದ್ ಎಂದರೆ  ಜ್ಞಾನಾರ್ಜನೆ ಎಂದು. ಈ ಇಜ್ತಿಹಾದ್ ನ ಪರಿಣಾಮವೇ ಒಂದು ಸಾವಿರ ವರ್ಷಗಳಿಗೂ ಮೊದಲು ಬಾಗ್ದಾದ್, ಕೈರೋ ಮತ್ತು ಡಮಾಸ್ಕಸ್ ನಗರಗಳಲ್ಲಿ ವಿಶ್ವವಿಖ್ಯಾತ ವಿಶ್ವ ವಿದ್ಯಾಲಯಗಳು ಸ್ಥಾಪಿತ ಗೊಂಡಿದ್ದು ಮತ್ತು ಅಲ್ಲಿಂದಲೆ ಅಂಧಕಾರದಲ್ಲಿದ್ದ ಅಇರೋಪ್ಯ ದೇಶಗಳಿಗೆ ಜ್ಞಾನ ಹರಡಿದ್ದು.

“ಇಜ್ತಿಹಾದ್” ನ ಪರಿಣಾಮವೇ ಇರಬೇಕು ಹಿಂದೂ ವೇದಗಳನ್ನು ಮುಘಲ್ ಚಕ್ರವರ್ತಿ  ಷಾಜಹಾನನ ಮಗ “ದಾರಾ ಶಿಕೋ” ಸಂಸ್ಕೃತದಿಂದ ಪರ್ಷಿಯನ್ ಭಾಷೆಗೆ ಭಾಷಾಂತರಿಸಿ ವಿಶ್ವಕ್ಕೆ ಪರಿಚಯಿಸಿದ್ದು. ಆಗಲೇ ವೇದಗಳ ಸೊಗಸು ವಿಶ್ವಕ್ಕೆ ತಿಳಿದಿದ್ದು, ಅದರ ಕಂಪು ಪಸರಿದ್ದು.   

“ತಹಜ್ಜುದ್: ಎಂದರೆ ಏಕಾಂತದ ಆರಾಧನೆ: ಗಾಢ ನಿದ್ದೆಯಿಂದ ರಾತ್ರಿ ಎಚ್ಚರವಾದರೆ ಕೂಡಲೇ ಎದ್ದು ನಮಾಜ್ ಮಾಡಬೇಕೆಂದು ನಿಯಮವಿದೆ. ಆ ನಮಾಜ್ ಕಡ್ಡಾಯವಲ್ಲ,  ಆದರೆ ಬಹಳಷ್ಟು ಜನ ಈ ತಹಜ್ಜುದ್ ನಮಾಜ್ ಮಾಡುತ್ತಾರೆ. ಏಕೆಂದರೆ ನೀರವ ರಾತ್ರಿಯಲ್ಲಿ ಇಡೀ ವಿಶ್ವ ಗಾಢ ನಿದ್ದೆಯಲ್ಲಿರುವಾಗ ತನ್ನನ್ನು ಸೃಷ್ಟಿಸಿದ ಪ್ರಭುವನ್ನು ನೆನೆದು ಸಾಷ್ಟಾಂಗ ಮಾಡಿದರೆ ಅವನ ಪ್ರಾರ್ಥನೆಗೆ ಉತ್ತರ ಸಿಗುವುದಲ್ಲದೆ ಅವನು ದೇವರಿಗೆ ತೀರಾ ಹತ್ತಿರದವನಾಗುತ್ತಾನೆ ಎನ್ನುವ ನಂಬಿಕೆಯಿಂದ.  

ಈಗ ನನ್ನ ಈ ಬರಹವನ್ನ ಅತ್ಯಂತ  ಸಂಯಮದಿಂದ ಯಾವುದೇ ಆವೇಶಕ್ಕೆ ಒಳಗಾಗದೆ ನೀವು ಓದುತ್ತಿದ್ದರೆ ನೀವು ಜಿಹಾದ್ ಮಾಡುತ್ತಿದ್ದೀರಿ ಎಂದರ್ಥ. ಅಂದರೆ ಕಾತುರತೆಯನ್ನು ಹತ್ತಿಕ್ಕಿ ಶಾಂತರಾಗಿ ಸಂಯಮದಿಂದ ಮುಂದೆ ಬರೆದಿದ್ದನ್ನು ಓದುವ, ನೀವು ಮಾಡುವ ಯತ್ನ ಅಥವಾ ಪರಿಶ್ರಮ, ಇದೇ ನಿಜವಾದ ಜಿಹಾದ್ ನ ಅರ್ಥ.  

ಈ ಮೇಲಿನ ವಿಶ್ಲೇಷಣೆ ನೋಡಿದಾಗ ಜಿಹಾದ್ ಪದಕ್ಕೂ ಹಿಂಸೆ, ಭಯೋತ್ಪಾದನೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ನಮಗೆ ತಿಳಿಯುತ್ತದೆ. “ಜುಹ್ದ್” ಒಬ್ಬ ವ್ಯಕ್ತಿ ತನ್ನ ವ್ಯಕ್ತಿತ್ವವನ್ನೂ ಕೌಶಲ್ಯವನ್ನೂ, ಉತ್ತಮ ಪಡಿಸಿ ಕೊಳ್ಳಲು ಮಾಡುವ ಪ್ರಾಮಾಣಿಕ ಯತ್ನ, “ಇಜ್ತಿಹಾದ್” ಎಂದರೆ ಆ ಪ್ರಾಮಾಣಿಕ ಯತ್ನದ ಕಡೆ ಜ್ಞಾನದ ಸಹಾಯ ಪಡೆಯುವುದು ಮತ್ತು ತನ್ನ ಪರಿಶ್ರಮ ಮತ್ತು ಜ್ಞಾನಾರ್ಜನೆಯ ಅನ್ವೇಷಣೆಯಲ್ಲಿ ತನ್ನನ್ನು ಸೃಷ್ಟಿಸಿದ ತನ್ನ ಭಗವಂತನ ಸಹಾಯ ಯಾಚಿಸುವುದು ಏಕಾಂತದ ಆರಾಧನೆಯಾದ ” ತಹಜ್ಜುದ್” ಮೂಲಕ. ಹಾಗಾದರೆ ಯುದ್ಧಕ್ಕೆ, ಹೋರಾಟಕ್ಕೆ ಅರಬ್ಬೀ  ಏನೆಂದು ಕರೆಯುತ್ತಾರೆ?   

ಜಿಹಾದ್ ಎಂದರೆ ಯುದ್ಧ ಹಿಂಸೆ ಮಾತ್ರ ಅಲ್ಲ ಎಂದಾದರೆ ಯುದ್ಧ ಮತ್ತು ಈ ತೆರನಾದ ಸ್ವರಕ್ಷಣೆಯ ಹೋರಾಟಕ್ಕೆ “ಹರ್ಬ್” ಮತ್ತು “ಕತ್ಲ್” ಎಂತಲೂ ಕರೆಯತ್ತಾರೆ. “ಹರ್ಬ್” ಎಂದರೆ ಯುದ್ಧ. “ಕತ್ಲ್” ಎಂದರೆ ಕೊಲೆ ಎಂದು. (ಹಿಂದೀ ಮತ್ತು ಉರ್ದು ಭಾಷೆಯಲ್ಲಿ ಕೂಡಾ ಕತ್ಲ್ ಅಂದರೆ ಕೊಲೆ ಎಂದೂ, ಕಾತಿಲ್ ಎಂದರೆ ಕೊಲೆಗಾರ ಎಂದೂ ಕರೆಯುತ್ತಾರೆ).

ಹಾಗಾದರೆ ಮಾಧ್ಯಮಗಳು ಮತ್ತು ಇಸ್ಲಾಂ ಟೀಕಾಕಾರ ರಿಗೆ ಈ ವಿವರಣೆ ಆಗಲಿ, ಅರಬ್ಬೀ ವ್ಯಾಕರಣದ ಈ ಅಂಶಗಳಾಗಲಿ ತಿಳಿದಿಲ್ಲ ಎಂದಲ್ಲ. ಇಸ್ಲಾಮನ್ನು ದೂಷಿಸುವ ಪರಿಪಾಠ ಇಂದು ನಿನ್ನೆಯದಲ್ಲ. ಕ್ರೈಸ್ತರ ಮೊದಲ ಧರ್ಮ ಯುದ್ಧ ದ (crusade) ನಂತರ ಮತ್ತು ಎರಡನೇ ಧರ್ಮ ಯುದ್ಧದಲ್ಲಿ ಇಂಗ್ಲೆಂಡಿನ ರಾಜ richard the lion heart ಮುಸ್ಲಿಮರ ವಿರುದ್ಧ ನಡೆದ ಜೆರುಸಲೆಂ ಕದನದಲ್ಲಿ ಸೋತ ನಂತರ ಆರಂಭ ಗೊಂಡ ಈ wittch hunting and slandering campaign ನಿರಂತರವಾಗಿ ನಡೆದುಕೊಂಡು ಬಂದು ಸೆಪ್ಟಂಬರ್ ಧಾಳಿಯ ನಂತರ ಆಧುನಿಕ ರೂಪ ಪಡೆದುಕೊಂಡಿತು.  

ಜಿಹಾದ್ ಅಂದರೆ ಯುದ್ಧ ಅಲ್ಲವೇ ಅಲ್ಲ ಎಂತಲೋ? ಸ್ವರಕ್ಷಣೆಗೆ ರಾಷ್ಟ್ರಗಳು ಯುದ್ಧ ಸಾರಿವೆ, ಅವನ್ನು ಜಿಹಾದ್ ಎಂದೂ ಕರೆಯಲಾಗಿದೆ. ಆದರೆ ಕಂದಹಾರದ, ಪಾಕಿಸ್ತಾನದ ಗುಡ್ಡ ಗಾಡಿನಲ್ಲಿ ಅವಿತುಕೊಂಡು ನಮ್ಮ ಮೇಲೆ ಮತ್ತು ಅಲ್ಲಿನ ಮುಗ್ಧ ಜನರ ಮೇಲೆ ಆಕ್ರಮಣ ನಡೆಸಿ ರಕ್ತ ಪಾತ ಎಸಗುವ ಮತಾಂಧರು ಜಿಹಾದ್ ಅಲ್ಲ ಮಾಡುತ್ತಿರುವುದು. ಧರ್ಮದ್ರೋಹದ, ಅಮಾನವೀಯ ಕೃತ್ಯ.

ಇಸ್ಲಾಮೀ ರಾಜಕೀಯ ಶಾಸ್ತ್ರದಲ್ಲಿ ಎರಡು ರೀತಿಯ ರಾಷ್ಟ್ರ ಸಮೂಹಗಳ ಉಲ್ಲೇಖವಿದೆ. ಒಂದು, “ದಾರುಲ್ ಹರ್ಬ್”, ಮತ್ತೊಂದು “ದಾರುಲ್ ಇಸ್ಲಾಮ್”. ದಾರುಲ್ ಹರ್ಬ್ ಎಂದರೆ ಶತ್ರು ರಾಷ್ಟ್ರ. ಕಾರಣವಿಲ್ಲದೆ ಕಾಲು ಕೆರೆದು ಜಗಳಕ್ಕೆ ನಿಲ್ಲುವ ಪಾಕಿಸ್ತಾನ ಮತ್ತು ಚೀನಾ ದೇಶಗಳಂತೆ. ಇಂಥ ರಾಷ್ಟ್ರಗಳು ದಾರುಲ್ ಹರ್ಬ್ ವ್ಯಾಖ್ಯಾನಕ್ಕೆ ಬರುತ್ತವೆ. ದಾರುಲ್ ಇಸ್ಲಾಂ ಎಂದರೆ ಮುಸ್ಲಿಂ ರಾಷ್ಟ್ರ. ಮುಸ್ಲಿಂ ರಾಷ್ಟ್ರ ಮಾತ್ರವಲ್ಲ ಇಸ್ಲಾಮನ್ನು ಗೌರವಿಸಿ, ಆದರಿಸಿ ಮುಸ್ಲಿಮರ ಆರಾಧನೆಗೆ ಅನುಕೂಲ ಮಾಡಿಕೊಡುವ, ಮಸೀದಿ, ಮದ್ರಸಗಳನ್ನು ಕಟ್ಟಲು ಸಹಾಯ ಮಾಡುವ, ಸರಿಸಮನಾದ ಹಕ್ಕುಗಳನ್ನೂ ನೀಡಿ ಕಾಳಜಿ ವಹಿಸುವ ಮುಸ್ಲಿಮೇತರ ರಾಷ್ಟ್ರವೂ ದಾರುಲ್ ಇಸ್ಲಾಂ ವ್ಯಾಖ್ಯಾನದ ಅಡಿಗೆ ಬರುತ್ತದೆ. ನಮ್ಮ ಭವ್ಯ ಭಾರತ ಈ ರಾಷ್ಟ್ರದ ವ್ಯಾಖ್ಯಾನಕ್ಕೆ ಒಳಪಡುತ್ತದೆ. ಇಲ್ಲಿ ಬಹುಸಂಖ್ಯಾತ ಹಿಂದೂಗಳು ಮುಸ್ಲಿಮರನ್ನು, ಅವರ ಸಂಸ್ಕೃತಿಯನ್ನು ಆದರಿಸುವ ರೀತಿ ನೋಡಿ ಜಗತ್ತಿನ ಇತರೆ ಇಸ್ಲಾಮೀ ದೇಶಗಳು ಮೆಚ್ಚುಗೆ ವ್ಯಕ್ತಪಡಿಸಿವೆ. ಅಮೋಘ ಭಾರತೀಯ ಸಂಸ್ಕಾರವನ್ನು,  ಹೃದಯ ವೈಶಾಲ್ಯತೆಯನ್ನು ಕೊಂಡಾಡಿವೆ.  ಹೀಗಿರುವಾಗ ಈ ದೇಶದ ಮೇಲೆ ಶಸ್ತ್ರ ಪ್ರಯೋಗ ಮಾಡುವುದು, ಅಮಾಯಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಮಾತ್ರವಲ್ಲ ಅಂಥ ವಿದ್ರೋಹಿಗಳನ್ನು ನೇರ ಮಾಡಲು ಸಾಧ್ಯವಿಲ್ಲದಿದ್ದರೆ ನೇರವಾಗಿ ನೇಣಿಗೆ ಕಳಿಸಬೇಕಾದ್ದು ನಾಗರೀಕ ಸಮಾಜ ಮಾಡಬೇಕಾದ ಪ್ರಥಮ ಕೆಲಸ.

ಪ್ರಪಂಚದಲ್ಲಿ ಎಲ್ಲಾ ಧರ್ಮಕ್ಕೆ ಸೇರಿದ ಜನರು ಒಂದಲ್ಲ ಒಂದು ರೀತಿಯ ಹೋರಾಟದಲ್ಲಿ ನಿರತರಾಗಿದ್ದನ್ನು ನಾವು ಕಂಡಿದ್ದೇವೆ. ಯೂರೋಪ್ ಖಂಡದಲ್ಲಿ ೬೦ ಲಕ್ಷ ಯೂಹೂದ್ಯರನ್ನು ಕೊಂದಿದ್ದು, gas chamber ಗಳಿಗೆ ಕಳಿಸಿ ನಿರ್ನಾಮ ಮಾಡಿದ್ದು “ನಾಜಿಗಳು”. ನಾಜಿಗಳು ಯಾವ ಧರ್ಮೀಯರೆಂದು ಯಾರಿಗಾದರೂ ತಿಳಿದಿದೆಯೇ? ಬೋಸ್ನಿಯಾದಲ್ಲಿ ೮೦ ಸಾವಿರಕ್ಕೂ ಮುಸ್ಲಿಮರನ್ನು ಕೊಂದವರು “ಸರ್ಬಿಯನ್ನರು”. ಸರ್ಬಿಯನ್ನರು ಯಾವ ಧರ್ಮೀಯರೆಂದು ಎಲ್ಲೂ ಉಲ್ಲೇಖವಿಲ್ಲ. ಶ್ರೀಲಂಕೆಯಲ್ಲಿ ಅಮಾಯಕ ತಮಿಳರ ಹಿಂಸೆ, ಕೊಲೆ ನಡೆಸಿದ್ದು “JVP” ಯವರು, JVP ಯವರು ಯಾವ ಧರ್ಮದರೆಂದು ಉಲ್ಲೇಖವಿಲ್ಲ. ಅದೇ ಶ್ರೀಲಂಕೆಯಲ್ಲಿ ೨೫ ವರ್ಷಗಳಿಗೂ ಹೆಚ್ಚು ಕಾಲ ಬೌದ್ಧರನ್ನೂ, ಅಲ್ಲಿನ ದೊಡ್ಡ ದೊಡ್ಡ ನಾಯಕರನ್ನೂ ಕೊಂದವರು “ವ್ಯಾಘ್ರರು”. ವ್ಯಾಘ್ರರು ಯಾವ ಧರ್ಮೀಯರೆಂದು ಉಲ್ಲೇಖವಿಲ್ಲ. ಇತ್ತೀಚೆಗೆ ಅಮೆರಿಕೆಯಲ್ಲಿ ಅಪಾರ ಆಯುಧ ಶೇಖರಿಸಿ ದೊಡ್ಡ ರೀತಿಯ ಹಿಂಸೆಗೆ ಅಣಿಯಾಗುತ್ತಿದ್ದ ಜನರು “ಹುಟಾರಿ” ಪಂಗಡದವರು. “ಹುಟಾರಿ” ಗಳು ನಂಬಿದ ಧರ್ಮ ಯಾವುದು ಎಂದು ಯಾರಿಗೂ ತಿಳಿದಿಲ್ಲ. ಆದರೆ ಈ ಮಾನದಂಡ ಮುಸ್ಲಿಮರೆಂದು ಕರೆದುಕೊಂಡು ಧರ್ಮಕ್ಕೆ ಕಳಂಕ ತರುವ ಜನರಿಗೆ ನೀಡಲು ಮಾಧ್ಯಮ, ಕುಬುದ್ಧಿಯ ಪಂಡಿತರು ತಯಾರಿಲ್ಲ. ಸಿಕ್ಕಿ ಹಾಕಿಕೊಂಡವನ ಹೆಸರು ಮುಸ್ಲಿಂ ಆದರೆ ಸಾಕು ಟಾಮ್ ಟಾಮ್ ಶುರು; ಮುಸ್ಲಿಮ್ ಭಯೋತ್ಪಾದಕ, ಶಂಕಿತ ಮುಸ್ಲಿಂ ತೀವ್ರವಾದಿ, ಮುಸ್ಲಿಂ ಮೂಲಭೂತವಾದಿ, islamic activist, muslim radical, muslim fundamentalist…………………ಯಾವ ರೀತಿಯ ಲೇಬಲ್ಲುಗಳು ಬೇಕು ನಿಮಗೆ, ಆ ರೀತಿಯ ಲೇಬಲ್ಲುಗಳು ತಯಾರು. ಹಾಗಾದರೆ ಮೇಲೆ ನಾನು ಉದ್ಧರಿಸಿದ ಹತ್ಯಾಕಾಂಡಗಳ ಕರ್ತೃಗಳು ಯಾರು? “ಹುಟಾರಿ”, “ನಾಜಿ” ಎಂದರೆ ಮಂಗಳ ಗ್ರಹದಿಂದಲೋ ಅಥವಾ ಬೇರಾವುದು ಗ್ರಹದಿಂದ ಬಂದಪ್ಪಳಿಸಿದ ಅನರ್ಥವೋ? ವ್ಯಾಘ್ರ ಅಂದರೆ ಒಂದು ರೀತಿಯ ಸೊಂಕೋ, ರೋಗವೋ? JVP ಎಂದರೆ AIDS ರೀತಿಯ ಬ್ಯಾನೆಯೋ? ಸರ್ಬಿಯನ್ ಎಂದರೆ ಪ್ರಳಯವೋ, ಜ್ವಾಲಾಮುಖಿಯೋ? ಏಕೀ ಇಬ್ಬಂದಿತನ? ಲೇಖನಿಗೆ ದ್ರೋಹ ಬಗೆಯುವ ಪರಿಪಾಠ? ಲೇಖನಿ ಹುತಾತ್ಮನ ರಕ್ತಕ್ಕಿಂತಲೂ ಪವಿತ್ರ ಅಂತಾರೆ. ಆದರೆ ಮೇಲೆ ಹೇಳಿದ ಉದಾಹರಣೆಗಳಲ್ಲಿ ಎಷ್ಟೊಂದು ಪಾವಿತ್ರ್ಯ ಅವಿತುಕೊಂಡಿದೆ ನೋಡಿ. 

ಜನರನ್ನು ಲೇಬಲ್ ಅಡಿಯಲ್ಲಿ ವ್ಯಾಖ್ಯಾನಿಸಿ ದೂರ ಮಾಡುವುದಕ್ಕಿಂತ ಒಳ್ಳೆಯ ಕೆಲಸ ಸಂವಾದದ ಪ್ರಕ್ರಿಯೆ ಶುರು ಮಾಡುವುದು. ಜನರ ಮಧ್ಯೆ ಕಂದಕ ತೋಡಲೆಂದೇ ಅವತರಿಸಿದ ಸಮೂಹವನ್ನು ನಾಗರೀಕ ಸಮಾಜ ದೂರ ಮಾಡಿ ಎಲ್ಲರೂ ಮೇಲೆ ಕೂತ ಭಗವಂತನ ಮಕ್ಕಳು, ಎಲ್ಲರಿಗೂ ಸರಿಸಮನವಾಗಿ ವಿಶಾಲವಾದ ಭೂಮಿಯನ್ನು ಹರಡಿ ತಾರತಮ್ಯ ಮಾಡದೆ ಗಾಳಿ ಬೆಳಕು ನೀರು ಒದಗಿಸುತ್ತಿರುವ ಮಹಾ ಪ್ರಭುವಿನ ಮಕ್ಕಳೆಂದು ಭಾವಿಸಿ ಬದುಕನ್ನು ಸಾಗಿಸುವುದು. ಹಕ್ಕಿಯಂತೆ ಹಾರಲು ಕಲಿತ, ಮೀನಿನನಂತೆ ಈಜಲು ಕಲಿತ ಮನುಷ್ಯ ಮನುಷ್ಯನ  ರೀತಿ ಬಾಳಲು ಕಲಿಯುವುದನ್ನು ಕಲಿಯುವುದು ಅತ್ಯವಶ್ಯಕ. man should “relearn” how to live like a man.

ನಾ ಕಂಡುಕೊಂಡ ಇಸ್ಲಾಂ

ಇಸ್ಲಾಂ ಧರ್ಮದ ಬಗೆಗಿನ ಸಂಶಯ, ಅಪನಂಬಿಕೆಗಳು, ತಾರಕಕ್ಕೇರಿದ್ದು ನಮ್ಮೆಲ್ಲರ ಮಧ್ಯೆ ಇರುವ, ನಾವು ದಿನವೂ ಕಾಣುವ ಇಸ್ಲಾಮಿನ ಆಚಾರ ವಿಚಾರಗಳು ಇದ್ದಕ್ಕಿದ್ದಂತೆ ಅಪರಿಚಿತವಾಗಿ ಇದೀಗ ತಾನೇ ಭೂಲೋಕಕ್ಕೆ ಅವತರಿಸಿದ ಅನರ್ಥದಂತೆ ಚಿತ್ರಿಸಲಾಗುತ್ತಿದೆ ಮುಸ್ಲಿಮರನ್ನು ಮತ್ತು ಅವರು ನಂಬಿಕೊಂಡು ಬಂದ ಧರ್ಮವನ್ನು. ಸೆಪ್ಟಂಬರ್ ೧೧, ೨೦೦೧ ರಲ್ಲಿ ಅಮೆರಿಕೆಯ ಗಗನಚುಂಬಿ ಕಟ್ಟಡಗಳನ್ನು ೧೯ ಜನ ಅರಬ್ ಮೂಲದ ಯುವಕರು ಕದ್ದೊಯ್ದ ವಿಮಾನಗಳನ್ನು ಕ್ಷಿಪಣಿಗಳಂತೆ ಉಪಯೋಗಿಸಿ ನೆಲಸಮಗೊಳಿಸಿದ್ದು, ಸಾವಿರಾರು ಜನರ ಸಾವು ನೋವುಗಳಿಗೆ ಕಾರಣವಾಗಿದ್ದು ಇಸ್ಲಾಮಿನ ಬಗ್ಗೆ ಭಯ ಜನರ ಮನಸ್ಸಿನಲ್ಲಿ ಬೇರೂರಲು ಸಹಾಯಮಾಡಿತು. ತಮ್ಮ ಸ್ವಾರ್ಥ, ಕ್ಷುಲ್ಲಕ, “ಅಡಗಿರಿಸಿದ ಕಾರ್ಯತಂತ್ರ” ಸಾಧಿಸುವ ನಿಟ್ಟಿನಲ್ಲಿ ಇಸ್ಲಾಂ ವಿರೋಧಿಗಳು ಮಾಧ್ಯಮಗಳ ಸಹಾಯದಿಂದ ಈ ಭಯ ಜನರ ಮನಸ್ಸಿನಲ್ಲಿ ಮತ್ತಷ್ಟು ಬೇರೂರಿಸಿ ಒಬ್ಬ ಮುಸ್ಲಿಮನ ದರ್ಶನವಾದರೂ ಮುಗಿಬೀಳುವಂತೆ ಅಥವಾ ವಿಷ ಜಂತುವನ್ನು  ಕಂಡಂತೆ ಆಡಲು ಕಾರಣಕರ್ತರಾದರು.

ಇಷ್ಟೊಂದು ನಿರ್ಭೀತಿಯಿಂದ, ಅಸಾಧಾರಣ ದೈರ್ಯದಿಂದ, ಸ್ವಂತ ಜೀವವನ್ನೂ ಲೆಕ್ಕಿಸದೆ ಆಕ್ರಮಣ ಮಾಡಿದವರ  ideology ಯಾವುದು, ಅದರ ಉದ್ದೇಶವೇನು ಹೀಗೆ ಕುತೂಹಲ ಮುಗಿಲು ಮುಟ್ಟಿ ಇಸ್ಲಾಮಿನ ಬಗ್ಗೆ ಅಲ್ಪ ಸ್ವಲ್ಪ ಜ್ಞಾನವಿದ್ದವರೆಲ್ಲಾ ಏಕಾಏಕಿ ಇಸ್ಲಾಮಿನ ಪಂಡಿತರಾಗಿ ಪುಸ್ತಕಗಳನ್ನೂ, ಲೇಖನಗಳನ್ನೂ ಬರೆದರು. ತನಗೆ ಅರ್ಥವಾಗದ ಖಾಯಿಲೆ ತಗುಲಿ ಕೊಂಡಾಗ ಖೊಟ್ಟಿ ವೈದ್ಯರ ಮೊರೆ ಹೋಗುವ ವ್ಯಕ್ತಿಯ ಹಾಗೆ ಜನರು ಅರೆ ಬುದ್ಧಿವಂತ ಪಂಡಿತರ ಮೊರೆ ಹೋದರು ಇಸ್ಲಾಮನ್ನು ಅರಿಯಲು. ಆದರೆ ಅವರಿಗೇ ಸಿಕ್ಕಿದ್ದು ಅರೆಬೆಂದ, ಕಪೋಲಕಲ್ಪಿತ ವಿಚಾರಗಳು. ಈ ಬೆಳವಣಿಗೆ ಪಾಶ್ಚಾತ್ಯ ದೇಶಗಳಿಗೆ ಮಾತ್ರ ಸೀಮಿತವಾಗಲಿಲ್ಲ. ಸಾಗರ ದಾಟಿ ನಮ್ಮ ತೀರಕ್ಕೂ ಬಂದವು ಸಂಶಯಗಳು, ಕಪೋಲಕಲ್ಪಿತ ವಿಚಾರಗಳು. ೮೦೦ ವರ್ಷಗಳಿಗೂ ಮಿಕ್ಕು ಆಳಿದ ಒಂದು ಸಂಸ್ಕೃತಿ, ತಮ್ಮ ಭಾಷೆ, ಉಡುಗೆ, ತೊಡುಗೆ, ವಾಸ್ತು ಶಿಲ್ಪಿ, ಸಂಗೀತ ಹೀಗೆ ಬದುಕಿನ ಸಂಸ್ಕೃತಿಯ ಎಲ್ಲಾ ಮಜಲುಗಳಲ್ಲಿ ತನ್ನದೇ ಆದ, ಎಂದಿಗೂ ಅಳಿಸಲಾಗದ, ಛಾಪನ್ನು ಒತ್ತಿದ ಧರ್ಮವನ್ನು ಮತ್ತೊಮ್ಮೆ ನಾಡಿನವರಿಗೆ ಪರಿಚಯಮಾಡಿ ಕೊಡಬೇಕಾದ ಅವಶ್ಯಕತೆ ಬಗ್ಗೆ  ದುಃಖ ತೋರಿದರೂ ನಾನು ನಂಬಿದ ಮತ್ತು ೧೬ ಕೋಟಿಗೂ ಮಿಕ್ಕು ಭಾರತೀಯರು ಕೊಂಡಾಡುವ ಒಂದು ಸಂಸ್ಕೃತಿಯ ಬಗ್ಗೆ ಬರೆಯೋಣ ಎನ್ನಿಸಿತು. ಭಾರತವನು ಆಳಿದ ಮುಸ್ಲಿಮ ಅರಸರು, ಚಕ್ರವರ್ತಿಗಳು ಆಳಬೇಕಾದ ರೀತಿಯಲ್ಲಿ ಆಳಿದ್ದರೆ ಈ ಲೇಖನ ಬರೆಯುವ ಅವಶ್ಯಕತೆ ಇರುತ್ತಿರಲಿಲ್ಲವೇನೋ. ನಾನು ಇಸ್ಲಾಂ ಪಂಡಿತನಲ್ಲ. ನನ್ನ ದೈನಂದಿನ ಬದುಕಿನ ಇಸ್ಲಾಮನ್ನು ನಿಮಗೆ ಪರಿಚಯ ಮಾಡಿಸುವತ್ತ ನನ್ನ ಪ್ರಯತ್ನ ಮಾಡುತ್ತೇನೆ. ಸಂದು ಹೋದ ಕಾಲದ, ವೈಭವದ ಬಗ್ಗೆ ಪ್ರಲಾಪಿಸದೆ, ಹಲುಬದೆ, ನನ್ನ ಸಂಸ್ಕೃತಿ ಮಾತ್ರ ಮೇಲು ಎನ್ನುವ ಉಡಾಫೆತನ ತೋರಿಸದೆ, ನಿಮ್ಮ ಮುಂದೆ ಇಟ್ಟಿದ್ದೇನೆ ನಾನು ನಂಬಿದ ನಂಬಿಕೆ, ಧರ್ಮ, ಮತ್ತು ಜೀವನ ರೀತಿಯ ಒಂದು ತುಣುಕನ್ನು.   

ಇಸ್ಲಾಂ ಅಂದರೇನು:  ಇಸ್ಲಾಂ ಅಂದರೆ ಶರಣಾಗುವುದು, ನಿರಾಕಾರನಾದ ಪ್ರಭುವಿನ ಆಜ್ಞೆಗಳಿಗೆ ಶರಣಾಗುವುದು ಎಂದು. ಸಲಾಂ ಎಂದರೆ ಶಾಂತಿ ಎನ್ನುವ ಪದದ ಮೂಲವೂ ಇದೇ ಆದ್ದರಿಂದ ಇಸ್ಲಾಂ ಶಾಂತಿಯ ಧರ್ಮವೂ ಹೌದು. ಆದರೆ characteristically ಇಸ್ಲಾಮನ್ನು ಶಾಂತಿಯ ಧರ್ಮ ಮಾತ್ರ ಎಂದು ವಿವರಿಸಲಾಗದು. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸಬೇಕೆನ್ನುವ ಅಸ್ವಾಭಾವಿಕ impractical ನಡವಳಿಕೆಗೆ ಇಸ್ಲಾಂ ಒಪ್ಪದೇ ಸಾಮಾಜಿಕ ನ್ಯಾಯಕ್ಕಾಗಿ, ಮನುಷ್ಯನ ಸ್ವಾಭಾವಿಕ ಆತ್ಮ ಗೌರವಕ್ಕಾಗಿ, ಕುಟುಂಬ,ಜೀವ, ಸೊತ್ತುಗಳ ರಕ್ಷಣೆಗಾಗಿ ಸಿದ್ಧರಾಗಲು ಕರೆ ನೀಡುತ್ತದೆ. ಆದರೆ ಯಾವುದೇ ರೀತಿಯ ಹೋರಾಟವೂ ದೇವಾಜ್ಞೆಗಳ ಚೌಕಟ್ಟಿನಲ್ಲಿ, ನ್ಯಾಯ ಸಮ್ಮತ ರೀತಿಯಲ್ಲಿ ನಡೆಯಬೇಕೆನ್ನುವ ಇಸ್ಲಾಂ ಅದೇ ಉಸಿರಿನಲ್ಲಿ ಎದುರಾಳಿಯನ್ನು ಕ್ಷಮಿಸಿ, ಹೃದಯ ವೈಶಾಲ್ಯತೆ ತೋರಿ ದೈವಸಂಪ್ರೀತಿಗಳಿಸಿಕೊಳ್ಳಲು ಕರೆ ನೀಡುತ್ತದೆ ತನ್ನ ಅನುಯಾಯಿಗಳಿಗೆ.  

ಇಸ್ಲಾಮಿನ ಮೂಲಭೂತ ನಂಬಿಕೆ ಮತ್ತು ಅಡಿಗಲ್ಲೆಂದರೆ ಏಕದೇವೋಪಾಸನೆ. ಈ ವಿಷಯದ ಬಗ್ಗೆ ಇಸ್ಲಾಂ ನ ನಿಲುವು uncompromising. ಏಕದೇವೋಪಾಸನೆಯ ಈ ವೈಶಿಷ್ಟ್ಯ ಕ್ರೈಸ್ತ ಧರ್ಮಕ್ಕೆ ಸೇರಿದ ಇಸ್ಲಾಂ ಟೀಕಾಕಾರರ ಮತ್ತು ಹಿಂದೂ ಧಾರ್ಮಿಕ ಗುರುಗಳ ಮೆಚ್ಚುಗೆಯನ್ನೂ ಗಳಿಸಿತು. ಈ ನಿಲುವನ್ನು ಯಾವುದೇ ಕಾರಣಕ್ಕೂ ಸಡಿಲಿಸದೆ ಇದ್ದ ಕಾರಣ ಪ್ರವಾದಿಗಳು ತಮ್ಮ ಹುಟ್ಟೂರಾದ ಮಕ್ಕಾ ಪಟ್ಟಣದಿಂದ ಹೊರಗಟ್ಟಲ್ಪಟ್ಟರು.

“ಕಾಬಾ” ಇರುವುದು ಮಕ್ಕಾ ನಗರದಲ್ಲಿ. ಚೌಕಾಕಾರದ, ಕಪ್ಪು ವಸ್ತ್ರದಿಂದ ಹೊದೆಯಲ್ಪಟ್ಟ ಈ ಕಟ್ಟಡದ ಸುತ್ತಾ ಆಗಿನ ಕಾಲದ ಮಕ್ಕಾ ಮತ್ತು ಅರೇಬಿಯಾದ ನಿವಾಸಿಗಳು ಪ್ರದಕ್ಷಣೆ ಹಾಕುತ್ತಿದ್ದರು. ೩೬೦ ಕ್ಕೂ ಹೆಚ್ಚು ವಿಗ್ರಹಗಳಿದ್ದ ಈ ಭವನಕ್ಕೆ ಸ್ತ್ರೀಯರು ನಗ್ನರಾಗಿ ಪ್ರದಕ್ಷಿಣೆ ಮಾಡುತ್ತಿದ್ದರು. ಸಾಮಾಜಿಕವಾಗಿ ಅಲ್ಲಿನ ಜನರು ಕುಡಿತ, ಜೂಜು, ಪರಸ್ತ್ರೀ ಸಂಗ, ಬಡ್ಡಿ ವ್ಯವಾಹಾರ, ವ್ಯಾಪಾರದಲ್ಲಿ ಮೋಸ, ತೂಕದಲ್ಲಿ ಮೋಸ, ಕಾಳ ಧಂಧೆ, ಹುಟ್ಟಿದ ಮಗು ಹೆಣ್ಣಾದರೆ ಜೀವಂತವಾಗಿ ಹೂಳುವುದು ಹೀಗೆ ನೂರಾರು ಅನಿಷ್ಟಗಳಿಂದ ತಮ್ಮ ಜೀವನ ಶೈಲಿಯನ್ನಾಗಿ ಮಾಡಿ ಕೊಂಡಿದ್ದರು. ಈ ದುರ್ವರ್ತನೆಗಳು ಕೂಡದು, ನಮ್ಮ ಪ್ರತೀ ಕ್ರಿಯೆಗಳು ದೇವನನ್ನು ಸಾಕ್ಷಿಯನ್ನಾಗಿ ಇಟ್ಟುಕೊಂಡು, ಅವನ ಸಂಪ್ರೀತಿಗಾಗಿ ನಮ್ಮ ಬದುಕನ್ನು ಮುಡಿಪಿಡಬೇಕು ಎಂದ ಪ್ರವಾದಿಗಳ ಮಾತು ಅಲ್ಲಿನ ಜನರಿಗೆ ಹಿಡಿಸಲಿಲ್ಲ. ನಮ್ಮ ಆರಾಧನಾ ಕ್ರಮಗಳು ಮತ್ತು ಜೀವನ ರೀತಿಯನ್ನು ವಿರೋಧಿಸದೆ ಇದ್ದರೆ ನಿನ್ನ ಕಾಲಿನ ಬುಡಕ್ಕೆ ನಮ್ಮ ಸಂಪತ್ತನ್ನೆಲ್ಲಾ ಸುರಿಯುತ್ತೇವೆ, ನಿನ್ನನ್ನು ನಮ್ಮ ನಾಯಕನನ್ನಾಗಿ ಮಾಡುತ್ತೇವೆ, ರಾಜನನ್ನಾಗಿ ಅಂಗೀಕರಿಸುತ್ತೇವೆ ಎಂದು ಆಮಿಷ ತೋರಿಸಿದ ಬುಡಕಟ್ಟಿನ ಜನರ ಮಾತಿಗೆ ಒಪ್ಪದೇ ಆರಾಧನೆ ಸೃಷ್ಟಿ ಕರ್ತನಿಗೆ ಮಾತ್ರ, ನಮ್ಮ ಕೈಯ್ಯಾರೆ ಸೃಷ್ಟಿಸಿದ ಸೃಷ್ಟಿಗಳಿಗಲ್ಲ ಎಂದು ಸೊಲ್ಪವೂ ವಿಚಲಿತರಾಗದೆ ಧೃಢ ಸ್ವರದಲ್ಲಿ ಪ್ರವಾದಿಗಳು ಹೇಳಿದಾಗ ಅವರನ್ನು ಮಕ್ಕಾ ನಗರದಿಂದ ಹೊರಗಟ್ಟಿದರು ಅಲ್ಲಿನ ನಿವಾಸಿಗಳು.  ಪ್ರವಾದಿಗಳು ತಮ್ಮ ಅನುಚರರೊಂದಿಗೆ ಭಾರವಾದ ಹೃದಯದಿಂದ ತಮ್ಮ ಪ್ರೀತಿಯ ಮಕ್ಕಾ ಪಟ್ಟಣ ಬಿಟ್ಟು ಮದೀನಾ ನಗರಕ್ಕೆ ಬಂದರು. ಇದನ್ನು “ಹಿಜರಿ” ಎಂದು ಕರೆಯುತ್ತಾರೆ. ಹಿಜರಿ ಎಂದರೆ ವಲಸೆ ಎಂದರ್ಥ. ಏಕದೇವೋಪಾಸನೆಯ ವಿಷಯದಲ್ಲಿ ಮಕ್ಕಾ ಜನರೊಂದಿಗೆ ರಾಜಿ ಮಾಡಿ ಕೊಂಡಿದ್ದರೆ ಪ್ರವಾದಿಗಳು ಕಷ್ಟ ಕಾರ್ಪಣ್ಯ, ಸಾಮಾಜಿಕ ಬಹಿಷ್ಕಾರಗಳನ್ನು ಎದುರಿಸ ಬೇಕಿರಲಿಲ್ಲ. ಪ್ರವಾದಿಗಳ ಈ ನಿಲುವು ಅವರಿಗೆ ಹೊಸ ಬೆಂಬಲಿಗರನ್ನು ಗಳಿಸಿ ಕೊಟ್ಟಿತು.  

ಮಾನವರೆಲ್ಲಾ ಸಮಾನರು, “ಸನ್ನಡತೆಯ ಗಂಡು” ಮತ್ತು “ಸನ್ನಡತೆಯ ಹೆಣ್ಣು” ಇವೆರಡೇ ಜಾತಿಗಳು ಎಂದು ಸಾರಿದ ಪ್ರವಾದಿಗಳಿಗೆ ಮದೀನಾ ನಗರದಲ್ಲಿ ಅಭೂತಪೂರ್ವವಾದ ಸ್ವಾಗತ ಸಿಕ್ಕಿತು. ಕಡು ಕಪ್ಪ್ಪು ತ್ವಚೆಯ ಗುಲಾಮರು ಸಮಾಜದ ಕುಲೀನ ವರ್ಗದವರೊಂದಿಗೆ ಬೆರೆತು ಸರಿ ಸಮಾನರಾಗಿ ಬಾಳುತ್ತಿದ್ದರು. ನಮಾಜಿನ ಸಮಯ ನೀಡುವ ಕರೆ “ಅದಾನ್” ಪ್ರಪ್ರಥಮವಾಗಿ ಕಾಬಾ ಭವನದ ಮೇಲೆ ನಿಂತು ನೀಡಿದ್ದು ಇಥಿಯೋಪಿಯಾ ದೇಶದ ಗುಲಾಮ “ಬಿಲಾಲ್”. ಈ ಸಮಾನತೆಯ ಮೋಹಕ ಆದರ್ಶ ವಿಶ್ವದಾದ್ಯಂತ ದಂಡು ದಂಡಾಗಿ ಜನ ಇಸ್ಲಾಮಿಗೆ ಶರಣಾಗುವಂತೆ ಮಾಡಿತು.         

ಆರಾಧನೆ:  ದಿನದಲ್ಲಿ ಐದು ಹೊತ್ತು ಯಾವುದೇ ಸಮಜಾಯಿಷಿ ಇಲ್ಲದೆ ನಮಾಜ್ ನಿರ್ವಹಿಸುವುದು ಇಸ್ಲಾಮಿನ ಮತ್ತೊಂದು ಅಡಿಗಲ್ಲು. ಹೆಣ್ಣಿಗೆ ಶಾರೀರಿಕ ತೊಡಕು ಹೊರತು ಪಡಿಸಿ, ಮತ್ತು ಗಂಡು ತನ್ನ ಕೊನೆಯುಸಿರಿರುವವರೆಗೂ ನಮಾಜನ್ನು ನಿರ್ವಹಿಸಲೇಬೇಕು. ಪ್ರಯಾಣದಲ್ಲೂ, ಶಾರೀರಿಕ ಅಸ್ವಸ್ಥ ಸ್ಥಿತಿಯಲ್ಲೂ, ರಣರಂಗದಲ್ಲೂ, ಯಾವುದೇ ವಿನಾಯಿತಿ ಇಲ್ಲದೆ ಕ್ಲಪ್ತ ಸಮಯಕ್ಕೆ ಸೃಷ್ಟಿ ಕರ್ತನ ಆರಾಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಅರುಣೋದಯ ದ ಪ್ರಾರ್ಥನೆ, ಸೂರ್ಯ ನೆತ್ತಿಗೆ ಬಂದಾಗಿನ ಹೊತ್ತು, ಅಪರಾಹ್ನ, ಸಂಜೆ, ಮತ್ತು ರಾತ್ರಿ ಇವು ನಮಾಜ್ ಗೆಂದು ನಿಯುಕ್ತ ಗೊಂಡ ಸಮಯಗಳು. ಸಮಯ ತಪ್ಪಿಸಿದರೆ ಆ ಆರಾಧನೆ  ಚಲಾವಣೆ ಕಳೆದು ಕೊಂಡ ಕಾಸಿನಂತೆ. ನಿರರ್ಥಕ. ಸಮಯ ತಪ್ಪಿಸಿದ ಆರಾಧನೆ ನನಗೆ ಬೇಡ ಎನ್ನುತ್ತಾನೆ ಪರಮಾತ್ಮ. ಈ ನಿಯಮದಲ್ಲಿ ಬದುಕಿನಲ್ಲಿ ಯಶಸ್ಸಿಗೊಂದು ಪಾಠ ಇಲ್ಲಿದೆ ನೋಡಿ. ನಮಾಜ್ ಸಮಯಪ್ರಜ್ಞೆಯನ್ನು ಜನರಲ್ಲಿ ಬೆಳೆಸುತ್ತದೆ, ಸಮಯದ ಮಹತ್ವದ ಬಗ್ಗೆ ನಿಷ್ಠುರತೆ ತೋರಿಸುತ್ತದೆ. ಆದರೆ ಈ ಸಾರವನ್ನು ಮುಸ್ಲಿಮ್ ಜನಾಂಗ ಅರಿಯದೆ ಇರುವುದು ಖೇದಕರ.

ಇಸ್ಲಾಮಿನಲ್ಲಿ ಸ್ತ್ರೀ:  ಮನೋಹರವಾದ, ವಿಶ್ವ ಕೊಂಡಾಡಿದ ಆದರ್ಶಗಳಾದ ಏಕ ದೇವೋಪಾಸನೆ, ಮನುಷ್ಯರಲ್ಲಿ ಸಮಾನತೆ, ಯಾವುದೇ ಪರಿಸ್ಥಿತಿಯಲ್ಲೂ ದೇವರ ಆರಾಧನೆಯಂಥ ವಿಚಾರಗಳು ಮಾತ್ರವಲ್ಲ ಹೆಣ್ಣಿನ ಸ್ವಾತಂತ್ರ್ಯದ ಕಡೆಗೂ ಇಸ್ಲಾಂ ಗಮನ ಹರಿಸಿತು. ಆಗಿನ ಕಾಲದಲ್ಲಿ ಹೆಣ್ಣಿಗೆ ಆಸ್ತಿಯಲ್ಲಿ ಹಕ್ಕು ಯಾರೂ ಕೇಳಿರದ, ಕಂಡಿಲ್ಲದ ಒಂದು ಬೆಳವಣಿಗೆ. ಪ್ರಪ್ರಥಮವಾಗಿ ಹೆಣ್ಣಿಗೆ ತನ್ನ ತಂದೆಯ ಆಸ್ತಿಯಲ್ಲಿ ಹಕ್ಕನ್ನು ನೀಡುವ ಮೂಲಕ ಒಂದು ಕ್ರಾಂತಿ ಕಾರೀ ಬೆಳವಣಿಗೆಗೆ ಇಸ್ಲಾಂ ನಾಂದಿ ಹಾಡಿತು. ಇಸ್ಲಾಂ ಅನುಷ್ಠಾನಕ್ಕೆ ತಂದ ೮೦೦  ವರುಷಗಳ ತರುವಾಯ ಇಂಗ್ಲೆಂಡ್ ಈ ಕಾನೂನನ್ನು ಅನುಷ್ಠಾನಕ್ಕೆ ತಂದಿತು. ಹೆಣ್ಣಿಗೆ ಆತ್ಮವಿಲ್ಲ ಮತ್ತು ಸ್ವರ್ಗ ಲೋಕದಿಂದ ಮನುಷ್ಯ ಹೊರ ಹಾಕಲ್ಪಟ್ಟಿದ್ದು ಹೆಣ್ಣಿನ ತಪ್ಪಿನಿಂದ, ಪ್ರಪಂಚದ ಎಲ್ಲಾ ಕೋಲಾಹ, ಕಲಹಗಳಿಗೆ ಹೆಣ್ಣೇ ಕಾರಣ ಎಂದು ಮಹಿಳೆಯನ್ನು ಪಾಶ್ಚಾತ್ಯರಂತೆ ಜರಿಯದೆ ದೇವರಿಗೆ ಭಯ ಪಟ್ಟು ಬದುಕುವ ಗಂಡು ಮತ್ತು ಹೆಣ್ಣು ಹೇಗೆ ಸಮಾನರು ಎಂದು ಕುರಾನಿನ ಸೂಕ್ತದಲ್ಲಿ ವಿವರವಾಗಿ ಹೇಳಲಾಗಿದೆ. ಈಗಿನ ಹೆಣ್ಣಿನ ಶೋಷಣೆಗೆ, ದುರ್ಗತಿಗೆ ಮನುಷ್ಯನ ಅತಿಯಾಸೆ ಮತ್ತು ದಬ್ಬಾಳಿಕೆ ಕಾರಣವೇ ಹೊರತು ಧರ್ಮವಲ್ಲ ಎನ್ನುವುದನ್ನು ಇಸ್ಲಾಮಿನ ಆದರ್ಶಗಳನ್ನು ಅರಿತವರಿಗೆ ಅರಿವಾಗುವುದು.   ವಿಧವೆಯರಿಗೆ ಅವರ ಉಡುಗೆ ತೊಡುಗೆಗಳಲ್ಲಿ ಯಾವುದೇ ನಿರ್ದಿಷ್ಟ ನಿರ್ಬಂಧ ಹೇರದೆ ಅವರ ಮರು ವಿವಾಹಕ್ಕೆ ಅನುವು ಮಾಡಿಕೊಡಲು ಸಮಾಜದಿಂದ ಇಸ್ಲಾಂ ಬಯಸುತ್ತದೆ.

ಸ್ತ್ರೀಯರಿಗೆ ಯಾವುದೇ ಸ್ವಾತಂತ್ರ್ಯವಿಲ್ಲ ಎಂದು ಹೇಳುವ ಟೀಕಾಕಾರರಿಗೆ ಮುಸ್ಲಿಮ್ ಸಮಾಜ ಉತ್ತರ ನೀಡಿದೆ. ವಿಶ್ವದಲ್ಲಿ ಇದುವರೆಗೂ ಐದು (ತುರ್ಕಿ, ಪಾಕಿಸ್ತಾನ, ಬಾಂಗ್ಲ ದೇಶ, ಕಿರ್ಗಿಸ್ತಾನ್) ಮುಸ್ಲಿಂ ಮಹಿಳಾ ಪ್ರಧಾನಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದು ಅವರನ್ನು ಆರಿಸಿದ ಮತದಾರರಲ್ಲಿ ಪುರುಷರೂ ದೊಡ್ಡ ಸಂಖ್ಯೆಯಲ್ಲಿ ಇದ್ದರು ಎನ್ನುವುದನ್ನು ಮನಗಾಣಬೇಕು. ಅಷ್ಟೇ ಅಲ್ಲದೆ ಜೋರ್ಡನ್, ಮತ್ತು ಕತಾರ್ ದೇಶಗಳ ರಾಣಿಯರು ಮತ್ತು ಸಿರಿಯಾ ದೇಶದ ಅಧ್ಯಕ್ಷರ ಪತ್ನಿ ಆ ದೇಶಗಳ ರಾಜಕಾರಣಗಳಲ್ಲಿ ಸಕ್ರಿಯವಾಗಿ ಬಾಗವಹಿಸುತ್ತಿರುವರು. ಪಾಕಿಸ್ತಾನದಲ್ಲಿ ಮೊಟ್ಟ ಮೊದಲ  ಮಹಿಳಾ ಬ್ಯಾಂಕನ್ನು ಸಂಸ್ಥಾಪನೆ ಮಾಡಿದ್ದು ಓರ್ವ ಮಹಿಳೆ.  

ಬಹು ಪತ್ನಿತ್ವ:  ಕೆಲವೊಂದು ಸನ್ನಿವೇಶಗಳಲ್ಲಿ, ಕಟ್ಟುನಿಟ್ಟಾದ ಷರತ್ತುಗಳೊಂದಿಗೆ ಪುರುಷ ಬಹು ಪತ್ನಿತ್ವ ಪಾಲಿಸಬಹುದು. ಆದರೆ ಪತ್ನಿಯರ ನಡುವೆ ನ್ಯಾಯ ಪಾಲಿಸುವಂತೆ ಇಸ್ಲಾಂ ಕಠಿಣ ಶರತ್ತುಗಳನ್ನು ಒಡ್ಡಿದ್ದರಿಂದ ಬಹುಸಂಖ್ಯಾತ ಮುಸ್ಲಿಮರು ಏಕ ಪತ್ನೀವ್ರತಸ್ಥರಾಗಿದ್ದಾರೆ ಎಂದು ನಾವು ಕಾಣಬಹುದು. ಈ ತೆರನಾದ ಒಂದಕ್ಕಿಂತ ಹೆಚ್ಚು ಹೆಂಡಿರನ್ನು ಹೊಂದುವ ಸೌಲಭ್ಯವಿದ್ದರೂ ವಿಶ್ವದ ಶೇಕಡಾ ೯೫ ಕ್ಕೂ ಅಧಿಕ ಮುಸ್ಲಿಂ ಪುರುಷರು ಓರ್ವ ಪತ್ನಿಯಿಂದಲೇ ಸಂತೃಪ್ತರಾಗಬೇಕಾದರೆ ಮುಸ್ಲಿಮರಲ್ಲಿರುವ ಆಳವಾದ ಧಾರ್ಮಿಕ ಪ್ರಜ್ಞೆ ಮತ್ತು ದೈವ ಭಯ ಇರುವುದರಿಂದಲೇ ಸಾಧ್ಯ ಎಂದು ಮನಗಾಣಬಹುದು.  

ಮುಸ್ಲಿಮೇತರರೊಂದಿಗೆ ಇಸ್ಲಾಂ:  ಸಂಪೂರ್ಣ ಅರೇಬಿಯಾ ತನ್ನ ಉನ್ನತ ಆದರ್ಶಗಳಿಗೆ ತಲೆ ಬಾಗಿ ನಡೆಯುತ್ತಿದ್ದರೂ ಪ್ರವಾದಿಗಳು ಯಹೂದ್ಯರೊಂದಿಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದರು.

ಪ್ರವಾದಿಗಳ ನಂತರ ಖಲೀಫಾ ಆಳ್ವಿಕೆಯ ಪರಂಪರೆ ಆರಂಭವಾಯಿತು. ಪ್ರವಾದಿಗಳ ನಂತರದ ಸುಮಾರು ೫೦೦ -೬೦೦ ವರ್ಷಗಳನ್ನು ಇಸ್ಲಾಮಿನ ಸುವರ್ಣ ಯುಗ ಎಂದು ಇತಿಹಾಸಕಾರರು ಬಣ್ಣಿಸುತ್ತಾರೆ.

ಮುಸ್ಲಿಂ ಆಳ್ವಿಕೆಯಲ್ಲಿ ಮುಸ್ಲಿಮೇತರರ ಮೇಲೆ “ಜೆಜಿಯಾ” ತಲೆಗಂದಾಯ ವಿಧಿಸಿದ ಕಾರಣ ನೋಡೋಣ. ಎಲ್ಲಾ ಮುಸ್ಲಿಂ ರಾಜರುಗಳು ಈ ಪದ್ಧತಿಯನ್ನು ಅನುಸರಿಸಲಿಲ್ಲ. ಮುಸ್ಲಿಂ ಆಳ್ವಿಕೆಯಲ್ಲಿ, ಮುಸ್ಲಿಂ ದೇಶದಲ್ಲಿ ನೆಲೆಸುವ ಮುಸ್ಲಿಮೇತರರಿಗೆ ಕೆಲವು ಸೌಲಭ್ಯ ಕೊಡುವ ಕಾರಣ ಈ ತೆರಿಗೆ ವಿಧಿಸಲಾಯಿತು. ಮುಸ್ಲಿಮೇತರರು ಸೈನ್ಯದಲ್ಲಿ ಭಾಗವಹಿಸುವ ಅವಶ್ಯಕತೆಯಿಲ್ಲ, ಮತ್ತು ಪ್ರತೀ ಮುಸ್ಲಿಮನೂ ಪಾವತಿಸಲೇ ಬೇಕಾದ “zakah” ಎನ್ನುವ ತೆರಿಗೆಯಿಂದಲೂ ಮುಸ್ಲಿಮೇತರರಿಗೆ ವಿನಾಯಿತಿ ನೀಡಲಾಯಿತು. ಹಾಗೆಯೇ ಅವರ ಪ್ರಾಣ, ಆಸ್ತಿ ರಕ್ಷಣೆ ಸಹ ಮುಸ್ಲಿಂ ದೇಶದ ಹೊಣೆಯಾಗಿತ್ತು.  

ಯಾವ ಧರ್ಮಕ್ಕೆ ಸೇರಿದವನಾದರೂ ನೆರೆ ಹೊರೆಯವನೊಂದಿಗೆ ಸ್ನೇಹದಿಂದ  ಇರಲೂ, ನೆರೆಯವನ ಎಲ್ಲಾ ಅವಶ್ಯಕತೆ ಪೂರೈಸಲು ಮುಸ್ಲಿಮರನ್ನು ಇಸ್ಲಾಂ ಉತ್ತೇಜಿಸುತ್ತದೆ. ಇಸ್ಲಾಮಿನ ಎರಡನೇ ಖಲೀಫಾ (ಧರ್ಮಾಧಿಕಾರಿ, ಇಸ್ಲಾಮಿನಲ್ಲಿ “ರಾಜ” ಎನ್ನುವ ಪದ್ಧತಿಯಿಲ್ಲ, ಅದು ನವೀನ ಅವಿಷ್ಕಾರ) ಉಮರ್ ಅವರ ಕಾಲದಲ್ಲಿ ಒಬ್ಬ ಯಹೂದ್ಯ ವ್ಯಕ್ತಿ ತನ್ನ ಮನೆ ಪಕ್ಕದ ಖಾಲಿ ಜಾಗವನ್ನ ಮಾರುವಾಗ ದೊಡ್ಡ ಮೊತ್ತದ ಹಣ ಕೇಳುತ್ತಾನೆ. ಕಾರಣ ಕೇಳಿದಾಗ ಖಾಲಿ ಜಾಗದ ಪಕ್ಕದಲ್ಲಿ ಧರ್ಮ ನಿಷ್ಠ ಮುಸ್ಲಿಂ ವ್ಯಕ್ತಿ ವಾಸವಿರುವುದರಿಂದ ಆ ವ್ಯಕ್ತಿಯಿಂದ ಯಾವುದೇ ತಕರಾರು, ಸಮಸ್ಯೆಗಳು ಬರಲು ಸಾಧ್ಯವಿಲ್ಲದೆ ಇರುವುದರಿಂದ ಆ ಖಾಲಿ ಸ್ಥಳಕ್ಕೆ ಹೆಚ್ಚು ಹಣ ಎಂದು ವಿವರಣೆ ನೀಡುವ ಯಹೂದಿ ಪರೋಕ್ಷವಾಗಿ ಇಸ್ಲಾಮಿನ ಆದರ್ಶಗಳನ್ನು ಕೊಂಡಾಡುತ್ತಾನೆ.  

ಕೊನೆಯದಾಗಿ ಇಸ್ಲಾಮಿನ ಹೆಸರಿನಲ್ಲಿ ಹಿಂಸೆ, ರಕ್ತ ಪಾತ ಹರಿಸುತ್ತಿರುವವರು ತಾವು ನಂಬಿದ ಧರ್ಮದ ಆದರ್ಶಗಳಿಗೆ ದ್ರೋಹ ಬಗೆಯುತ್ತಿದ್ದು ಅವರ ಕುಕೃತ್ಯಗಳಿಗೆ ಇಸ್ಲಾಂನ  ಮೇಲೆ ಹೊಣೆ ಹೊರಿಸುವುದು ತಪ್ಪು.  ವಿನಾಕಾರಣ ಯಾವುದೇ ನಿರಪರಾಧಿ, ಮುಗ್ಧ ವ್ಯಕ್ತಿಯನ್ನು ಕೊಂದರೆ ಇಡೀ ಮಾನವಕುಲವನ್ನೇ ಕೊಂದಂತೆ ಎಂದು ಸಾರುವ ಇಸ್ಲಾಂ ಒಬ್ಬ ವ್ಯಕ್ತಿಯ ಜೀವ ಉಳಿಸಿದರೂ ಜೀವ ಉಳಿಸಿದ ವ್ಯಕ್ತಿ ಮಾನವ ಕುಲವನ್ನೇ ಉಳಿಸಿದ ಕೀರ್ತಿಗೆ ಪಾತ್ರನಾಗುತ್ತಾನೆ ಎಂದು ಹೇಳಿದ್ದರೆ ಭಯೋತ್ಪಾದನೆಯ ಬಗೆಗಿನ ಇಸ್ಲಾಮ್ ನ ನಿಲುವು ಏನು ಎಂದು ತಿಳಿಯುತ್ತದೆ.  ರಾಜಕೀಯ ಕಾರಣಗಳಿಗಾಗಿ ಹಿಂಸೆಯ ಮಾರ್ಗ ಹಿಡಿರುವ ದುರುಳರಿಗೆ ಅವರು ಮಾಡುತ್ತಿರುವುದು “ಪ್ರತಿಕ್ರಿಯಾತ್ಮಕ” ಹಿಂಸೆ ಎಂತಲೋ, “ಧರ್ಮಕ್ಕಾಗಿ ಕಯ್ಯೆತ್ತುವುದು” ಎಂತಲೂ ಮುಸ್ಲಿಮರು ಸಮರ್ಥಿಸದೆ ಒಕ್ಕೊರಲಿನಿಂದ ಖಂಡಿಸಿದ್ದಾರೆ. ರಕ್ತಪಾತ, ಸಾಮೂಹಿಕ ಕೊಲೆಯಂಥ ಕೃತ್ಯ ಎಸಗುವ ಜನರು ಇಸ್ಲಾಂ ಧರ್ಮಕ್ಕೆ ಸೇರಿದವರಲ್ಲ ಎಂದು ಕಳೆದವರ್ಷ ಹೈದರಾಬಾದಿನಲ್ಲಿ ಸೇರಿದ್ದ ದೇಶದ ಮುಸ್ಲಿಂ ಪಂಡಿತರುಗಳು ಇಸ್ಲಾಂ ವಿಶ್ವ ಶಾಂತಿ ಬಯಸುತ್ತದೆ ಎಂದು ಸಾರಿದ್ದರು.

ಮುಸ್ಲಿಮರಲ್ಲಿರುವ ಅನಕ್ಷರತೆ, ಮತ್ತಿತರ ನ್ಯೂನತೆಗಳಿಗೆ ಮುಸ್ಲಿಮರು ಹೊಣೆಯೇ ಹೊರತು ಅವರು ನಂಬುವ ಇಸ್ಲಾಂ ಧರ್ಮವಲ್ಲ. ಪವಿತ್ರ ಗ್ರಂಥ ಕುರಾನ್ ನ ಮೊದಲ ಸೂಕ್ತಗಳು ಆರಂಭಗೊಂಡಿದ್ದು ಈ ವಾಕ್ಯದಿಂದ; “ಓದು, ನಿನ್ನನ್ನು ಸೃಷ್ಟಿಸಿದ ಪ್ರಭುವಿನ ನಾಮದಿಂದ” ಎಂದು. ಇಸ್ಲಾಂ ಜ್ಞಾನಕ್ಕೆ ಎಷ್ಟು ಮಹತ್ವ ನೀಡಿದೆ ಎಂದು ಈ ಸೂಕ್ತದಿಂದ ತಿಳಿಯಬಹುದು. ಇಸ್ಲಾಂ ಧರ್ಮವನ್ನ ಅರಿಯಬೇಕೆಂದರೆ ನೇರವಾಗಿ ಧರ್ಮಗ್ರಂಥಗಳನ್ನು ಓದಿ ಅರ್ಥ ಮಾಡಿಕೊಳ್ಳಬೇಕೆ ವಿನಃ  ಮುಸ್ಲಿಮರ ನಡವಳಿಕೆ ನೋಡಿ ಇವರ ಧರ್ಮ ಹೀಗೆ ಎಂದು ತೀರ್ಪು ನೀಡುವುದು ತಪ್ಪು.      

ಪ್ರವಾದಿಗಳ ಬಗ್ಗೆ ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ರಾಮಕೃಷ್ಣ ರಾವ್ ಸುಂದರವಾದ ಪುಸ್ತಿಕೆ ಬರೆದಿದ್ದಾರೆ. ಆಂಗ್ಲ ಭಾಷೆಯಲ್ಲಿ ಇರುವ ಆ ಪುಸ್ತಿಕೆ ಸೌದಿ ಅರೇಬಿಯಾದ ಮಸೀದಿಗಳಲ್ಲೂ ಕಾಣಬಹುದು. ಪುಸ್ತಿಕೆಯ ಹೆಸರು Muhammad, the prophet of Islam.

ಚಾಣಾಕ್ಷ ಕೈದಿ

ಇಟಲಿ ದೇಶದ ಮುದುಕನೊಬ್ಬ ನ್ಯೂಯಾರ್ಕ್ ನಗರದಲ್ಲಿ ವಾಸವಾಗಿರುತ್ತಾನೆ. ಅವನಿಗೆ ಟೊಮೇಟೊ ಸಸಿಗಳನ್ನು ತನ್ನ ತೋಟದಲ್ಲಿ ನೆಡುವ ಆಸೆ, ಯಾವಾಗಲೂ ಸಹಾಯ ಮಾಡುತ್ತಿದ್ದ ತನ್ನ ಏಕೈಕ ಪುತ್ರ ಜೈಲಿನಲಿದ್ದಿದ್ದರಿಂದ ಅವನಿಗೆ ಸಹಾಯಕ್ಕೆ ಯಾರೂ ಇರಲಿಲ್ಲ.

ಒಂದು ದಿನ ಮಗನಿಗೆ ಪತ್ರ ಬರೆಯುತ್ತಾನೆ ತಂದೆ,

ಪ್ರೀತಿಯ ವಿನ್ಸೆಂಟ್,

ನನಗೆ ದುಃಖ ವಾಗುತ್ತಿದೆ ಏಕೆಂದರೆ ನೀನು ಜೈಲಿನಲ್ಲಿರುವುದರಿಂದ ಎಂದಿನಂತೆ ಈ ಸಲ ಟೊಮೆಟೋ ಸಸಿ ನೆಡಲು ಆಗುತ್ತಿಲ್ಲ. ನನಗೂ ವಯಸ್ಸಾಯಿತು, ನೀನಿದ್ದರೆ ಎಷ್ಟು ಒಳ್ಳೆಯದಿತ್ತು ಎಂದು ಸಂಕಟ ತೋಡಿ ಕೊಳ್ಳುತ್ತಾನೆ.

ಮಗನ ಉತ್ತರ ಬರುತ್ತದೆ, ಪ್ರೀತಿಯ ಪಪ್ಪಾ, ಈಗಲೇ ತೋಟದಲ್ಲಿ ಉಳುವಿಕೆ ಶುರು ಮಾಡಿಬಿಡಬೇಡ, ಏಕೆಂದರೆ ಅಲ್ಲೇ ನಾನು ಹೆಣಗಳನ್ನು ಹೂತು ಹಾಕಿರುವುದು ಎಂದು.

ಈ ಪತ್ರ ಓದಿದ ಪೊಲೀಸರು ಕೂಡಲೇ ಅವನ ಅಪ್ಪನ ಮನೆಗೆ ತೆರಳಿ ಹೆಣ ತೆಗೆಯಲೆಂದು ತೋಟವನ್ನು ಅಗೆದು ಹಾಕಿದಾಗ ಅವರಿಗೆ ಏನೂ ಸಿಗದೇ ಮುದುಕನಿಗೆ ಕ್ಷಮೆ ಹೇಳಿ ಹಿಂದಿರುಗುತ್ತಾರೆ.

ಮಗ ಮತ್ತೊಂದು ಪತ್ರ ಬರೆಯುತ್ತಾನೆ,

ಪಪ್ಪಾ, ನೀನೀಗ ನಿನ್ನ ಸಸಿಗಳನ್ನು ನೆಡಬಹುದು, ನಾನಿರುವ ಈ ಪರಿಸ್ಥಿತಿಯಲ್ಲಿ ನನ್ನಿಂದ ಇಷ್ಟನ್ನ ಮಾತ್ರ ಮಾಡಲು ಸಾಧ್ಯ

ಕೈ ಕೊಟ್ಟ ದೇವರು

ಅರ್ಜೆಂಟೀನ ವಿಶ್ವಕಪ್ ನಿಂದ ಹೊರಕ್ಕೆ, ಅದೂ ಹೀನಾಯ ಸೋಲಿನೊಂದಿಗೆ. ೪-೦ ಎಂದರೆ ಸಾಧಾರಣ ಸೋಲಲ್ಲ ಫುಟ್ ಬಾಲ್ ಕ್ರೀಡೆಯಲ್ಲಿ. ತಮ್ಮ ಆಟವನ್ನು ಅತ್ಯಂತ ಸಾಂಪ್ರದಾಯಿಕ ಮತ್ತು ಕಾಪಿ ಬುಕ್ ಶೈಲಿಯಲ್ಲಿ ಅರ್ಜೆಂಟಿನ ತಂಡ ತಮ್ಮ brute muscle power ತೋರಿಸಿ ಒರಟಾಗಿ ಆಡುವ ಜರ್ಮನಿ ಎದುರು ಯಾವುದೇ ಉತ್ತರವಿಲ್ಲದೆ ಬರಿಗೈಲಿ ಮರಳ ಬೇಕಾಯಿತು ಡ್ರೆಸ್ಸಿಂಗ್ ಕೋಣೆಗೆ, ತದನಂತರ ತಮ್ಮ ದೇಶಕ್ಕೆ. ೧೯೮೬ ವಿಶ್ವಕಪ್ ನಲ್ಲಿ ಸಂಭವಿಸಿದ ಹಾಗೆ ಈ ಸಲ ದೇವರು ಬರಲಿಲ್ಲ ಸಹಾಯಕ್ಕೆ ಅರ್ಜೆಂಟಿನ ತಂಡವನ್ನು ಜರ್ಮನಿ ನುಂಗುವಾಗ. ವಿಶ್ವಕಪ್ ೧೯೮೬, ಮೆಕ್ಸಿಕೋ: ಜಗತ್ತಿನ ಬಲಿಷ್ಠ ಫುಟ್ಬಾಲ್ ಆಡುವ ದೇಶಗಳು ಬಂದಿಳಿದವು ಮೆಕ್ಸಿಕೋ ದೇಶಕ್ಕೆ ವಿಶ್ವಕಪ್ ತಮ್ಮದಾಗಿಸಿಕೊಳ್ಳಲು. ಆದರೆ ಬೇರೆಲ್ಲಾ ಪಂದ್ಯಗಳಿಗಿಂತ ಖ್ಯಾತಿ ಪಡೆದ ಪಂದ್ಯ ಇಂಗ್ಲೆಂಡ್, ಅರ್ಜೆಂಟಿನ ನಡುವಿನದು. ಕ್ವಾರ್ಟರ್ ಫೈನಲ್ ಎಂದರೆ ಫೈನಲ್ ನಿಂದ ಕೇವಲ ಎರಡು ಗಜ ದೂರ. ಎದುರಾಲಿಯನ್ನು ಮಣಿಸಿ ಸೆಮಿ ತಲುಪಲು ಆತುರ, ಉತ್ಸಾಹ ಈ ಎರಡು ತಂಗಳಲ್ಲಿ. ಅತ್ಯಂತ ಪ್ರತಿಭಾವಂತ ತಂಡಗಳು ಬೇರೆ, ಇನ್ನು ಸ್ಪರ್ದೆಯ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ತಮ್ಮ ಕ್ರೀಡಾ ಪ್ರತಿಭೆಯ ನ್ನು ವಿಶ್ವದ ಪ್ರದರ್ಶನಕ್ಕಿಟ್ಟ ಈ ಎರಡೂ ತಂಡಗಳು ಹೇಗೇ ಸೆಣಸಿದರೂ ಪೂರ್ವಾರ್ಧದ ಸ್ಕೋರು ಎಲ್ಲಾ ಸೊನ್ನೆ. ಪಾನೀಯದ ನಂತರ ಹೊಸ ರಣ ನೀತಿಯೊಂದಿಗೆ ಮೈದಾನ ಪ್ರವೆಶಿಸಿದ ತಂಡಗಳು ಮೇಲುಗೈ ಸಾಧಿಸುವತ್ತ ತಮ್ಮ ಗಮನ ಕೇಂದ್ರೀಕರಿಸಿದವು. ಈಗ ಬಂತು ಉತ್ತರಾರ್ಧದ ಆರನೇ ನಿಮಿಷದಲ್ಲಿ ವಿಶ್ವ ದಂಗಾದ ಒಂದು ದೃಶ್ಯ. ಗೋಲ್ ಪೋಸ್ಟ್ ನ ಹತ್ತಿರ ಚೆಂಡನ್ನು ತಂದ ಮೆರಡೋನ ಮತ್ತು ವಲ್ದಾನೋ ಇಂಗ್ಲೆಂಡಿನ ರಕ್ಷಣೆಯನ್ನು ಭೇಧಿಸಲು ಹೆಣಗಿದರು. ಇಂಗ್ಲೆಂಡಿನ ರಕ್ಷಣಾ ಆಟಗಾರ ಸ್ಟೀವ್ ಹಾಡ್ಜ್ ಚೆಂಡನ್ನು ತನ್ನ ನಿಯಂತ್ರಣಕ್ಕೆ ತರುವ ಗಡಿಬಿಡಿಯಲ್ಲಿ ಒಂದು ರೀತಿಯ ಅನಿಶ್ಚಿತ ಸ್ಥಿತಿ, ಈ ವೇಳೆಗೆ ನುಗ್ಗಿದ ಮೆರಡೋನ ಚೆಂಡನ್ನು ತನ್ನ ನಿಯಂತ್ರಣಕ್ಕೆ ತೆಗೆದು ಕೊಳ್ಳಲು ಶ್ರಮ ಪಡುತ್ತಿದ್ದಂತೆ ಹಾಡ್ಜ್ ಸಹ ಅಲ್ಲಿಗೆ ಬಂದು ಮೆರಡೋನ ರನ್ನು ತಡೆಯುವಷ್ಟರಲ್ಲಿ ಮೆರಡೋನ ತಲೆಯಿಂದ ಚಿಮ್ಮಿದ ಚೆಂಡು ಗೋಲ್ ಪೋಸ್ಟಿನೊಳಕ್ಕೆ ಸೇರಿಕೊಂಡಿತು. ಆದರೆ ನಿಜವಾಗಿಯೂ ಚೆಂಡು ಮೆರಡೋನ ರ ತಲೆಯ ಹೊಡೆತದಿಂದ ಮಾತ್ರವಲ್ಲ ಅವರ ಎಡಗೈಯ ಸಹಾಯದಿಂದ ಗೋಲ್ ಪೋಸ್ಟಿಗೆ ಸೇರಿಕೊಂಡಿತು. ಟುನೀಸಿಯ ದೇಶದ ರೆಫೆರಿ “ಅಲಿ ಬಿನ್ ನಾಸರ್” ಈ ವಿವಾದಾತ್ಮಕ ಗೋಲನ್ನು ಸಕ್ರಮ ಎಂದು ಘೋಷಿಸಿದರು. ಈ ಚಮತ್ಕಾರದ ಗೋಲು ಇಂಗ್ಲೆಂಡ್ ತಂಡಕ್ಕೆ “ಗೋಳಾಗಿ” ಪರಿಣಮಿಸಿತು. ಪಂದ್ಯ ಗೆದ್ದ ನಂತರ ಮೆರಡೋನ ಪತ್ರಿಕಾ ಗೋಷ್ಠಿಯಲ್ಲಿ ಗೋಲಿನ ಬಗ್ಗೆ ವಿವರಿಸುತ್ತಾ ಈ ಚಮತ್ಕಾರದ ಗೋಲ್ ನಲ್ಲಿ “ದೇವರ ಕೈ” ಇತ್ತು ಎಂದು. ಸ್ವಲ್ಪ ನನ್ನ ತಲೆಯಿಂದಲೂ, ಸ್ವಲ್ಪ ದೇವರ ಕೈ ಯಿಂದಲೂ ಬಂದ ಗೋಲಿದು ಎಂದು ವರ್ಣಿಸಿದ ಮೆರಡೋನ “hand of god” ಅಪರೂಪದ ಪದ ಪ್ರಯೋಗವನ್ನು ಫುಟ್ ಬಾಲ್ ಕ್ರೀಡೆಗೆ ನೀಡಿದರು. ಆದರೆ ಅಂದು ೧೯೮೬ ರಲ್ಲಿ ಅರ್ಜೆಂಟಿನ ದ ನೆರವಿಗೆ ಬಂದ ದೇವರು ೨೦೧೦ ರಲ್ಲಿ ಬರಲಿಲ್ಲ. ಒಂದು ಸಲ ಬಂದು ತನ್ನ ಕೀರ್ತಿ ಹಾಳಾಗಿದ್ದು ಸಾಕು ಎಂದೆನ್ನಿಸಿರಬೇಕು ಆ ಪರಮಾತ್ಮನಿಗೆ.

ಬ್ರಾಯ್ಲರ್ ಚಿಕನ್

ಗಡಿ ಭದ್ರತಾ ಪಡೆಯ ಯೋಧರು ಬೇಟೆಗೆ ಬ್ರಾಯ್ಲರ್ ಚಿಕನ್ ಗಳಷ್ಟೇ ಸುಲಭ ಎಂದು ಹೇಳಿಕೆ ನೀಡಿ ಗಾಯದ ಮೇಲೆ ಇನ್ನಷ್ಟು ಉಪ್ಪು ಉಜ್ಜುವ ಮಾತನ್ನು ಆಡುತ್ತಿದ್ದಾರೆ ಮಾವೋ ವಾದಿಗಳು. ಮಾವೋ ಹಿಂಸೆ ಈಗೀಗ ಹೊಸ ರೂಪವನ್ನು ತಾಳುತ್ತಿದ್ದು ದಿನಗಳು ಉರುಳಿದಂತೆ ಅವರು ಇನ್ನಷ್ಟು ಹುಮ್ಮಸ್ಸಿನಿಂದ ಚೈತನ್ಯದಿಂದ ನಮ್ಮ ರಕ್ಷಣಾ ವ್ಯವಸ್ಥೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಮೊನ್ನೆ ನಡೆದ ಮತ್ತೊಂದು ಮಾರಣ ಹೋಮದಲ್ಲಿ ೨೫ ಕ್ಕೂ ಹೆಚ್ಚು ಯೋಧರನ್ನು ಕೊಂದದ್ದು ಮಾತ್ರವಲ್ಲದೆ ಕೆಲವರ ಮೃತ ದೇಹಗಳನ್ನು ವಿಕೃತ ಗೊಳಿಸಿ ಯೋಧರು ಬ್ರಾಯ್ಲರ್ ಕೋಳಿಗಳಂತೆ ಎಂದು ಹೇಳಿಕೆ ನೀಡಿ ವಿಕೃತ ಆನಂದ ಪಡೆಯುತ್ತಿದ್ದಾರೆ. ಯೋಧರನ್ನು ಇಷ್ಟು ಸಾರಾಸಗಟಾಗಿ ಕೊಲ್ಲುವ ಮಾವೋಗಳು ನಮ್ಮ ಪಡೆಗಳ ಮೇಲೆ ಮಾನಸಿಕ ಒತ್ತಡವನ್ನು ಹೇರುತ್ತಿದ್ದಾರೆ. ಈ ರೀತಿಯ ಮಾವೋಗಳ ಯಶಸ್ಸು ಇವರನ್ನು ನಿಗ್ರಹಿಸುವ ಸರಕಾರದ ಶ್ರಮಕ್ಕೆ ದೊಡ್ಡ ಪೆಟ್ಟನ್ನೇ ನೀಡುತ್ತದೆ. ಆದರೆ ಸರಕಾರ ಇಂಥ ಸಮಯದಲ್ಲಿ ಧೃತಿಗೆಡದೆ ಸಮಚಿತ್ತದಿಂದ ಪರಿಹಾರ ಕಂಡು ಕೊಳ್ಳುವ ಪ್ರಯತ್ನ ಮಾಡಬೇಕು. ಇದಕ್ಕೆಎಲ್ಲಾ ರಾಜಕೀಯ ಪಕ್ಷಗಳ ಸಕ್ರಿಯ ಸಹಕಾರ ಅತ್ಯಗತ್ಯ. ಈ ಮಟ್ಟದ ಯೋಧರ ಕಗ್ಗೊಲೆಗೆ ಬೇಕಾದ ಶಸ್ತ್ರಗಳು ಮತ್ತು ಇತರೆ ಸೌಲಭ್ಯಗಳು  ಮಾವೊಗಳಿಗೆ ಸಿಗುವುದಾದರೂ ಎಲ್ಲಿಂದ? ಈ ತೆರನಾದ ಕಾರ್ಯಾಚರಣೆಗೆ ಬೇಕಾಗುವ ಸಂಪನ್ಮೂಲ ಕಾಡಿನಲ್ಲಿ ಅವಿತುಕೊಂಡು ಹೊಂದಿಸಲಾಗದು. ಹಾಗಾದರೆ ವಿದೇಶಿ ಶಕ್ತಿಗಳ ಕೈವಾಡ ಇರಬಹುದೇ? ನಮ್ಮ ನೆರೆ ಹೊರೆ ಹೇಗೆ, ಅವರ ಉದ್ದೇಶ ಏನು ಎಂಬುದು ನಮಗೆ ತಿಳಿಯದ್ದಲ್ಲ. ಮಾವೊಗಳಿಗೆ ವಿದೇಶೀ ಸಂಪರ್ಕಗಳಿದ್ದರೆ ಅವನ್ನು ನಿಗ್ರಹಿಸಲು ಸರಕಾರ ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ಮಾವೋಗಳು ಮತ್ತು ಇತರೆ ಬಂಡುಕೋರರನ್ನು ಬಗ್ಗು ಬಡಿಯಲು ಸರಕಾರ ದೊಡ್ಡ ರೀತಿಯಲ್ಲಿ ಪಡೆಗಳನ್ನು ಸುಸಜ್ಜಿತಗೊಳಿಸುವತ್ತ ಗಮನ ಹರಿಸಿ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಬೇಕು.

ಆಧುನಿಕ ರಾಷ್ಟ್ರಗಳ ಆಧುನಿಕ ಜೀವನ ಶೈಲಿಯನ್ನು ನಾವು ಅಳವಡಿಕೊಳ್ಳಲು ಕಾತುರರಾಗಿರುವಾಗ, ಅದಕ್ಕೆ ಬೇಕಾದ ತಂತ್ರಜ್ಞಾನವನ್ನು ಅತ್ಯುತ್ಸಾಹದಿಂದ ಅಳವಡಿಸಿ ಕೊಳ್ಳಲು ನಮಗೆ ಸಾಧ್ಯವಾದರೆ ನಮ್ಮ ಪಡೆಗಳು ಓಬೀರಾಯನ ಕಾಲದ ಶಸ್ತ್ರಗಳನ್ನು ಇಟ್ಟುಕೊಂಡು ಹೋರಾಡಲು ಏಕೆ ಬಲವಂತ ಪಡಿಸಬೇಕು? ಆಫ್ಘನ್, ಇರಾಕ್ ನಲ್ಲಿರುವ ಅಮೇರಿಕನ್, ಬ್ರಿಟಿಶ್ ಯೋಧರ ಉಡುಗೆ, ಶಸ್ತ್ರ ನೋಡಿ ಮತ್ತು ನಮ್ಮ ಅಮಾಯಕ ಯೋಧರ ವೇಷ ಭೂಷಣ ನೋಡಿ, ವ್ಯತ್ಯಾಸ ತಿಳಿಯುತ್ತದೆ. ಕಾರ್ಗಿಲ್ ಯುದ್ಧದ ವೇಳೆ ಶತ್ರು ಸುಸಜ್ಜಿತನಾಗಿ ಬಂದಿದ್ದರೆ ನಮ್ಮ   ಯೋಧರ ಬಳಿ ಮಂಜಿನ ಬೂಟುಗಳೂ ಇರಲಿಲ್ಲವಂತೆ. ಭಾರತೀಯ ಸೇನೆಯ ಪಾಡು ಹೀಗಾದರೆ ಭದ್ರತಾ ಪಡೆಯವರ ಪಾಡು ಹೇಗಿರಬಹುದು?

ಮಾವೋಗಳ ಹಿಂಸಾತ್ಮಕ ಯಶಸ್ಸು ನಮಗೆ ಒಳ್ಳೆಯದಲ್ಲ. ಇವರ ಯಶಸ್ಸಿನಿಂದ ಸ್ಫೂರ್ತಿ ಪಡೆದು ಈಶಾನ್ಯ ರಾಜ್ಯಗಳ ಇತರೆ ವಿಧ್ವಮ್ಸಕ ಗುಂಪುಗಳು ದೊಡ್ಡ ರೀತಿಯಲ್ಲಿ ಧಾಳಿ ಮಾಡಲು ಉತ್ಸಾಹ ತೋರಬಹುದು.

ಮಾವೋ ಹಿಂಸೆಗೆ ಪ್ರತಿ ಹಿಂಸೆ ಪರಿಹಾರವಲ್ಲ. ಆದರೆ ಮಾತುಕತೆಗೆ ಮಾವೋಗಳು ಅಷ್ಟು ಸುಲಭವಾಗಿ ಒಪ್ಪುವವರಲ್ಲ. ಅವರು ಬಯಸುವ ಸಾಮಾಜಿಕ ಸುಧಾರಣೆಗಳು ಯಾವುದೇ ಪಕ್ಷದಿಂದಲೂ  ಸಾಧಿಸಲು ಸುಲಭ ಸಾಧ್ಯವಲ್ಲ. ಮಾವೋ ವಿಚಾರಧಾರೆ ಒಂದು ಕ್ರಾಂತಿಯಂತೆ. ನಾವು ಆರಿಸಿಕೊಂಡ ಬಂಡವಾಳಶಾಹಿ ವ್ಯವಸ್ಥೆ ಮಾವೋಗಳ ಆಶಯಗಳನ್ನು ಈಡೇರಿಸಲಾರದು. ಒಂದು ರೀತಿಯ ತ್ರಿಶಂಕು ಪರಿಸ್ಥಿತಿ ನಮ್ಮದು.

ಪಾಕ್ ಮತ್ತು ಕಾಲ್ಚೆಂಡು

ನಮ್ಮನ್ನು ಕಾಲ್ಚೆಂಡಿನಂತೆ ನಡೆಸಿಕೊಳ್ಳುವ ಪಕ್ಕದ ದೇಶ ಪಾಕಿಗೆ ಕಾಲ್ಚೆಂಡಿನ ಮೇಲೆ ಅದ್ಯಾವ ಮೋಹವೋ ಏನೋ? ಕಾಲ್ಚೆಂಡಿನಾಟ ಪಾಕ್ ನೆಲದಲ್ಲಿ ಅಷ್ಟೇನೂ ಆಳವಾಗಿ ಬೇರೂರದೆ ಇದ್ದರೂ ವಿಶ್ವದ ಕ್ರೀಡಾ ಪಟುಗಳ ಕಾಲುಗಳಿಗೆ ಸುಂದರ, ಉತ್ಕೃಷ್ಟ ಚೆಂಡುಗಳನ್ನಂತೂ ಹೊಲಿದು ಕೊಡುತ್ತಾರೆ. ಇಂಥ ಒಳ್ಳೆಯ ಚಟುವಟಿಕೆಗಳಲ್ಲಿ ಪಾಕಿಗಳು ತಮ್ಮನ್ನು ತಾವು ತೊಡಗಿಸಿಕೊಂಡರೆ ಅವರ ಆರ್ಥಿಕ ಸ್ಥಿತಿಗೆ ಒಳ್ಳೆಯದು ಮಾತ್ರವಲ್ಲ ನಮ್ಮ ಚಿತ್ತ ಸ್ವಾಸ್ಥ್ಯಕ್ಕೂ ಒಳ್ಳೆಯದೇ. ಅದ್ಹೇಗೆ ಅಂತೀರಾ? ಬಿಡುವಿನ ಸಮಯ ಅಥವಾ ಮಾಡಲು ಯಾವುದೇ ಕಸುಬಿಲ್ಲದಾದಾಗ ನಮ್ಮ ಗಡಿಯೊಳಕ್ಕೆ, ನಗರದೊಳಕ್ಕೆ ಭಯೋತ್ಪಾದಕರನ್ನು ನುಗ್ಗಿಸಿ ರಕ್ತ ಹರಿಸೋದಕ್ಕಿಂತ ಕಾಲ್ಚೆಂಡು ಹೊಲೆದು ಕ್ರೀಡಾಪಟುಗಳ ಬೆವರು ಹರಿಸಿದರೆ ನಮಗೆ ನೆಮ್ಮದಿ ತಾನೇ? ಇವರಿಗೆ ನಿರಂತರವಾಗಿ ಕಾಲ್ಚೆಂಡ ನ್ನು ಹೊಲೆಯುವ ಕೆಲಸ ಕೊಡಲು ಬೇಕಾದರೆ ಕ್ರಿಕೆಟ್ ಜೊತೆಗೇ ನಾವು ಫುಟ್ ಬಾಲ್ ಸಹ ಆಡೋಣ, ಒಂದಿಷ್ಟು ಕಾಲ್ಚೆಂಡುಗಳ ಆರ್ಡರ್ ಅವರಿಗೆ ರವಾನಿಸಿ ತುಪಾಕಿಗಳ ಸಹವಾಸದಿಂದ ಅವರನ್ನು ಮುಕ್ತಗೊಳಿ ಸೋಣ. ಸರಾಸರಿ ವರ್ಷಕ್ಕೆ ನಾಲ್ಕು ಕೋಟಿ ಚಂಡುಗಳನ್ನು ಉತ್ಪಾದಿಸುವ ಪಾಕಿ ನಗರ ಸಿಯಾಲ್ಕೋಟ್ ವಿಶ್ವ ಪ್ರಸಿದ್ಧಿ ಪಡೆದ ಕ್ರೀಡಾ ಸಂಸ್ಥೆಗಳಾದ ಅಡಿಡಾಸ್, ನೈಕಿ, ರೀಬಾಕ್, ಲೋಟೋ, ಗಳಿಗೆ ಹಗಲು ರಾತ್ರಿ ಚೆಂಡು ಗಳನ್ನು ಸರಬರಾಜು ಮಾಡಿ ವಿದೇಶಿ ವಿನಿಮಯ ಗಳಿಸುತ್ತಿದೆ. ಒಳ್ಳೆಯ ಸಂಪಾದನೆ ನೋಡಿ. ಅಮಾಯಕರ ರಕ್ತ ಹರಿಸಿ ಅವರ ಶಾಪ ಸಂಪಾದಿಸುವುದಕ್ಕಿಂತ ಈ ಕಸುಬು ಲೇಸು ಅಲ್ಲವೇ? ಇಷ್ಟು ದೊಡ್ಡ ಮೊತ್ತವನ್ನು ವಿದೇಶೀ ವಿನಿಮಯದ ಮೂಲಕ ಗಳಿಸುತ್ತಿರುವ ಪಾಕ್ ಮೇಲೆ ಈಗ ಚೀನಾ ಕಣ್ಣು ಹಾಕಿದೆಯಂತೆ. ಕೇವಲ ಆರು ಡಾಲರಿಗೆ ಚೆಂಡನ್ನು ಮಾರುತ್ತಿದ್ದ ಪಾಕಿಗಳಿಗೆ ಚೀನಾ ಸೆಡ್ಡು ಹೊಡೆದು ಮೂರು ದಾಲರಿಗೂ ಮಾರಲು ತಯಾರು ಎಂದು ಸಿಯಾಲ್ಕೋಟ್ ನ ಉದ್ಯಮಿಗಳಿಗೆ ನಡುಕ. ಕಳೆದ ವರ್ಷ ೩೦೦ ಜನ ಸೇರಿ ೫,೪೧,೧೭೬ ಮಾವಿನ ಸಸಿ ನೆಟ್ಟು ಗಿನ್ನೆಸ್ ದಾಖಲೆ ಸಹ ಮಾಡಿದರು. ಇದೊಂದು ರೀತಿಯ ವಿಸ್ಮಯಕಾರೀ ವಿಷಯ ಅಲ್ಲವೇ? ಕೋವಿ, ಬಾಂಬು, ಅಂತ ಸಾವನು ನೆಡುತ್ತಾ ಸಾಗುವ ಮಂದಿಗೆ ಮಾವಿನ ಸಸಿ ನೆಡುವ ಚಾಳಿ. ಏರುವ ಸಮುದ್ರ ಮಟ್ಟ ವನ್ನು ತಡೆಯಲು ಈ ರೀತಿ ಕರಾವಳಿ ಪ್ರದೇಶದಲ್ಲಿ ಮಾವಿನ ಸಸಿ ನೆಡುತ್ತಾರಂತೆ ಪಾಕಿಗಳು. ಅವರು ಕರಾವಳಿಯಲ್ಲಿ ಮಾವನ್ನೋ, ಆಟದ ಮೈದಾನದಲ್ಲಿ ಚೆಂಡನ್ನೋ ನೆಟ್ಟು ನಮ್ಮನ್ನು ನಮ್ಮ ಪಾಡಿಗೆ ಬಿಟ್ಟರೆ ಸಾಕು ಎಂದಿರಾ? ಈ ಮೇಲಿನ ಎರಡು ವಿದ್ಯಮಾನಗಳು ನಾಗರೀಕ ಸಮಾಜ ಮೆಚ್ಚುವಂಥದ್ದು. ಇಂಥ ಇನ್ನಷ್ಟು ಚಟುವಟಿಕೆಗಳು ಅವರ ದೇಶದೆಲ್ಲೆಡೆ ಹರಡಿ ಅವರಿಗೆ ಸುಭಿಕ್ಷೆಯನ್ನೂ ನಮಗೆ ನೆಮ್ಮದಿಯನ್ನೂ ತರಲಿ.

ಹಸಿರು, ಬಿಳಿ, ಕೇಸರಿ

ನಮ್ಮ ಹೆಮ್ಮೆಯ ಧ್ವಜದ ವರ್ಣಗಳು ಕೇಸರಿ ಬಿಳಿ ಹಸಿರು. ಈ ವರ್ಣಗಳು ತನ್ನೊಡಲಲ್ಲಿ ಕಾಣುವಂತೆ ಇಟ್ಟುಕೊಂಡ ನೀಲಿ ಚಕ್ರ ನಮ್ಮ ಪ್ರಗತಿಗೆ ಸಾಕ್ಷಿ. ಹೀಗೆ ಕೇಸರಿ ಬಿಳಿ ಹಸಿರು ತಲೆಕೆಳಗಾಗಿ ಹಸಿರು ಬಿಳಿ ಕೇಸರಿಯಾದಾಗ ವರ್ಣಗಳು ಕಂಗೆಡದಿದ್ದರೂ ನಾವಂತೂ ಖಂಡಿತಾ ಒಂದು ಕ್ಷಣ ಗರ ಬಡಿ ದವರಂತೆ ನಿಂತು ಬಿಡುತ್ತೇವೆ ಲೆಕ್ಕಾಚಾರ ಹಾಕುತ್ತಾ ಇದು ಶತ್ರುವಿನ ಹುನ್ನಾರವೋ, ಕುಹಕವೋ ಅಥವಾ ಎಂದಿಗೂ ಆಗಬಾರದ ಪ್ರಮಾದವೋ ಎಂದು. ಮೊನ್ನೆ ನಮ್ಮ ಗೃಹ ಮಂತ್ರಿಗಳು ಪಾಕಿಸ್ತಾನಕ್ಕೆ ಹೋಗಿ ಬಂದರು. ನಮ್ಮ ಆಂತರಿಕ ವಿಷಯಗಳಲ್ಲಿ ತಲೆ ಹಾಕಬೇಡಿ, ನಮ್ಮ ಬೀದಿ, ಹೋಟೆಲ್, ರೈಲು ನಿಲ್ದಾಣಗಳಲ್ಲಿ ನೆತ್ತರ ಹರಿಸಬೇಡಿ ಎಂದು ಎಷ್ಟೇ ಕೂಗಿಕೊಂಡರೂ ಕೇಳಿಸದಂತೆ ನಟಿಸುವ ಪಾಕಿಗೆ ಅವರಿರುವ ಅಡ್ಡಾ ಕ್ಕೆ ಹೋಗಿ ಬುದ್ಧಿವಾದ ಹೇಳಲು ಚಿದಂಬರಮ್ ಸಾಹೇಬರು ಇಸ್ಲಾಮಾಬಾದ್ ತಲುಪಿದರು ಅಲ್ಲಿನ ಗೃಹ ಮಂತ್ರಿ ರೆಹಮಾನ್ ಮಲಿಕ್ ರೊಂದಿಗೆ ಮಾತುಕತೆಗೆಂದು. ಮಾತುಕತೆಗೆ ಕೂತ ಕೂಡಲೇ ಪತಾಕೆ ಉಲ್ಟಾ ಆದದ್ದನ್ನು ಗಮನಿಸಿದ ಚಿದಂಬರಮ್ ಅದನ್ನು ಸರಿಪಡಿಸಿದರು. ಆದರೆ ಮಾಧ್ಯಮಗಳ ಕಣ್ಣಿಗೆ ಅದಾಗಲೇ ಬಿದ್ದಾಗಿತ್ತು. ಮಾಧ್ಯಮಗಳಿಗೂ ಬೇಕಿದ್ದು ಇಂಥ ಎಡವಟ್ಟು ಗಳೇ. ಪಾಕ್ ಏನು ಮಾಡಿದರೂ ಸುದ್ದಿಯೇ. ಅದರಲ್ಲೂ ಭಾರತೀಯರು ಒಳಗೊಂಡ ಯಾವುದೇ ವಿಷಯಾದರೂ, ಭೇಟಿಯಾದರೂ ಹೆಚ್ಚು ಹೇಳುವುದು ಬೇಕಿಲ್ಲ. ಅಷ್ಟು ಚೆಂದ ನಮ್ಮೀರ್ವರ ಸಂಬಂಧ. ಮೂರು ದಶಕಗಳ ನಂತರ ಭಾರತದ ಗೃಹ ಮಂತ್ರಿ ಪಾಕ್ ನೆಲದ ಮೇಲೆ ಎಂದಾಗಲೇ ತಿಳಿಯುತ್ತದೆ ಸಂಬಂಧ ಎಷ್ಟು ತಿಳಿಯಾಗಿದೆ ಎಂದು. ಪಾಕ್ ಅದೇನು ಮಾಡಿದರೂ ತಪ್ಪೇ ಏಕಾಗುತ್ತದೆ ಎನ್ನುವುದೇ ಕಾಡುವ ಪ್ರಶ್ನೆ.

ಸರಿ ರಾಜಕೀಯ ಬದಿಗಿಟ್ಟು ಬಾವುಟಕ್ಕೆ ಬರೋಣ. ಬಾವುಟ ಲಾಗ ಹಾಕಿ ಉಲ್ಟಾ ಆಗುವ ಪರಿಸ್ಥಿತಿ ಇದೇ ಮೊದಲಲ್ಲ. ಶಿಕಾಗೋ ನಗರದ ಡೇಲಿ ಪ್ಲಾಜ ದಲ್ಲೂ ಒಮ್ಮೆ ಇದು ಸಂಭವಿಸಿತು.

೨೦೦೮ ರಲ್ಲಿ ಭಾರತ ಆಸ್ಟ್ರೇಲಿಯಾ ನಡುವಿನ ಮೊಹಾಲಿಯಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆಯೂ ಇದೇ ತೆರನಾದ ಪ್ರಮಾದ.

ಭಯೋತ್ಪಾದನೆಯ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ತಾರೆ ಕಿಂ ಶರ್ಮಾ ಉಲ್ಟಾ ಆದ ಬಾವುಟದ ಚಿತ್ರ ತನ್ನ ಅಂಗಿ ಮೇಲೆ ಪ್ರದರ್ಶಿಸಿದ್ದರು.

ದಿಲ್ಲಿ ಪಬ್ಲಿಕ್ ಶಾಲೆಯಲ್ಲೂ ಇಂಥದ್ದೇ ಒಂದು ಘಟನೆ ನಡೆದು ಗಮನಕ್ಕೆ ತಂದವನ ಮೇಲೆಯೇ ಹರಿಹಾಯ್ದರು  ಅಲ್ಲಿನ ಪ್ರಾಂಶುಪಾಲೆ. ನಿನ್ನಂಥ ದೇಶಭಕ್ತರನ್ನು ಬಹಳ ಕಂಡಿದ್ದೇನೆ ಎಂದು ತಮ್ಮ ಕಛೇರಿಯಿಂದ ಅಟ್ಟಿದರು ಬಡಪಾಯಿಯನ್ನು. ಆತ ಕೋರ್ಟು ಕಛೇರಿ ಎಂದು ಒಂದೆರಡು ದಿನ ಅಲೆದಾಡಿ ಸುಮ್ಮನಾದ.    

ನನ್ನ ನೆನಪು ಸರಿಯಿದ್ದರೆ ೧೯೮೮ ರಲ್ಲಿ ಇಂಥದ್ದೇ ಒಂದು ಘಟನೆ ನಮ್ಮ ದೇಶದಲ್ಲೂ, ಅದರಲ್ಲೂ ಕರ್ನಾಟಕದಲ್ಲಿ. ನಮ್ಮ ಖಾದಿ ಪ್ರಭುಗಳು ಕೂರುವ, ರಾಜ್ಯದ ಹಿತಾಸಕ್ತಿಗೆಂದು ಪರಸ್ಪರ ಕಚ್ಚಾಡುವ ವಿಧಾನ ಸೌಧದ ಮೇಲೆ  ಸ್ವಾತಂತ್ರ್ಯ ದಿನಾಚರಣೆ ದಿನ ಏರಿತು ಹಾರಿತು ನೋಡು ನಮ್ಮ ಬಾವುಟ, ಅದೂ ತಲೆಕೆಳಗಾಗಿ. ತಮಾಷೆಯಲ್ಲ, ಸತ್ಯ ಘಟನೆ ಇದು. ಇದನ್ನು ಗಮನಿಸಿದ ಯಾರೋ ಒಬ್ಬರು ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಫೋನಾಯಿಸಿ ನಿಮಗೊಂದು ಬಿಸಿ ಬಿಸಿ ಮಸಾಲೆ ದೋಸೆಯಂಥ ಸುದ್ದಿ ಇದೆ ಬನ್ನಿ ಕ್ಯಾಮರಾದೊಂದಿಗೆ ಎಂದು ಆಹ್ವಾನ ಕಳಿಸಿದರು. ದೌಡಾಯಿಸಿ ಬಂದ ಪತ್ರಕರ್ತನಿಗೆ ತನ್ನ ಕಣ್ಣುಗಳನ್ನು ನಂಬಲಾಗಲಿಲ್ಲ. ಪ್ರಭುಗಳು ಕೂರುವ ಸ್ಥಳದಲ್ಲಿ ಪ್ರಮಾದವೇ, ಹ ಹಾ ಎನ್ನುತ್ತ ಮನ ಬಂದಂತೆ ಕ್ಲಿಕ್ಕಿಸಿ ಹಾಕಿ ಬಿಟ್ಟ ಮಾರನೆ ದಿನದ ಪತ್ರಿಕೆಯ ಮುಖ ಪುಟದಲ್ಲಿ. ಅದರ ಕೆಳಗೆ ಒಂದು ಶೀರ್ಷಿಕೆ. ಇದು ನಮ್ಮ ಬಾವುಟವೇ, ಸಂಶಯ ಬೇಡ, ಸ್ವಲ್ಪ ಉಲ್ಟಾ ಆಗಿದೆ ಅಷ್ಟೇ ಎಂದು. ಸರಕಾರೀ ನೌಕರನ ಕಛೇರಿಯಲ್ಲಿ ಇಂಥದ್ದು ನಡೆದಿದ್ದರೆ ಸಂಬಂಧಿಸಿ ದವನನ್ನು ಎತ್ತಂಗಡಿ ಮಾಡಬಹುದಿತ್ತು, ಎತ್ತಂಗಡಿ ಮಾಡುವವನ ಕಛೇರಿಯಲ್ಲೇ ಇಂಥ ಘಟನೆ ನಡೆದರೆ ಏನು ಶಿಕ್ಷೆ? ಭಾರತ ಖಂಡದ ಚಕ್ರವರ್ತಿ ಅಕ್ಬರನ ಗಡ್ಡ ಎಳೆದವನಿಗೆ ಸಿಕ್ಕ ಶಿಕ್ಷೆಯೇ?

  ಬಾವುಟ ಹಾರಿಸುವ ಬಗ್ಗೆ ಹೀಗೆಂದು ನಮ್ಮ ನಿಯಮ.  “the flag shall not be intentionally displayed with the ‘saffron’ down.”

ಹೀಗೊಬ್ಬ ಶ್ರೀಮಂತ….ಹೆಸರು Warren Buffet ಅಂತ

ಸೋಮಾರಿತನದಿಂದ ಈ ಲೇಖನವನ್ನು ಕನ್ನಡಕ್ಕೆ ಭಾಷಾಂತರಿಸದೆ ಮಾಜಿ ಯಜಮಾನರ ಭಾಷೆಯಲ್ಲೇ ಹಾಕಿದ್ದೇನೆ, ಕ್ಷಮಿಸಿ, ಆದರೆ ಕನ್ನಡಿಗರು ಕನ್ನಡದಷ್ಟೇ ಆಂಗ್ಲ ಭಾಷೆಯಲ್ಲೂ ನಿಪುಣರು ಅನ್ನೋ ಭರವಸೆಯೊಂದಿಗೆ,  

1. He bought his first share at age 11 and he now regrets that he started too late! Things were very cheap that time; Encourage your children to invest.

2. He bought a small farm at age 14 with saving from delivering newspapers. One could have bought many things with the little savings. Encourage your children to start some kind of business.

3. He still lives in the same small 3-bedroom house in mid-town Omaha, that he bought after he got married 50 years ago. He says that he has everything he needs in that house. His house does not have a wall or fence. Don’t buy more than what you really need and encourage your children to do and think the same.

4. He drives his own car everywhere and does not have a driver or security people around him. You are what you are.

5. He never travels by private jet, although he owns the world’s largest private jet company. Always think how you can accomplish things economically.

6. His company, Berkshire Hathaway, owns 63 companies. He writes only one letter each to the CEOs of these companies, giving them goals for the year. He never holds meetings or calls them on a regular basis. Assign the right people to the right jobs.

7. He has given his CEO’s only two rules. Rule No. 1: Do not lose any of your share holder’s money. Rule No. 2: Do not forget rule no. 1. Set goals and make sure people focus on them.

8. He does not socialized with the high society crowd. His past time after he gets home is to make himself some pop corn and watch television. Don’t try to show off. Just be yourself and do what you enjoy doing.

9. Warren Buffet does not carry a cellphone or has a computer on his desk.

10. Bill Gates, the world’s richest man met him for the first time only 5 years ago. Bill Gates did not thought he had anything in common with Warren Buffet, so he scheduled his meeting only for half hour. But when Gates met him, the meeting lasted for 10 hours and Bill Gates become a devotee of Warren Buffet. —

HIS ADVICE TO YOUNG PEOPLE:

“Stay away from credit cards (bank loans) and invest in yourself and remember: – Money doesn’t create man but it is the man who created money.

– Live your life as simple as you are. – Don’t do what others’ say, just listen to them, but do what you feel is good.

– Don’t go on brand name; just wear those things which you feel comfortable.

– Don’t waste your money on unnecessary things; just spend on them who are really in need.

-After all, its your life, then why give chance to others to rule our life?

ರೋಮ್ ನಗರ ಹೊತ್ತಿ ಉರಿಯುತ್ತಿರುವಾಗ

ರೋಮ್ ನಗರ ಹೊತ್ತಿ ಉರಿಯುತ್ತಿರುವಾಗ ರಾಜ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಆ ಕತೆ ಓಬೀರಾಯನ ಕಾಲದ್ದು. ಬನ್ನಿ ಇಲ್ಲೊಬ್ಬ ನೀರೋ ನ ಪರಿಚಯ ಮಾಡಿಕೊಳ್ಳಿ. ಇಡೀ ಸಮುದ್ರವನ್ನೇ ತನ್ನ ತೈಲದಿಂದ ಕಲುಷಿತಗೊಳಿಸಿ ಸಮುದ್ರ ಜೀವಿಗಳಿಗೆ ನೆಲೆಯಿಲ್ಲದಂತೆ ಮಾಡಿದ, ಸುಂದರ ಅಗಾಧ ನೀರನ್ನು ಭೀಭತ್ಸವಾಗಿಸಿ ತದನಂತರ ಏನೂ ಅರಿಯದವನಂತೆ ದೋಣಿ ವಿಹಾರಕ್ಕೆ ಹೊರಟ ತೈಲ ಸೋರಿಕೆಗೆ ಕಾರಣವಾದ ಕಂಪೆನಿಯ CEO Tony Hayward.  ಸ್ವಲ್ಪ ಯೋಚಿಸಿ ನೋಡಿ, ಈ ತೆರನಾದ ತೈಲ ಸೋರಿಕೆ ನಮ್ಮ ರಿಲಯನ್ಸ್ ನವರೋ ಅಥವಾ ಬೇರಾವುದಾದರೂ ಬಡ ರಾಷ್ಟದ ಕಂಪೆನಿಗಳು ಮಾಡಿದ್ದರೆ ಬಾಲಕ್ಕೆ ಕಿಚ್ಚು ಬಿದ್ದ ಹಾಗೆ ಆಡುತ್ತಿದ್ದರು ಸೂಟು ಬೂಟು ತೊಟ್ಟ ಬಿಳಿಯರು. ಇಷ್ಟೆಲ್ಲಾ ಅವಾಂತರ ಮಾಡಿದ ಹೇವರ್ಡ್ isle of Wight ಪ್ರವಾಸಿ ತಾಣಕ್ಕೆ ಹೋಗಿ ಅಲ್ಲೂ ಏನಾದರೂ ಕಪಿ ಚೇಷ್ಟೆ ಮಾಡಲು ಸಾಧ್ಯವೇ ಎಂದು ಲೆಕ್ಕ ಹಾಕುತ್ತಿರಬಹುದು ಎಂದು ನಿಮಗೆ ತೋಚಿದರೆ ಅಚ್ಚರಿಯಿಲ್ಲ. ದೂರದ ಮೆಕ್ಸಿಕೋ ಕೊಲ್ಲಿಯಲ್ಲಿ ರಾದ್ಧಾಂತ ಮಾಡಿ, ತಮ್ಮ ಸಂಗಡಿಗರ ಬದುಕನ್ನು ನರಕರೋದನವಾಗಿಸಿದ ಈ ಮಹಾತ್ಮನನ್ನು ದ್ವೀಪದ ಪ್ರಾಣಿ ಪಕ್ಷಿಗಳು ನೋಡಿ ಬದುಕಿದೆಯಾ ಬಡಜೀವವೇ ಎಂದು ಬೇರೆಲ್ಲಾದರೂ ತೊಲಗಿದರೆ ಅಚ್ಚರಿಯಿಲ್ಲ ಅನ್ನಿ. 

ಭೂಪಾಲ್ ನಲ್ಲಿ ಸಂಭವಿಸಿದ್ದೂ ಇದೇ ರೀತಿಯ ಒಂದು ಸೋರಿಕೆ ತಾನೇ? ಕೊಲ್ಲಿಯಲ್ಲಿ ತೈಲ ಸೋರಿಕೆ, ಭಾರತದಲ್ಲಿ ಅನಿಲ ಸೋರಿಕೆ. ವಿಷಾನಿಲವನ್ನು ಆಗಸಕ್ಕೆ ಬಿಟ್ಟು ಸಾವಿರಾರು ಜನ ರನ್ನು ಕೊಂದು, ಹುಟ್ಟಿದ, ಹುಟ್ಟುತ್ತಲೂ ಇರುವ ಮಕ್ಕಳು ಅಂಗ ವೈಕಲ್ಯದಿಂದ ನರಳುವಂತೆ ಮಾಡಿದ ವಿದೇಶೀ ಕಂಪೆನಿಯ ಅಧಿಕಾರಿಗಳನ್ನು ಪಂಚತಾರ ಒಟೇಲುಗಳಲ್ಲಿ ಕುಡಿಸಿ, ಕುಣಿಸಿ ಉಪಚರಿಸಿ ಅವರ ತಾಯ್ನಾಡಿಗೆ ಅತ್ಯಂತ ಸುರಕ್ಷ್ಟಿವಾಗಿ ತಲುಪಿಸಲಿಲ್ಲವೇ ನಾವು? ರೊಚ್ಚಿಗೆದ್ದ ಜನ ಎಲ್ಲಿ ಅವರ ಮೇಲೆ ಹರಿಹಾಯ್ದಾರೋ ಎಂದು ಶ್ವೇತಭವನದ ಆಣತಿಗೆ ವಿಧೇಯರಾಗಿ ನಮ್ಮ ಜನರ ಹಿತಾಸಕ್ತಿಗಳನ್ನು ಕಡೆಗಣಿಸಲಿಲ್ಲವೇ ನಾವು? ಇದೇ ಬಿಳಿ ಚರ್ಮದ ಸೊಗಸು, ಎಂಥವರೂ ಮರುಳಾಗುವರು ಇವರ ಮಾತಿನ ಮೋಡಿಗೆ. ಮರುಳಾಗದಿದ್ದರೆ ಗತಿ ನೆಟ್ಟಗಿರೋಲ್ಲ ಎಂದು ಸೌಮ್ಯವಾದ ಆದರೆ ಗಡುಸಾದ ಎಚ್ಚರಿಕೆ ಕೂಡಾ ಕೊಡಲು ಮರೆಯೋಲ್ಲ ಬಿಳಿ ಮೆದುಳು. environmanetal awareness, greenhouse effect, global warming, ಇವೆಲ್ಲಾ ಬಡ ಮತ್ತು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಸೀಮಿತ. ಮೆಕ್ಸಿಕೋ ಕೊಲ್ಲಿಯಲ್ಲಿ ನೀರಿನಡಿಯ ತೈಲ ಬಾವಿಯ ಸೋರಿಕೆಯಿಂದ ಉಂಟಾದ ಅನಾಹುತದಲ್ಲಿ ಪ್ರಕೃತಿಗೆ ಆದ ನಷ್ಟ ಇನ್ನೂ ತಿಳಿದು ಬಂದಿಲ್ಲ. ಕಳಪೆ ದರ್ಜೆಯ ಉಪಕರಣ ಗಳನ್ನು ಉಪಯೋಗಿಸಿದ್ದರಿಂದ ಈ ಅನಾಹುತ ಸಂಭವಿಸಿತು. ಪ್ರತೀ ದಿನ ೫೦೦೦ ಬ್ಯಾರಲ್ ಗಳಷ್ಟು ತೈಲ ಸೋರುತ್ತಿದೆಯಂತೆ. ಆದರೆ ಮತ್ತೊಂದು ವರದಿಯ ಪ್ರಕಾರ ಸೋರುತ್ತಿರುವುದು ೫೦೦೦ ಬ್ಯಾರಲ ಅಲ್ಲ, ಅದಕ್ಕಿಂತ ಹತ್ತು ಪಟ್ಟು.ಹಾಗೂ ಈ ಸೋರಿಕೆ ಮಾಡುತ್ತಿರುವ ಅನಾಹುತವೋ? ಅಂದಾಜಿಗೆ ಸಿಕ್ಕಿಲ್ಲ.  

ತೈಲ ಸೋರಿಕೆಗೆ ಕಾರಣವಾದ BP ಕಂಪೆನಿಯ ಮುಖ್ಯಸ್ಥ ಟೋನಿ ಹೇವರ್ಡ್ ಸಾರ್ವಜನಿಕವಾಗಿ ಅಮೆರಿಕೆಯ ಕಾಂಗ್ರೆಸ್ಸ್ ಎದುರು ಮುಖಭಂಗಿತನಾಗಬೇಕಾಯಿತು. ಕ್ರುದ್ಧರಾದ ಅಮೆರಿಕೆಯ ಸಂಸತ್ ಸದಸ್ಯರ ಎದುರು ಕಡಿಮೆಯೆಂದರೂ ಕೇಳಿದ ಪ್ರಶ್ನೆಗಳಿಗೆ ೬೦ ಸಲ  ನನಗೆ ಗೊತ್ತಿಲ್ಲ ಎಂದು ಉತ್ತರ ನೀಡಿ ಅವರನ್ನು ಮತ್ತಷ್ಟು ಉದ್ರೆಕಿಸಿದ. ಇವನ ನನಗೆ ಗೊತ್ತಿಲ್ಲ ಎಂದು ಹೇಳುವ ಚಾಳಿ ಕೇಳಿದ ಸದಸ್ಯನೋರ್ವ ಕಡೆ ಪಕ್ಷ ಇವತ್ತಿನ ದಿನ ಯಾವುದೆಂದು ತಿಳಿದಿದೆಯಾ ಎಂದು ಮೂದಲಿಸಿದ. ಇದೇ ರೀತಿಯ ಉಪಚಾರವನ್ನು ಭೂಪಾಲ್ ದುರಂತಕ್ಕೆ ಕಾರಣರಾದ ಅಧಿಕಾರಿಗಳಿಗೆ ಅಮೇರಿಕ ನೀಡಿತೇ ಎಂದು ಮಾತ್ರ ದಯಮಾಡಿ ಕೇಳಬೇಡಿ. ವಿಯೆಟ್ನಾಂ ಕದನದ ವೇಳೆ ಅಮಾಯಕರ ಮೇಲೆ agent orange ಎಂಬ ರಸಾಯನಿಕವನ್ನು ಉಪಯೋಗಿಸಿ ಸಾವಿರಾರು ಜನರನ್ನು  ಕೊಂದದ್ದು ಮಾತ್ರವಲ್ಲ ಇಂದಿಗೂ ಅಲ್ಲಿನ ವಾತಾವರಣದ ಮೇಲೆ ಈ ವಿಷಾನಿಲದ ಪ್ರಭಾವ ಕಾಣುತ್ತಿದೆ. ಆದರೆ ತನಗೆ ಬೇಕಾದ ಕಡೆ ಜಾಣ ಕಿವುಡನ್ನು ಪ್ರದರ್ಶಿಸುವ ಅಮೆರಿಕೆಗೆ ದೂರದ ತೋರಾ ಬೊರಾ ಗವಿಯಲ್ಲಿ ಬಿನ್ ಲಾಡೆನ್ ಒಂದಕ್ಕಿಂತ ಹೆಚ್ಚು ಬಾರಿ ಮೂತ್ರ ವಿಸರ್ಜನೆಗೆ ಹೋದರೆ ಅವನಿಗೆ ಮೂತ್ರಕೋಶದ ಖಾಯಿಲೆ ಇದೆ ಎಂದು ವಿಶ್ವಕ್ಕೆ ಡಂಗುರ ಸಾರಿಸಿ ಹೇಳುತ್ತದೆ. ಅಮೆರಿಕೆಯ ಈ ದ್ವಂದ್ವ ನೀತಿ ಯ ಬಗ್ಗೆ ಒಬ್ಬ ಓದುಗ ಹೇಳಿದ್ದು americans are sanctimonious hypocrites ಎಂದು. ಎಷ್ಟು ಸತ್ಯ ನೋಡಿ ಈ ಮಾತು.   

ಬಿಳಿಯ ಏನು ಮಾಡಿದರೂ ಅದು ಸಲೀಸಾಗಿ ಒಂದೆರಡು, ಛೆ, ಛೆ, ಹಾಗಾಗಬಾರದಿತ್ತು, ಹೀಗಾಗ ಬಾರದಿತ್ತು ಎಂದು ಮರುಕ ಪಟ್ಟು ಯಥಾ ಸ್ಥಿತಿ ತಮ್ಮ ಕಾರುಬಾರನ್ನು ನಡೆಸುವ ಚಾಳಿಗೆ ನಮ್ಮಲ್ಲಿ ಉತ್ತರವಿದೆಯೇ? 

ಚೀನಾದಲ್ಲಿ ಮಕ್ಕಳ ಕುಡಿಯುವ ಹಾಲಿನಲ್ಲಿ ಕಲಬೆರಕೆ ಮಾಡಿದವರಿಗೆ ಮರಣ ದಂಡನೆ, ಇಲ್ಲಿ ಕಡಲನ್ನೇ ಕಲುಷಿತ ಗೊಳಿಸಿದ CEO ಪ್ರವಾಸದಲ್ಲಿ, ಭೋಪಾಲದಲ್ಲಿ ಸಾವಿರಾರು ಜನರ ಸಾವಿಗೆ ಕಾರಣರಾದವರು ನಿಶ್ಚಿಂತರಾಗಿ ತಮ್ಮ ದೇಶದಲ್ಲಿ. ನ್ಯಾಯಕ್ಕೆ ರಾವಣನ ಥರಾ ಹತ್ತು ಅಥವಾ ಹೆಚ್ಚು ತಲೆಗಳು. Receiving end ನಲ್ಲಿರುವವನು ಬಡವನಾದರಂತೂ ತೀರಿತು, ತಲೆಗಳ ಮೇಲೆ ತಲೆಗಳು ನ್ಯಾಯದೇವಿಗೆ.  

ಕೆಳಗಿನ ಚಿತ್ರ ನೋಡಿ.  ಶುಭ್ರ ಬಿಳಿ ಬಣ್ಣದ ಈ ಪಕ್ಷಿ.. ತಿಳಿ ನೀಲಿ ಬಣ್ಣದ ಅಟ್ಲಾಂಟಿಕ್ ಕಡಲಿನ ಹಿನ್ನೀರಿನಲ್ಲಿ ಮುಳುಗೆದ್ದು ಸನತಸ ಪಡುತ್ತಿದ್ದ ಈ ಪಕ್ಷಿ ತನ್ನ ಮೈಯ್ಯನ್ನೆಲ್ಲಾ ಜಿಡ್ಡುಗಟ್ಟಿದ ತೈಲದಿಂದ ಕಡುಗಪ್ಪಾಗಿಸಿಕೊಂಡು, ನಮ್ಮನ್ನು ದೈನ್ಯತೆಯಿಂದ ಕೇಳುತ್ತಿದೆ ಯಾವ ಪಾಪಕ್ಕಾಗಿ ನನಗೀ ಶಿಕ್ಷೆ ಎಂದು?

ಅದಕ್ಕೆ ಉತ್ತರ bank of england ಮತ್ತು ಅಮೆರಿಕೆಯ treasury department ಗಳ ತಿಜೋರಿಗಳಲ್ಲಿ ಕಾಣಲು ಸಿಗಬಹುದು.     

 

ಅಪ್ಪನೊಂದಿಗೆ ಒಂದು ಸಂಜೆ

ಅಪ್ಪ ನಮ್ಮೊಂದಿಗೆ ಇರಲು ಒಂದು ತಿಂಗಳ ಬಿಡುವಿನ ಮೇಲೆ ಜೆಡ್ಡಾ ಬಂದಿದ್ದಾರೆ. ಪವಿತ್ರ ಕ್ಷೇತ್ರ ಮಕ್ಕಾ ಇಲ್ಲಿಂದ ೯೦ ಕಿಲೋಮೀಟರುಗಳಾದ್ದರಿಂದ ವಾರದಲ್ಲಿ ಮೂರು ಬಾರಿಯಾದರೂ ಭೇಟಿ ಕೊಡುತ್ತಾರೆ. ಸಾಮಾನ್ಯವಾಗಿ ಡ್ರೈವರ್ ಒಂದಿಗೆ ಅವರನ್ನು ಕಳಿಸುವ ನಾನು ಇಂದು ಆಫೀಸಿನಿಂದ ಸ್ವಲ್ಪ ಬೇಗ ಬಿಡುವು ಮಾಡಿಕೊಂಡು ಅಪ್ಪನನ್ನೂ ಮತ್ತು ಮಡದಿ ಮಕ್ಕಳ ಸಮೇತ ಮಕ್ಕಾದ ಕಡೆ ಹೊರಟೆ. ಸಂಜೆ ಐದಾದರೂ ಮರುಭೂಮಿಯ ಸೂರ್ಯ ಸುಲಭವಾಗಿ ಇರುಳಿಗೆ ಕೊರಳೊಡ್ಡುವುದಿಲ್ಲ. ಪ್ರಖರತೆ ಸ್ವಲ್ಪ ಜೋರೇ. ತನ್ನ ದಿನಚರಿಯ ಕೊನೆಯಲ್ಲೂ ಪೊಗರು ತೋರಿಸಿಯೇ ವಿರಮಿಸುವುದು. ಡ್ರೈವ್ ಮಾಡುತ್ತಾ ಪಪ್ಪ ರನ್ನು ಮಾತಿಗೆ ಎಳೆದೆ. ಮನೆಯಲ್ಲಿ ಹಿರಿಯರ ಇದೆಂಥಾ ಆಂಗ್ಲ ಸಂಸ್ಕಾರ ಎನ್ನುವ ಪ್ರತಿಭಟನೆಯ ನಡುವೆಯೂ ನಾವು ಅಪ್ಪ ಅಮ್ಮನನ್ನು ಪಪ್ಪ- ಮಮ್ಮಿ ಎಂದು ಕರೆಯುತ್ತೇವೆ. ಇದು ನಮ್ಮ ಚಿಕ್ಕಮ್ಮಂದಿರು ಹಾಕಿದ ಚಾಳಿ. ಹರಟುತ್ತಾ ನಾನು ಡ್ರೈವ್ ಮಾಡುತ್ತಿದ್ದ GMC Yukon ಗಾಡಿಯ ಡ್ಯಾಶ್ ಬೋರ್ಡ್ ೧೪೦ ಕೀ ಮೀ ಮುಳ್ಳನ್ನು ಮುಟ್ಟಿದ್ದನ್ನು ನೋಡಿ ಪಪ್ಪ ತಮ್ಮ ಸಂದು ಹೋದ ಕಾಲದ ಮುಳ್ಳನ್ನು ಹಿಂದಕ್ಕೆ ಓಡಿಸಿ ಸುಂದರ ನೆನಪಿನ ಸುರುಳಿ ಬಿಚ್ಚಿದರು.

ನನ್ನ ತಂದೆ ಕೇರಳದ ಕಾಸರಗೋಡಿನಿಂದ ಸುಮಾರು ೮ ಕೀ.ಮೀ ದೂರದಲ್ಲಿರುವ ಚೇರೂರ್ ಗ್ರಾಮದವರು. ಬದುಕಿನ ಸಂಗಾತಿಯಾಗಿ ಬಂತು ಕಡು ಬಡತನ. ಕಿತ್ತು ತಿನ್ನುವ ಬಡತನದ ಮಧ್ಯೆಯೂ ಪಪ್ಪ ಮ್ಯಾಟ್ರಿಕ್ ಮುಗಿಸಿದ್ದರು. ನಂತರ ಓದಲು ಹಣದ ಕೊರತೆಯಿಂದ ಶಾಲೆ ಬಿಟ್ಟು ವಿವಿಧ ಧಂಧೆ ಗೆ ಇಳಿದರು. ಚೇರೂರ್ ನ ಗುಡ್ಡದ ತಳದಲ್ಲಿ ಅವರ ಮನೆಯಂತೆ. ತನ್ನ ಅಣ್ಣನ ಸೈಕಲ್ ಅನ್ನು ಗುಡ್ಡದ ಮೇಲೆ ತಲುಪಿಸಬೇಕು ಪಪ್ಪ. ಕಿರಿಯರ ಮೇಲೆ ಹಿರಿಯರ ಸವಾರಿ. ದೂರವೆಲ್ಲಾದರೂ ಹೋಗಬೇಕೆಂದರೆ ಕಾಸರಗೋಡಿನವರೆಗೆ ಸೈಕಲ್ ಅಥವಾ ನಡೆದುಕೊಂಡು ಬಂದು ನಂತರ “ಚಾರ್ಕೋಲ್ ಬಸ್” ಹತ್ತಬೇಕು ಎಂದರು ಪಪ್ಪ. ಚಾರ್ಕೋಲ್ ಬಸ್ಸಾ, ಎಂದು ನಾನು ಅಚ್ಚರಿಯಿಂದ ಕೇಳಿದೆ. ಹೌದು ಕಲ್ಲಿದ್ದಲ ಬಸ್ಸು ಕಣೋ ಆಗಿನ ಕಾಲದಲ್ಲಿ ಎಂದರು ಪಪ್ಪ. ನನಗೆ ನಂಬಲಾಗಲಿಲ್ಲ. ಉಗಿ ಬಂಡಿಯನ್ನು ನೋಡಿ, ಹತ್ತಿ ಪರಿಚಯವಿದ್ದ ನನಗೆ ಕಲ್ಲಿದ್ದಲ ಬಸ್ಸು ವಿಚಿತ್ರವಾಗಿ ತೋರಿತು. ಬಸ್ಸಿನ ಬಾನೆಟ್ ಮೇಲೆ ಒಂದು ತೂತಿರುತ್ತದೆ. ಅದಕ್ಕೆ ಲಿವರ್ ಹಾಕಿ ಕಂಡಕ್ಟರ್ ಜೋರಾಗಿ ತಿರುಗಿಸುತ್ತಾನೆ ಗಿರ್ರ್, ಗಿರ್ರ್ ಅಂತ. ಈ ಗಿರ್ರ್, ಗಿರ್ರೂ, ಕಂಡಕ್ಟರನ ಏದುಸಿರೂ ಸೇರಿ ಬಸ್ಸು ಡುರ್ರ್, ಡುರ್ರ್, ಎಂದು ಸದ್ದು ಮಾಡುತ್ತಾ ಜೀವ ತುಂಬಿಕೊಳ್ಳುತ್ತದೆ. ವಾಹ್ ಎಂಥ ಸುಂದರ ಪ್ರಯಾಣವಾಗಿರಬಹುದು ಕಲ್ಲಿದ್ದಲಿನ ಬಸ್ಸಿನದು. ನನ್ನ ದೊಡ್ಡಪ್ಪ ಭದ್ರಾವತಿಯಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಅಲ್ಲಿಗೆ ಇನ್ನೂ ಚಿಕ್ಕ ಪ್ರಾಯದ ನನ್ನ ಅಪ್ಪ ಬಂದರು ಅಣ್ಣನ ಸಹಾಯಕ್ಕೆಂದು. ಭದ್ರಾವತಿಯಿಂದ ಕಾಸರಗೋಡಿಗೆ ಪ್ರಯಾಣ ಬೆಳೆಸುವುದು ಚಂದ್ರಯಾನದಂತೆ ಇರಬೇಕು ಎಂದು ತೋರಿತು ನನಗೆ ನನ್ನ ಅಪ್ಪನ ಅನುಭವ ಕೇಳಿ.  ಕೇರಳದಲ್ಲಿ ಅಕ್ಕಿ, ಸಕ್ಕರೆ ಹೀಗೆ ಅವಶ್ಯಕ ವಸ್ತುಗಳ ಅಭಾವವಂತೆ. ಅದರ ಮೇಲೆ ಕಾಳ ಧಂಧೆ ಬೇರೆ. ಮೂರು ಹೊತ್ತಿನ ಊಟ ಬಹಳಷ್ಟು ಜನರಿಗೆ ಅಪರೂಪ. ಬೆಳಿಗ್ಗೆ ತಿಂದರೆ ಮಧ್ಯಾಹ್ನ ಇಲ್ಲ ಕೂಳು. ಮಧ್ಯಾಹ್ನ ತಿಂದರೆ ರಾತ್ರಿ ಉಪವಾಸ. ನನ್ನ ಅಪ್ಪನ ಬಳಿ ನನ್ನ ದೊಡ್ಡಪ್ಪ ೧೦ ಕೆಜಿ ಸಕ್ಕರೆ ಕಳಿಸಿದರು ಊರಿಗೆಂದು. ಶಿವಮೊಗ್ಗದಿಂದ ಆಗುಂಬೆಗೆ ಒಂದು ವ್ಯಾನು ಹಿಡಿಯಬೇಕು. ಆಗುಂಬೆಯಿಂದ ಸೋಮೆಶ್ವರಕ್ಕೆ ಮತ್ತೊಂದು ವ್ಯಾನು. ಸೋಮೇಶ್ವರದಿಂದ ಮಂಗಳೂರಿಗೆ ಮತ್ತೊಂದು ವ್ಯಾನು. ಈ ವ್ಯವಸ್ಥೆ ಏಕೆ ಎಂದರೆ ಘಾಟಿ ಏರಿ ಇಳಿಯಲು ಬಯಲು ಸೀಮೆಯಲ್ಲಿ ಪಳಗಿದ ವಾಹನಗಳಿಗೆ ಸಾಧ್ಯವಿಲ್ಲವಂತೆ. ಒಂದು ರೀತಿಯ ghat specialist ಈ ಆಗುಂಬೆಯಿಂದ ಸೋಮೇಶ್ವರಕ್ಕೆ ಜನರನ್ನು ಕೊಂಡೊಯ್ಯುವ ವಾಹನಗಳು. ಆಗುಂಬೆ ತಲುಪಿದ ನಂತರ ಸೋಮೇಶ್ವರಕ್ಕೆ ಅಂದು ವ್ಯಾನಿಲ್ಲ. ಬೇರೆ ದಾರಿ ಕಾಣದೆ ಸಕ್ಕರೆ ಚೀಲವನ್ನು ಹೊತ್ತು ನಡೆದುಕೊಂಡು ಆಗುಂಬೆ ಇಳಿದು ಬಂದರಂತೆ. ಭದ್ರಾವತಿಯಲ್ಲಿ ದಿನಸಿ ಅಂಗಡಿ ಇಟ್ಟು ಕೊಂಡಿದ್ದ ದೊಡ್ಡಪ್ಪ ಎರಡನೇ ವಿಶ್ವ ಯುದ್ಧದ ಸಮಯ ಭಾರತೀಯ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರಂತೆ. ಯುದ್ಧ ಮುಗಿದ ನಂತರ ಬೇಕಾದರೆ ನಿವೃತ್ತಿ ತೆಗೆದು ಕೊಳ್ಳಬಹುದು ಎಂದು ಸರಕಾರ ಹೇಳಿದಾಗ ನಿವೃತ್ತಿ ತೆಗೆದುಕೊಂಡರಂತೆ. ಇದನ್ನು ಕೇಳಿ ನನಗೆ ರೋಮಾಂಚನ. ನೌಕಾ ಸೇನೆಯಲ್ಲಿ ನನ್ನ ದೊಡ್ಡಪ್ಪ. ಇನ್ನಷ್ಟು ತಿಳಿಯುವಾ ಎಂದರೆ ಆಗ ಅಪ್ಪ ತೀರಾ ಚಿಕ್ಕವರಾಗಿದ್ದರಿಂದ ಹೆಚ್ಚಿನ ವಿವರ ಸಿಗಲಿಲ್ಲ. ದೊಡ್ದಪ್ಪನನ್ನೇ ಕೇಳೋಣ ಎಂದರೆ ಅವರು ನಿಧನರಾಗಿ ೧೮ ವರ್ಷಗಳು.  

ಆಗಿನ ಕಾಲದಲ್ಲಿ ಕೆಲವರು ಹೆಚ್ಚಿನ ಸಂಪಾದನೆಗಾಗಿ ಮಲೇಷ್ಯಾ, ಶ್ರೀಲಂಕೆಗೆ ಹೋಗುತ್ತಿದ್ದರಂತೆ. ಮತ್ತೊಬ್ಬ ದೊಡ್ಡಪ್ಪ ಶ್ರೀಲಂಕೆಯಲ್ಲಿ ಇದ್ದರು. ಅವರ ಸಂಬಳ ತಿಂಗಳಿಗೆ ೫೦ ರೂಪಾಯಿ. ಸುಮಾರು ಅರವತ್ತು ವರ್ಷಗಳ ಹಿಂದೆ ಅದು ದೊಡ್ಡ ಮೊತ್ತ. ದೊಡ್ಡಪ್ಪ ಹಣ ಹೇಗೆ ಕಳಿಸುತ್ತಿದ್ದರು ಎಂದು ನಾನು ಕೇಳಿದಾಗ ಪೋಸ್ಟ್ ಮ್ಯಾನ್ ತರುತ್ತಿದ್ದ ಎಂದು ಉತ್ತರಿಸಿದ ಅಪ್ಪ ಮತ್ತೊಂದು ಸ್ವಾರಸ್ಯವನ್ನು ಹೇಳಿದರು. ಪೋಸ್ಟ್ ಮ್ಯಾನ್ ಬಂದ ಎಂದು ಜನರಿಗೆ ತಿಳಿಯುವುದು ಘಂಟೆಯ ಸದ್ದು ಕೇಳಿದಾಗಲಂತೆ. ಹೆಗಲ ಮೇಲೆ ಒಂದು ದೊಣ್ಣೆ, ಅದಕ್ಕೆ ಒಂದು ಘಂಟೆ ಸಿಕ್ಕಿಸಿ ಘಂಟೆ ಬಾರಿಸುತ್ತಾ ಬರುತ್ತಾನಂತೆ ಅಂಚೆಯವ ಕಾಸು ಕಾಗದ ವಿತರಿಸಲು. oh, how much I miss that rustic life. ಈಗಿನ ಕಾಲದ ಈ ಮೇಲು, ಸ್ಪ್ಯಾಮು, ಕ್ರೆಡಿಟ್ ಕಾರ್ಡ್ ಸ್ಕ್ಯಾಮು ಮತ್ತು ಆಗಿನ ಕಾಲದ ಘಂಟೆಯ ನಿನಾದ.

ಪಪ್ಪ ಇಷ್ಟು ಹೇಳಿ ಮುಗಿಸುತ್ತಿದ್ದಂತೆ ಮೇಲೆಲ್ಲಾ ಥಳಕು, ಒಳಗೆಲ್ಲಾ ಟೊಳಕನ್ನು ಇಟ್ಟುಕೊಂಡು ನಮ್ಮನ್ನು ಮರುಳು ಮಾಡುತಿರುವ ಆಧುನಿಕತೆ ಬಿಂಬಿಸುವ  ಗಗನ ಚುಂಬಿ ಕಟ್ಟಡಗಳು ಭವ್ಯವಾದ ಮಕ್ಕಾ ಮಸ್ಜಿದ್ ನ ನೀಳ ಗೋಪುರಗಳನ್ನು ಕುಬ್ಜವಾಗಿಸುವ ದೃಶ್ಯ ಗೋಚರಿಸಿ ಕಾರನ್ನು ಪಾರ್ಕಿಂಗ್ ಲಾಟ್ ನತ್ತ ತಿರುಗಿಸಿದೆ ಹಳೆ ಕಾಲದ ಗುಂಗಿನಲ್ಲಿ.            

ವಯಸ್ಸಾದವರೊಂದಿಗೆ ಮಾತನಾಡುತ್ತಿದ್ದರೆ ಕೆಲವರು ಹಳೆ ತಲೆಯವನ ಜೊತೆ ಏನ್ ಕೆಲಸ ನಡಿ ಎಂದು ಗದರಿಸಿ ಎಬ್ಬಿಸುವುದಿದೆ. ನನ್ನ ಪಾಲಿಗೆ ಹಿರಿಯರು ಮನೆಗೆ ಕಿರೀಟವಿದ್ದಂತೆ. ವಯಸ್ಸಾದವರೊಂದಿಗೆ ಸಮಯ ಕಳೆಯಲು ನನಗೆ ಬೇಸರ ಎನ್ನಿಸುವುದಿಲ್ಲ. ಮುಪ್ಪು ಏನು, ಹಾಗೂ ಆ ಮುಪ್ಪಿನ ಹಿಂದೆ ಇರುವ ಅನುಭವವನ್ನು ಸವಿಯಬೇಕೆಂದರೆ ವಯಸ್ಸಾದವರೊಂದಿಗೆ ಕಾಲ ಕಳೆಯವೇಕು. ಬದುಕಿನ ಸುವರ್ಣ ಕಾಲವನ್ನು, ಪ್ರೀತಿ, ನಿಸ್ವಾರ್ಥತೆ, ಸಹನೆ, ಸರಳತೆಯಿಂದ ಕೂಡಿದ ಬದುಕನ್ನು ಕಂಡ “ಮುದಿ ತಲೆಗಳು” ತಮ್ಮ ತಲೆಯ ಮೇಲಿನ ಕೂದಲು ಬೆಳ್ಳಿ ವರ್ಣಕ್ಕೆ ತಿರುಗಿದ ಕೂಡಲೇ ಸಮಾಜಕ್ಕೆ ಹೊರೆಯಾಗಿ ಬಿಡುವುದು ಖೇದಕರ. ನಿಮ್ಮ ಮನೆಯಲ್ಲಿ ಅಥವಾ ನೆರೆಹೊರೆಯಲ್ಲಿ ಹಿರಿಯರಿದ್ದಾರೆ ಅವರನ್ನು ಕಂಡು ಮಾತನಾಡಿಸಿ, ಏಕತ ಕಪೂರಳ ಸುಳ್ಳಿನ ಸರಮಾಲೆಯ ಸೀರಿಯಲ್ಲುಗಳಿಗಿಂತ ಸ್ವಾರಸ್ಯಕರ ಇವರು ಬದುಕಿದ ಬದುಕು. ನೌಕಾ ಸೇನೆಯಲ್ಲಿ ನನ್ನ ದೊಡ್ಡಪ್ಪ ಸೇವೆ ಸಲ್ಲಿಸಿದ್ದರು ಎಂದು ನನಗೆ ತಿಳಿದದ್ದು ಅವರು ಸತ್ತು ಹದಿನೆಂಟು ವರುಷಗಳ ನಂತರ, ಅದೇ ರೀತಿ ಸುಮಾರು ಅರವತ್ತು ವರುಷಗಳ ಮೊದಲು ಮೆಟ್ರಿಕ್ ಕಲಿತಿದ್ದ ನನ್ನ ಅಜ್ಜಿ ಸಹಾ ಕಳೆದ ವರುಷ ತೀರಿಕೊಂಡರು. ಇವರಿಬ್ಬರಿಂದ ನನಗೆ ತಿಳಿಯುವುದು ಬಹಳಷ್ಟಿತ್ತು, ಆದರೆ ಆಧುನಿಕ ಬದುಕಿನ ಬ್ಯಾನೆ ಆ ಅವಕಾಶವನ್ನು ನಿರಾಕರಿಸಿತು.   

ಕಲ್ಲಿದ್ದಲ ಬಸ್ಸಿನ ಬಗ್ಗೆ ಮತ್ತಷ್ಟು: ಕಲ್ಲಿದ್ದಲ ಬಸ್ಸುಗಳು ೧೯೫೦ ರವರೆಗೂ ಚೈನಾದಲ್ಲಿ ಉಪಯೋಗದಲ್ಲಿದ್ದವು ಮತ್ತು ಈಗಲೂ ಉತ್ತರ ಕೊರಿಯಾದಲ್ಲಿ ಕಲ್ಲಿದ್ದಲ ಬಸ್ಸುಗಳು ಓಡಾಡುತ್ತಿವೆ. ಎರಡನೇ ವಿಶ್ವ ಯುದ್ಧದ ನಂತರವೂ ಜಪಾನಿನಲ್ಲಿ ಇಂಥ ಬಸ್ಸುಗಳು ಓಡಾಡುತ್ತಿದ್ದವು. ೧೯೩೧ ರಲ್ಲಿ Tang Zhongming  ಕಲ್ಲಿದ್ದಲಿನಿಂದ ಓಡಾಡುವ ವಾಹನವನ್ನು ಚಲಾವಣೆಗೆ ತಂದನು.