ಜ್ಯೋತಿಷ್ಯ ವೈಜ್ಞಾನಿಕವೇ?

ಜ್ಯೋತಿಷ್ಯ ಶಾಸ್ತ್ರವನ್ನು “ಖೋಟಾ ಅಧ್ಯಯನ” (fake discipline) ಎಂದಿದ್ದಾರೆ ವಿಜ್ಞಾನಕ್ಕೆ ನೊಬೆಲ್ ಪ್ರಶಸ್ತಿ ವಿಜೇತರಾದ ವೆಂಕಟರಾಮನ್ ರಾಮಕೃಷ್ಣನ್ ಅವರು. ಚನ್ನೈ ನಗರದ ಭಾರತೀಯ ವಿದ್ಯಾ ಭವನದಲ್ಲಿ ಉಪನ್ಯಾಸ ನೀಡುತ್ತಿದ್ದ ಇವರು ಜ್ಯೋತಿಷ್ಯದೊಂದಿಗೆ ಹೋಮಿಯೋಪತಿ ವೈದ್ಯ ಶಾಸ್ತ್ರವನ್ನೂ ತರಾಟೆಗೆ ತೆಗೆದುಕೊಂಡರು. ಜ್ಯೋತಿಷ್ಯದ ಹೆಸರಿನಲ್ಲಿ ಜನರನ್ನು ವಂಚಿಸುವ ಪರಿಪಾಠ ಇಂದು ನಿನ್ನೆಯದಲ್ಲ. ನಮ್ಮ ದೇಶದಲ್ಲಿ ಜ್ಯೋತಿಷ್ಯ ಕ್ಷೇತ್ರ multi million dollar ಉದ್ದಿಮೆ ಎಂದು ಸುಲಭವಾಗಿ ಹೇಳಬಹುದು. unsuspecting ಜನರನ್ನು ಲೀಲಾ ಜಾಲವಾಗಿ ವಂಚಿಸಿ ಹಣ ಕೊಳ್ಳೆ ಹೊಡೆಯುವ ಇವರಿಗೆ ನಿಯಮದ ಯಾವ ತೊಡಕೂ ಇಲ್ಲ. ಭಾಜಪ ಸರಕಾರದಲ್ಲಿ ಮಾನವ ಸಂಪನ್ಮೂಲ ಖಾತೆ ಸಚಿವರಾಗಿದ್ದ ಮುರಳಿ ಮನೋಹರ್ ಜೋಶಿ ಜ್ಯೋತಿಷ್ಯವನ್ನು ವೈದಿಕ ವಿಜ್ಞಾನದ ಅಡಿಯಲ್ಲಿ ತಂದು ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ವಸ್ತುವನ್ನಾಗಿಸಿದ್ದರು. ಭಾರತದಲ್ಲಿ ಎಲ್ಲ ಸಮಾಜದ ಬಹಳಷ್ಟು ಜನ ನಂಬುವ ಜ್ಯೋತಿಷ್ಯದ ಬಗ್ಗೆ ಇಸ್ಲಾಮಿನ ನಿಲುವು ಅತ್ಯಂತ ಕಟುವಾದುದು. ಯಾವುದಾದರೂ ಜ್ಯೋತಿಷಿಯನ್ನು ಒಬ್ಬ ಕಂಡರೆ ಅವನ ನಲವತ್ತು ದಿನಗಳ ಕಾಲದ ಆರಾಧನೆ ನಷ್ಟ ಪಡುವುದು ಮಾತ್ರವಲ್ಲ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣತಿ ಪಡೆದವನು ಪಾಪದ ಹೊರೆಯನ್ನು ಹೊರುತ್ತಾನೆ ಎನ್ನುತ್ತದೆ ಇಸ್ಲಾಂ. ಜ್ಯೋತಿಷ್ಯದ ಕುರಿತ ಪವಿತ್ರ ಕುರಾನಿನ ಹೇಳಿಕೆ ಹೀಗಿದೆ.

“With Him are the keys to the unseen and none knows it except Him”.The Holy Qur’an, Chapter 6, Verse 59

“Say: None in the heavens or earth knows the unseen except Allah.”The Holy Qur’an, Chapter 27, Verse 65

ಮತ್ತೊಂದೆಡೆ ಪ್ರವಾದಿಗಳನ್ನು ಸಂಬೋಧಿಸುತ್ತಾ ಪವಿತ್ರ ಕುರಾನ್ ಹೀಗೆ ಹೇಳುತ್ತದೆ: “ಹೇಳಿ ಪ್ರವಾದಿಗಳೇ, ನನಗೆ ಅಗೊಚರವಾದದ್ದು ಕಾಣುವಂತಾಗಿದ್ದಿದ್ದರೆ ನಾನು ಒಳ್ಳೆಯದನ್ನೇ ಬಯಸುತ್ತಿದ್ದೆ, ಆದರೆ ನಾನು ಒಬ್ಬ ಸಂದೇಶವಾಹಕ ಮತ್ತು ವಿಶಾಸಿಗಳಿಗೆ ಶುಭ ವಾರ್ತೆ ತರುವವ ಮಾತ್ರ”

ಈ ರೀತಿಯ ಹೇಳಿಕೆಗಳು ಮತ್ತು ವಿಧ್ವಾಂಸರ ಅಭಿಪ್ರಾಯಗಳು ವ್ಯತಿರಿಕ್ತ ವಾಗಿದ್ದೂ ಬಹಳಷ್ಟು ಮುಸ್ಲಿಮರು ಹಸ್ತ ಸಾಮುದ್ರಿಕೆ, ಅದೂ ಇದೂ ಎಂದು ಅಲೆಯುವುದನ್ನು ನಾನು ಕಂಡಿದ್ದೇನೆ.

ಚಂದ್ರ ಮತ್ತಷ್ಟು ಹತ್ತಿರ, ಆಪ್ತ

ಚಂದ್ರ ಮತ್ತಷ್ಟು ಹತ್ತಿರ, ಆಪ್ತ. ೧೯ ವರ್ಷಗಳ ನಂತರ ಇಂದು ಚಂದ್ರ ನಮಗೆ ಹತ್ತಿರ ಬಂದಿದ್ದಾನಂತೆ. ಭೂವಾಸಿಗಳಲ್ಲಿ ಅದ್ಯಾವ ಹೆಗ್ಗಳಿಕೆ ನೋಡಿ ಬಂದನೋ ಇನ್ನಷ್ಟು ಸಮೀಪ ನನಗೆ ತಿಳೀದು, ಆದರೆ ಸೂಪರ್ ಮೂನ್, ಮೆಗಾ ಮೂನ್, ಡಬ್ಬಲ್ ಮೂನ್ ಹಾಗೆ ಹೀಗೆ ಎಂದು ಕೆಲದಿನಗಳಿಂದ ಕೇಳುತ್ತಾ ಇದ್ದುದರಿಂದ ಸಂಜೆಯ ದೂರದ ನೆಂಟನಿಗಾಗಿ ಕಾದು ಕೂತೆ. ಮಧ್ಯಾಹ್ನದ ಉರಿ ಸೂರ್ಯ, ಸಂಜೆಯಾಗುತ್ತಾ ಬೆಳ್ಳಿ ಬಣ್ಣ ಪಡೆದುಕೊಂಡು, ಸ್ವಲ್ಪ ನಂತರ ತನ್ನ ಮೈಯ್ಯನ್ನು ಕಿತ್ತಳೆ ಬಣ್ಣಕ್ಕೆ ಬದಲಿಸಿಕೊಂಡು ತನ್ನ ವಧು ಕೆಂಪು ಸಮುದ್ರದ ತೆಕ್ಕೆಗೆ ಜಾರಿದ ಕೆಲ ಹೊತ್ತಿನಲ್ಲೇ ಕಳ್ಳ ನಗೆ ಬೀರುತ್ತಾ ಬಂದ ನಮ್ಮ ಮಾಮ. ಚಂದಾಮಾಮ. ಅರೆ, ಇದೇನಿದು,  ೧೯ ವರ್ಷಗಳ ನಂತರ ಹತ್ತಿರ ಬಂದ ಈ ಮಾಮ ಥೇಟ್ ಹಿಂದಿನ ಮಾಮನ ಥರವೇ ಇದ್ದ. ಮುಖದಲ್ಲಿ ಸ್ವಲ್ಪ ಹೆಚ್ಚು ಮಾಂಸ ತುಂಬಿಕೊಂಡು ನಳನಳಿಸುತ್ತಾ ಬರಬಹುದು ಎಂದೆಣಿಸಿದ್ದ ನನಗೆ ಕಾಣಲು ಸಿಕ್ಕಿದ್ದು ಅದೇ age old ಮಾಮ. (ಅಂಕಲ್ ಅಂತ ಅವನನ್ನು ಕರೆಯಲು ನನಗೆ ಇಷ್ಟವಿಲ್ಲ. ಬಸ್ ಸ್ಟಾಂಡ್ ನಲ್ಲಿ ಕೈ ಚಾಚಿ ಬೇಡುವವನೂ, ಬಸ್ಸಿನ ಸೀಟಿಗಾಗಿ ಜಗಳ ಕಾಯುವವರೆಲ್ಲಾ ಅಂಕಲ್ ಗಳೇ ಆದ್ದರಿಂದ ನಮ್ಮ ಚಂದಾ ಮಾಮನಿಗೆ ಆಂಗ್ಲ ಪ್ರಯೋಗ ಬೇಡ.). ನನ್ನ ಬರಿಗಣ್ಣಿಗೆ ಇವನು ಅದೇ ಗಾತ್ರದ ಮಾಮ. ಮುಖದ ತುಂಬಾ freckles ಇದ್ದರೂ ತನ್ನ ಕಾಂತಿಯನ್ನು ತನ್ನನ್ನು ಸುತ್ತುವರೆದ ಮೋಡಗಳಿಗೂ ನೀಡುತ್ತಾ aloof ಆಗಿ ಆಗಸಕ್ಕೆ ಅಂಟಿ ಕೊಂಡ ಮಾಮ. ಬಹುಶಃ ಇವನ ನಿಖರವಾದ ಅಳತೆಗೆ ಸ್ಟೆತಾಸ್ಕೋಪು, ಪೆರಿಸ್ಕೋಪು, ಟೆಲಿಸ್ಕೋಪು ಇವ್ಯಾವುದೂ ನನ್ನಲ್ಲಿಲ್ಲದೆ ಇರೋದ್ರಿಂದ ನನಗೆ ಹಳೇ ಮಾಮನ ದರ್ಶನದ ಭಾಗ್ಯ ಮಾತ್ರಾ.  ಸೂಪರ್ ಮೂನ್ ವಿದ್ಯಮಾನದಲ್ಲಿ ಸೂರ್ಯ , ಭೂಮಿ ಮತ್ತು ಚಂದಿರರು ಒಂದೇ ರೇಖೆಯಲ್ಲಿ ಇದ್ದು ಚಂದ್ರ ಮತ್ತು ಭೂಮಿಗಳು ಸ್ವಲ್ಪ ಸಮೀಪಕ್ಕೆ ಬರುತ್ತವಂತೆ. ಸೂಪರ್ ಮೂನ್ ಕಾರಣ, ಪ್ರವಾಹ, ಭೂಕಂಪ, ಜ್ವಾಲಾ ಮುಖಿ, ಬಿರುಗಾಳಿಗಳೂ ಸಂಭವಿಸಬಹುದಂತೆ. ಬ್ರೇಕಿಂಗ್ ನ್ಯೂಸ್ ನಲ್ಲಿ ಇದುವರೆಗೂ ಯಾವುದೇ ಅಹಿತಕರ ನೈಸರ್ಗಿಕ ಅವಘಡ ಸಂಭವಿಸಿಲ್ಲ.

ಒಂದೇ ಒಂದು ಅವಘಡ ಏನೆಂದರೆ ಕಳೆದ ಹಲವು “ವಿಶ್ವಕಪ್ ಪಂದ್ಯಾವಳಿ” ಯ ೩೫ ಪಂದ್ಯಗಳಲ್ಲಿ ಮೊಟ್ಟ ಮೊದಲ ಬಾರಿಗೆ ಆಸ್ಟ್ರೇಲಿಯಾ ಸೋಲನ್ನು ಕಂಡಿದ್ದು ಅದೂ ದುರ್ಬಲ, ಪಾಕ್ ತಂಡದ ಕೈಯ್ಯಲ್ಲಿ.     

ಹೀಗೇ ಸುಮ್ಮನೆ: ಸೂಪರ್ ಮೂನ್ ಎನ್ನುವ ಪದವನ್ನು ಶುರು ಮಾಡಿದ್ದು HOROSCOPE ಪತ್ರಿಕೆಯ ಜ್ಯೋತಿಷ್ಯಕಾರ Richard Nolle.