ರಾಜನ್ ಬಾಲ ಅವರ ಅಕಾಲಿಕ ಮರಣ ಕ್ರಿಕೆಟ್ ಪ್ರೇಮಿಗಳಿಗೆ ದುಃಖಕರ ಸುದ್ದಿ. ಕ್ರಿಕೆಟ್ನಷ್ಟೇ ಮನೋಹರ ಅವರ ವರ್ಣನಾ ಶೈಲಿ. ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಬರೆಯುತ್ತಿದ್ದ ಅವರು ಕ್ರಿಕೆಟ್ ಆಟವನ್ನು ಮನೋಜ್ಞವಾಗಿ ವರ್ಣಿಸಿ ನಮ್ಮನ್ನು ರಂಜಿಸುತ್ತಿದ್ದರು. ಭಾರತ ೧೯೮೩ ರ prudential world cup ಗೆದ್ದ ಹೊಸತು. ಕ್ರಿಕೆಟ್ ವಿಶ್ವವೇ ದಿಗ್ಭ್ರಾಂತವಾಗಿಸಿದ ಗೆಲುವು ಭಾರತದ್ದು. ಫೈನಲ್ ಪಂದ್ಯದಲ್ಲಿ ಬಲಿಷ್ಟ ವೆಸ್ಟ್ ಇಂಡೀಸ್ ತಂಡವನ್ನು ೪೩ ರನ್ನುಗಳಿಂದ ಸೋಲಿಸಿದ ಭಾರತ ಹೊಸ world champion. ಈ ಸೋಲಿನಿಂದ ಕಂಗೆಟ್ಟ ವೆಸ್ಟ್ ಇಂಡೀಸ್ ಭಾರತಕ್ಕೆ ತಕ್ಕ ಪಾಠ ಕಲಿಸಲು ಭಾರತ ಪ್ರಯಾಣ ಮಾಡಿ ೬ ಟೆಸ್ಟ್ ಮತ್ತು ೬ ಏಕ ದಿನ ಪಂದ್ಯಗಳಲ್ಲಿ ಭಾರತವನ್ನು ಹಿಗ್ಗಾ ಮುಗ್ಗಾ ಬಡಿದು ತೃಪ್ತಿ ಪಟ್ಟುಕೊಂಡಿತು. ಈ ಸರಣಿಯ ಪ್ರಥಮ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ. ವೆಸ್ಟ್ ಇಂಡೀಸ್ ನ ಮಾರಕ ವೇಗಿ ಮಾಲ್ಕಂ ಮಾರ್ಷಲ್ ಚೊಚ್ಚಲ ಓವರಿನ ೨ ಚೆಂಡುಗಳಲ್ಲಿ ಭಾರತದ ದಾಂಡಿಗರನ್ನು ಉರುಳಿಸಿ ಭಾರತ ಚೇತರಿಸಿಕೊಳ್ಳದಂತೆ ಮಾಡಿದರು. ದಿನದ ಆಟ ಮುಗಿದಾಗ ಭಾರತದ ಸ್ಥಿತಿ ಶೋಚನೀಯ. ಮಾರನೆ ದಿನ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ರಾಜನ್ ಬಾಲ ಮಾರ್ಷಲ್ ಅವರ ಬೌಲಿಂಗ್ ಬಣ್ಣಿಸಿದ್ದು ಹೀಗೆ:
MARSHAL LAW IN KANPUR
ಈ ವರದಿ ಬರೆದು ೨೬ ವರ್ಷಗಳು ಸಂದರೂ ರಾಜನ್ ಬಾಲ ಎಂದ ಕೂಡಲೇ MARSHAL LAW ನೆನಪಾಗುತ್ತದೆ.