ಕುಖ್ಯಾತ ಕಾಡುಗಳ್ಳ ಮತ್ತು ಆನೆ ಹಂತಕ ವೀರಪ್ಪನ ಹತ್ಯೆಯೊಂದಿಗೆ ಕಾನನದೊಳಗಿನ ಮಾನವನ ಆಕ್ರಂದನಕ್ಕೆ ತೆರೆ ಬಿತ್ತು. ಆನೆಗಳಿಗೂ, ವೃಕ್ಷಗಳಿಗೂ, ಪೊಲೀಸರಿಗೂ, ಜನಸಾಮಾನ್ಯರಿಗೂ ಸಿಂಹ ಸ್ವಪ್ನವಾಗಿದ್ದು ವ್ಯವಸ್ಥೆ ನಪುಂಸಕವೇನೋ ಎಂದು ಅನುಮಾನ ಹುಟ್ಟುವಷ್ಟು ಎತ್ತರ ಬೆಳೆದಿದ್ದ ಆಗಾಧ ಮೀಸೆಯ ಸಣ್ಣ ಮನುಷ್ಯ ಕೊನೆಗೂ ಬಲಿಯಾದ ಪೋಲೀಸರ ಗುಂಡಿಗೆ. ಅವನ ಪುತ್ರಿಗೆ IAS ಮಾಡುವ ಬಯಕೆಯಂತೆ. IAS, IPS ಅದ್ಧಿಕಾರಿಗಳ ನಿದ್ದೆಗೆಡಿಸಿದ್ದ ಈ ಅಪ್ಪನ ಮಗಳಿಗೆ ಅಧಿಕಾರಿಯಾಗುವ ಆಸೆ. ಅಷ್ಟು ಮಾತ್ರ ಅಲ್ಲ ತನ್ನ ತಂದೆ ಇವಳಿಗೆ ಆದರ್ಶ ವ್ಯಕ್ತಿಯಂತೆ. ಈ ಆದರ್ಶ ವ್ಯಕ್ತಿಯನ್ನು ಈಕೆ ತನ್ನ ಬದುಕಿನಲ್ಲಿ ಕಂಡಿದ್ದು ಎರಡೇ ಎರಡು ಸಲ. ಅದೆಂಥ ಪ್ರಭಾವ ಬೀರಿರಬೇಕು ಅವಳ ತಂದೆ?
ಇವಳ ಆದರ್ಶದ ವ್ಯಕ್ತಿಯ ಮಾತ ಕೇಳಿ ಅಳಿದುಳಿದ ಆನೆಗಳು ಈಗ ಕಾಡು ಬಿಟ್ಟು ಓಡಿದರೆ ಅಚ್ಚರಿಯಂತೂ ಇಲ್ಲ ಅನ್ನಿ.